Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...