Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...