Homeಮುಖಪುಟ"ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು": ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

“ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

’ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪೋಸ್ಟ್. ನಾನು ಇದನ್ನು ರಚಿಸಲಿಲ್ಲ, ಇದು ನನ್ನ ಹೇಳಿಕೆಯಲ್ಲ. ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ’- ಬಾಬುಲ್ ಸುಪ್ರಿಯೋ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ಘೋಷಣೆಯಾದ “ಬಂಗಾಳವು ತನ್ನ ಮಗಳನ್ನು ಬಯಸಿದೆ” ಎಂಬುದನ್ನು ಕೀಳುಮಟ್ಟದಲ್ಲಿ ಗೇಲಿ ಮಾಡಿ ಟ್ವೀಟ್ (ಈಗ ಅಳಿಸಲಾಗಿದೆ) ಮಾಡಿದ್ದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ತನ್ನನ್ನು ಟೀಕಿಸಿದವರ ವಿರುದ್ಧ ಇಂದು (ಭಾನುವಾರ) ವಾಗ್ದಾಳಿ ನಡೆಸಿದ್ದಾರೆ.

“ಬಂಗಾಳವು ತನ್ನ ಮಗಳನ್ನು ಬಯಸಿದೆ” ಘೋಷಣೆ ಗೇಲಿ ಮಾಡಿದ ಟ್ವೀಟ್‌ನಲ್ಲಿ ಮಮತಾ ಬ್ಯಾನರ್ಜಿ ಅವರ ಫೋಟೋ ಇದ್ದು, “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು” ಎಂದು ಹೇಳುವ ಗೃಹ ಸಚಿವ ಅಮಿತ್ ಶಾ ಅವರ ಚಿತ್ರವಿದೆ. ಬಬುಲ್ ಸುಪ್ರಿಯೋ ಅದನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡು, “ಹೌದು, ನಾವು ಅವರನ್ನು ಈ ಬಾರಿ ಕಳುಹಿಸಿ ಕೊಡುತ್ತೇವೆ’ ಎಂದು ಬರೆದಿದ್ದರು.

ಟಿಎಂಸಿ ಸೇರಿದಂತೆ ಹಲವು ಪಕ್ಷಗಳ ನಾಯಕರು, ಸಾಮಾಜಿಕ ಹೋರಾಟಗಾರರು, ಇದು ಪುರುಷತ್ವದ ಅಹಂಕಾರ, ಮಹಿಳೆಯರನ್ನು ಕೀಳಾಗಿ ನೋಡುವ ಮನುವಾದ ಎಂದೆಲ್ಲ ಟೀಕಿಸಿದ ನಂತರ ಸುಪ್ರಿಯೋ ಟ್ವೀಟ್ ಡಿಲೀಟ್ ಮಾಡಿದ್ದರು.

ಇದನ್ನೂ ಓದಿ: ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಟ್ವಿಟರ್ ಬಿಡುತ್ತೇನೆ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

ಈ ಟ್ವೀಟ್‌ಗೆ ’ಶೇಮ್’ ಎಂದು ಪ್ರತಿಕ್ರಿಯಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ವಿರುದ್ಧ ಇಂದು(ಭಾನುವಾರ) ಸುಪ್ರಿಯೋ ಹರಿ ಹಾಯ್ದಿದ್ದಾರೆ.
ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಸುಪ್ರಿಯೋ, “ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪೋಸ್ಟ್… ನಾನು ಇದನ್ನು ರಚಿಸಲಿಲ್ಲ ಅಥವಾ ಇದು ನನ್ನ ಹೇಳಿಕೆಯಲ್ಲ. ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಆದ್ದರಿಂದ ಪೂರ್ವಗ್ರಹದ ಕುರಿತು ನನಗೆ ಯಾವುದೇ ’ರಾಜಕೀಯ’ ಪಕ್ಷದ ಬೋಧನೆ ಅಗತ್ಯವಿಲ್ಲ ಎಂದಿದ್ದಾರೆ.

“ನಿಮ್ಮಲ್ಲಿ ಹೆಚ್ಚಿನವರು ನನ್ನ ರಾಜಕೀಯ ಜೀವನವನ್ನು ಬಲ್ಲಿರಿ ಮತ್ತು ನಾನು ಏನು ಹೇಳುತ್ತೇನೆ ಮತ್ತು ನನ್ನ ಮನಸ್ಥಿತಿ ಏನು ಎಂದು ನಿಮಗೆ ತಿಳಿದಿರಬೇಕು .. ನಾವೆಲ್ಲರೂ ನಮ್ಮ ಖಾತೆಗಳನ್ನು ನಿರ್ವಹಿಸುವ ಸಾಮಾಜಿಕ ಮಾಧ್ಯಮ ತಂಡಗಳನ್ನು ಹೊಂದಿದ್ದೇವೆ. ಹೌದು, ಕೆಲವು ಪೋಸ್ಟ್‌ಗಳು ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತವೆ. ಇದನ್ನು ಒಪ್ಪಿದ್ದೇನೆ. ’ಸ್ಪಷ್ಟ ರಾಜಕೀಯ ಉದ್ದೇಶ’ಗಳೊಂದಿಗೆ ಸಂಪೂರ್ಣವಾಗಿ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದಿದ್ದಾರೆ.

ಜೊತೆಗೆ, ’ಟ್ವೀಟ್ ವಿವಾದವನ್ನು ಸೃಷ್ಟಿಸಿದೆ ಎಂದು ನಾನು ಒಪ್ಪುತ್ತೇನೆ. ಈಗ ನನ್ನನ್ನು ನಾನು ಕೊಂದುಕೊಳ್ಳಬೇಕೆ..? ನನಗೆ ಕೆಲವು ಸಲಹೆಗಳನ್ನು ನೀಡಿ” ಎಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಕೇಳಿದ್ದಾರೆ.

ಮಾರ್ಚ್ 27ರಿಂದ ಪಶ್ಚಿಮ ಬಂಗಾಳದಲ್ಲಿ ಸುಧೀರ್ಘ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್‌ ಅನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಹಲವು ತಂತ್ರಗಳನ್ನು ಅನುಸರಿಸುತ್ತಿದೆ. ಬಂಗಾಳದಲ್ಲಿ ಅಧಿಕಾರದ ಗದ್ದುಗೆಯೇರಲು ಬಿಜೆಪಿಯ ಘಟಾನುಘಟಿ ನಾಯಕರು ಹಲವಾರು ರ್‍ಯಾಲಿಗಳನ್ನು ನಡೆಸಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...