Homeಮುಖಪುಟಹತ್ರಾಸ್: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ತಂದೆಯನ್ನು ಹತೈಗೈದ ಆರೋಪಿ

ಹತ್ರಾಸ್: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ತಂದೆಯನ್ನು ಹತೈಗೈದ ಆರೋಪಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 2018 ರಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದ ವ್ಯಕ್ತಿಯನ್ನು ಆರೋಪಿ ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಸೋಮವಾರ (ಮಾ.02) ನಡೆದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ 2018 ರಲ್ಲಿ ಒಂದು ತಿಂಗಳು ಜೈಲಿನಲ್ಲಿದ್ದ ಆರೋಪಿ, ಜಾಮೀನಿನ ಮೇಲೆ ಹೊರಬಂದಿದ್ದರು. ಅಂದಿನಿಂದ ಜೈಲಿನಿಂದ ಹೊರಗಿದ್ದ ಆರೋಪಿ, ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ದೂರುದಾರ ವ್ಯಕ್ತಿಯನ್ನು ನಿನ್ನೆ ಗುಂಡು ಹಾರಿಸಿ ಕೊಂದಿದ್ದಾನೆ.

ಸೋಮವಾರ ಸಂಜೆ 4:30 ರ ಸುಮಾರಿಗೆ ಗ್ರಾಮದ ದೇವಾಲಯದ ಬಳಿ ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿಗಳ ಕುಟುಂಬದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆರೋಪಿ ದೂರುದಾರನಿಗೆ ಗುಂಡಿಕ್ಕಿದ್ದಾನೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಂತ್ರಸ್ತೆಯ ತಂದೆ ಸಾವನ್ನಪ್ಪಿದ್ದಾರೆ ಎಂದು ಹತ್ರಾಸ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ವಿವರವಾದ ಹೇಳಿಕೆ ನೀಡಿರುವ ಹತ್ರಾಸ್ ಪೊಲೀಸರು, ಯುವತಿಯ ತಂದೆ ತನ್ನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ನಂತರ ಆರೋಪಿ ಗೌರವ್ ಶರ್ಮಾನನ್ನು 2018 ರಲ್ಲಿ ಒಂದು ತಿಂಗಳು ಜೈಲಿಗೆ ಹಾಕಲಾಗಿತ್ತು. ಒಂದು ತಿಂಗಳ ನಂತರ ಸ್ಥಳೀಯ ನ್ಯಾಯಾಲಯದಿಂದ ಆರೋಪಿ ಜಾಮೀನು ಪಡೆದಿದ್ದನು.

“ಮೃತ ವ್ಯಕ್ತಿಯು ಗೌರವ್ ಶರ್ಮಾ ವಿರುದ್ಧ ಜುಲೈ 2018 ರಲ್ಲಿ ತನ್ನ ಮಗಳ ಮೇಲಿನ ಲೈಂಗಿಕ ಕಿರುಕುಳಕ್ಕಾಗಿ ಪ್ರಕರಣ ದಾಖಲಿಸಿದ್ದರು. ಆರೋಪಿ ಜೈಲಿಗೆ ಹೋಗಿ ಒಂದು ತಿಂಗಳ ನಂತರ ಜಾಮೀನು ಪಡೆದನು. ಅಂದಿನಿಂದ, ಎರಡೂ ಕುಟುಂಬಗಳ ನಡುವೆ ಪರಸ್ಪರ ದ್ವೇಷ ಹೆಚ್ಚಾಗಿತ್ತು. ಮುಖ್ಯ ಆರೋಪಿಯ ಪತ್ನಿ ಮತ್ತು ಚಿಕ್ಕಮ್ಮ ಮತ್ತು ಮೃತ ವ್ಯಕ್ತಿಯ ಇಬ್ಬರು ಹೆಣ್ಣುಮಕ್ಕಳು ಹಳ್ಳಿಯ ದೇವಸ್ಥಾನವೊಂದಕ್ಕೆ ತೆರಳಿದ್ದರು. ಈ ವೇಳೆ ಇವರ ನಡುವೆ ವಾದ ವಿವಾದ ನಡೆದಿದೆ. ಇದಾದ ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಗೌರವ್ ಶರ್ಮಾ ಕೋಪದಿಂದ ಗುಂಡು ಹಾರಿಸಿದ್ದಾನೆ” ಎಂದು ಹತ್ರಾಸ್ ಪೊಲೀಸ್ ಮುಖ್ಯಸ್ಥ ವಿನೀತ್ ಜೈಸ್ವಾಲ್ ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಈವರೆಗೆ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಯನ್ನೆ ಕೇಳಿದ ಸುಪ್ರೀಂ!

ಪೊಲೀಸ್ ಠಾಣೆಯ ಹೊರಗೆ ಸಂತ್ರಸ್ತೆ ಗೋಳಿಟ್ಟು ಅಳುವುದು ಮತ್ತು ನ್ಯಾಯ ಕೋರಿ ಆಗ್ರಹಿಸುವುದು ಎಂಥವರ ಕರುಳು ಚುರುಕ್ ಎನ್ನುವಂತೆ ಮಾಡುತ್ತಿತ್ತು. ವಿಡಿಯೋಗಳಲ್ಲಿ “ದಯವಿಟ್ಟು ನನಗೆ ನ್ಯಾಯ ನೀಡಿ, ಮೊದಲು ಆತ ನನಗೆ ಕಿರುಕುಳ ನೀಡಿದ್ದ, ಈಗ ನನ್ನ ತಂದೆಯನ್ನು ಗುಂಡಿಟ್ಟು ಕೊಂದಿದ್ದಾನೆ. ಆತ ನಮ್ಮ ಹಳ್ಳಿಗೆ ಬಂದಿದ್ದ. ಅವರು ಆರು-ಏಳು ಜನರಿದ್ದರು. ನನ್ನ ತಂದೆಗೆ ಯಾರ ವಿರುದ್ಧವೂ ದ್ವೇಷವಿರಲಿಲ್ಲ. ಅವನ ಹೆಸರು ಗೌರವ್ ಶರ್ಮಾ” ಎಂದು ಕೂಗಿ ಕೂಗಿ ಹೇಳುವ ವಿಡಿಯೋದಲ್ಲಿ ಆಕೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾಳೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹತ್ರಾಸ್‌ನಲ್ಲಿ ಮೇಲ್ಜಾತಿಯ ಸಮುದಾಯದವರು ಎಂದು ಕರೆಯಲ್ಪಡುವ ನಾಲ್ವರು ಪುರುಷರಿಂದ 20 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದು ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿತ್ತು.


ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...