Homeಕರ್ನಾಟಕರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ಸಿಂಧನೂರಿನಲ್ಲಿಯು ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಟ್ರಾಕ್ಟರ್ ಎಳೆದು ಪ್ರತಿಭಟನಾ ರ್‍ಯಾಲಿ ನಡೆಸಲು ನಿರ್ಧರಿಸಲಾಗಿದೆ

- Advertisement -
- Advertisement -

’ಆನೆಗೆ ಅಂಕುಶ ಇರುವಂತೆ ಆಡಳಿತಗಾರರನ್ನು ಎಚ್ಚರಿಸಲು ಹೋರಾಟ ಎನ್ನುವ ಅಂಕುಶ ಬೇಕೇ ಬೇಕು’ ಎಂದು ಬೆಲೆ ಏರಿಕೆ ವಿರುದ್ಧ ಮಾರ್ಚ್ 6ರಂದು ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರಿನ ಸ್ಪಂದನ ಭವನದಲ್ಲಿ ಭಾನುವಾರ (ಫೆ.28) ಬೆಳಿಗ್ಗೆ ವಿವಿಧ ವಿಭಾಗಗಳ ಜನರು ಈ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಮಾರ್ಚ್ 6ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

SUCI(C) ಪಕ್ಷದ ರಾಯಚೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ಚಂದ್ರಗಿರೀಶ್ ಮಾತನಾಡಿ, ’ಅಚ್ಛೇ ದಿನ ತರುತ್ತೇವೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜನಗಳ ಜೇಬಿಗೆ ಕೈಹಾಕಿ ಲೂಟಿ ಮಾಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಅತೀ ಹೆಚ್ಚು ತೆರಿಗೆ ಹಾಕಿ, ಬೆಲೆ ಏರಿಕೆ ಮಾಡಿದೆ. ಜನರು ಒಂದೊತ್ತಿನ ಊಟಕ್ಕೆ ಪರದಾಡುವಂತಾಗಿದೆ’ ಎಂದರು.

ಮುಂದುವರಿದು, ’ಅಂಬಾನಿ, ಅದಾನಿ, ಟಾಟಾ, ಬಿರ್ಲಾ ಅಂತಹ ಕಾರ್ಫೊರೇಟರ್‌ಗಳ ಸಂಪತ್ತಿನ ಹೆಚ್ಚಳವಾಗುತ್ತಿದೆ‌. ಜನರು ದರಿದ್ರರಾಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಸರ್ಕಾರಗಳು ಬಂಡವಾಳಗಾರರ ಸೇವೆಗೆ ನಿಂತಿವೆ. ಇದರ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ದಾರಿ ಇಲ್ಲವಾಗಿದೆ. ಸಣ್ಣಪುಟ್ಟ ಹೋರಾಟಗಳಿಗೆ ಇವರು ಮಣಿಯುವುದಿಲ್ಲ. ಹಾಗಾಗಿ ಜನರು ಬೃಹತ್ ಹೋರಾಟಕ್ಕೆ ತಯಾರಾಗಬೇಕಾದ ಅವಶ್ಯಕತೆ ಇದೆ. ಈಗ ಅಂತಹ ಸಮಯ ಬಂದಿದೆ. ಪ್ರತಿಯೊಬ್ಬರು ಆ ದಿಕ್ಕಿನಲ್ಲಿ ಕೆಲಸ ಮಾಡಲು ತಯಾರಾಗಬೇಕು’ ಎಂದರು.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ಸಭೆಯ ಅಧ್ಯಕ್ಷತೆ ವಹಿಸಿದ್ದ AIUTUC ಜಿಲ್ಲಾಧ್ಯಕ್ಷ ವೀರೇಶ್ ಎನ್.ಎಸ್ ಮಾತನಾಡಿ, ’ನಿರುದ್ಯೋಗ, ಬಡತನ, ಬೆಲೆಯೇರಿಕೆ ಜನಗಳ ದಿನನಿತ್ಯ ಸಮಸ್ಯೆಗಳಾಗಿವೆ. ಕೊರೊನಾ ಕಾಲದಲ್ಲಿ ಜನಗಳಲ್ಲಿ ನೆರವಿಗೆ ಬರಬೇಕಾದ ಸರಕಾರ ಬಂಡವಾಳಗಾರರ ಸೇವೆಗೆ ನಿಂತಿದೆ. ಈ ಸಮಯದಲ್ಲಿ ರೈತ- ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಗಳು ಒಂದುಗೂಡಿ ಹೋರಾಟಕ್ಕೆ ಮುಂದಾಗಬೇಕು’ ಎಂದರು.

’ಜನಕಲ್ಯಾಣ ಯೋಜನೆಗಳಿಗೆ ಬೊಕ್ಕಸದಲ್ಲಿ ಹಣವಿಲ್ಲವೆಂದು ಹೇಳುವ ಸರ್ಕಾರಗಳು ಮಂತ್ರಿಗಳು ಐಷಾರಾಮಿ ಕಾರುಗಳನ್ನು ಖರೀದಿಸಲು ಹಣ ಹೆಚ್ಚಳ ಮಾಡಿದೆ. ತಿರುಪತಿಯಲ್ಲಿ ಬೃಹತ್ ವಸತಿ ಗೃಹ ಕಟ್ಟಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆದ್ದರಿಂದ ಈ ಬೆಲೆ ಏರಿಕೆ ವಿರುದ್ಧ ಜನರ ನಡುವೆ ವ್ಯಾಪಕ ಪ್ರಚಾರ ಮಾಡಿ ಮಾರ್ಚ್ 6ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಡೆಮಾಕ್ರಟಿಕ್ ಯೂತ್ ಆರ್ಗನೈಸೆಷನ್ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಹಿರಿಯ ನಾಗರಿಕರಾದ ಖಂಡೇರಾವ್, ದಯಾನಂದ, ಅಣ್ಣಪ್ಪ, ಫ್ರಾಂಕ್ಲಿನ್ ರಾಜು, ನಿಸಾರ್, ನೂರ್, ಜಮಾಲುದ್ದಿನ್, ರಾಮಣ್ಣ ಎಂ, ಜಾವೇದ್, ಭೀಮಣ್ಣ, ಪ್ರಮೋದ್ ಕುಮಾರ್, ರವೂಫ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

May be an image of 5 people, outdoors and text that says "ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಟಾ ಕ ರ‍ಗೆ ಹಗ ಕಟ್ಟಿ பவி ಪ ಎಳೆಯುವ ಮೂಲಕ ಪ್ರತಿಭಟನಾ ಮೆರವಣಿಗೆ TRAKSTER 536 ದಿನಾಂಕ: 1.3.2021 ಬೆಳಿಗ್ಗೆ 10.30 ಗಂಟೆಗೆ ಸ್ಥಳ: ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ... ಪ್ರಗತಪರ ಸಂಘಟನಗಳ ಒಕ್ಕೂಟ ಸಿಂಧನೂರು"

ಇತ್ತ ಸಿಂಧನೂರಿನಲ್ಲಿಯೂ ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಸಿಂಧನೂರಿನ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...