Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...