Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...