Homeಮುಖಪುಟ'ಬಿಜೆಪಿ ತ್ಯಜಿಸಿ-ಟಿಎಂಸಿ ಸೋಲಿಸಿ' - ಪ.ಬಂಗಾಳದ ಎಡಪಕ್ಷಗಳ ಬೃಹತ್ ರ್‍ಯಾಲಿಯಲ್ಲಿ 10 ಲಕ್ಷ ಜನ!

‘ಬಿಜೆಪಿ ತ್ಯಜಿಸಿ-ಟಿಎಂಸಿ ಸೋಲಿಸಿ’ – ಪ.ಬಂಗಾಳದ ಎಡಪಕ್ಷಗಳ ಬೃಹತ್ ರ್‍ಯಾಲಿಯಲ್ಲಿ 10 ಲಕ್ಷ ಜನ!

ಎಡ-ಕಾಂಗ್ರೆಸ್ ಪಕ್ಷಗಳು ಮತ್ತು ಇತರ ಜಾತ್ಯತೀತ ಶಕ್ತಿಗಳ ಮಹಾ ಮೈತ್ರಿಕೂಟವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಕೇವಲ ಎರಡು ಆಯ್ಕೆಗಳ ಸ್ಪರ್ಧೆಯಾಗಲು ಬಿಡುವುದಿಲ್ಲ- ಅಧಿರ್ ರಂಜನ್ ಚೌಧರಿ

- Advertisement -
- Advertisement -

ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪಕ್ಷಗಳೂ ಸಹ ತಮ್ಮ ಶಕ್ತಿ ಮೀರಿ ಪ್ರಚಾರ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಲ್ಕತ್ತಾದಲ್ಲಿ ಫೆ.28ರಂದು ನಡೆದ ಎಡ ಪಕ್ಷಗಳ ಮೈತ್ರಿಯ ಬೃಹತ್ ಚುನಾವಣಾ ರ್‍ಯಾಲಿ ದೇಶದ ಗಮನ ಸೆಳೆದಿದೆ. “ಬಿಜೆಪಿ ತ್ಯಜಿಸಿ-ಟಿಎಂಸಿ ಸೋಲಿಸಿ” ಎನ್ನುವ ಘೋಷಣೆಗಳು ರ್‍ಯಾಲಿಯಲ್ಲಿ ಮೊಳಗಿದವು.

ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡು 10 ವರ್ಷದ ನಂತರ ಎಡ ಪಕ್ಷವು ಕಾಂಗ್ರೆಸ್ ಹಾಗೂ ಹೊಸತಾಗಿ ರಚನೆಯಾಗಿರುವ ಮೈತ್ರಿಕೂಟ ಇಂಡಿಯನ್ ಸೆಕ್ಯುಲರ್ ಫ್ರಂಟ್( ಐಎಸ್ಎಫ್)ನೊಂದಿಗೆ ಭಾನುವಾರ ಬೃಹತ್ ರ್‍ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿಯ ನಂತರ ಮೂರನೇ ಶಕ್ತಿಯಾಗಿ ಹೊರಹೊಮ್ಮುವುದಾಗಿ ವಿಶ್ವಾಸ ವ್ಯಕ್ತಪಡಿಸಿದೆ.

ಇದಕ್ಕೆ ಸಾಕ್ಷಿಯಾಗಿ ಇಲ್ಲಿನ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮೆಗಾ ರ್‍ಯಾಲಿ ನಡೆಸುವ ಮೂಲಕ ಎಡಪಕ್ಷ-ಕಾಂಗ್ರೆಸ್-ಐಎಸ್‌ಎಫ್ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಪ್ರಚಾರ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದಲ್ಲಿ ಬಹುಶಃ 10 ಲಕ್ಷಕ್ಕೂ ಹೆಚ್ಚು ಜನ ಇರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ರ್‍ಯಾಲಿಯಲ್ಲಿ ಸಿಪಿಎಂ ನಾಯಕರು ತೃಣಮೂಲ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಜನಹಿತ ಸರಕಾರಕ್ಕಾಗಿ ಮೂರನೇ ಪರ್ಯಾಯ ಶಕ್ತಿಯ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಎಡ ಪಕ್ಷಗಳನ್ನು ಹಾಗೂ ಜನತಾ ಬ್ರಿಗೇಡ್ ಗೆ ಮತ ನೀಡಿ ಗೆಲ್ಲಿಸಲು ಕಾಮ್ರೇಡ್ ಸೀತಾರಾಂ ಯೆಚೂರಿ, ಕಾಮ್ರೇಡ್ ಡಿ.ರಾಜಾ ಕರೆ ನೀಡಿದ್ದಾರೆ.

“ಎಡ-ಕಾಂಗ್ರೆಸ್ ಪಕ್ಷಗಳು ಮತ್ತು ಇತರ ಜಾತ್ಯತೀತ ಶಕ್ತಿಗಳ ಮಹಾ ಮೈತ್ರಿಕೂಟವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಕೇವಲ ಎರಡು ಆಯ್ಕೆಗಳ ಸ್ಪರ್ಧೆಯಾಗಲು ಬಿಡುವುದಿಲ್ಲ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಎರಡನ್ನೂ ಸೋಲಿಸುತ್ತೇವೆ” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಹೇಳಿದ್ದಾರೆ.

ರ್‍ಯಾಲಿಯಲ್ಲಿ ಸಿಪಿಐ(ಎಂ) ನಾಯಕರು ಮಾತನಾಡಿ ಕೋಮುವಾದದ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸೋಲಿಸುವಂತೆ ಕರೆ ನೀಡಿದ್ದಾರೆ. ಜೊತೆಗೆ ಜನಹಿತ ಸರ್ಕಾರಕ್ಕಾಗಿ ಪರ್ಯಾಯವಾಗಿ ಮೂರನೇ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ


ಇದನ್ನೂ ಓದಿ: “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...