Homeಸಾಮಾಜಿಕಹೀಗೊಂದು ‘ಅಂಬೇಡ್ಕರ್ ಹಬ್ಬ’

ಹೀಗೊಂದು ‘ಅಂಬೇಡ್ಕರ್ ಹಬ್ಬ’

- Advertisement -
- Advertisement -
  • ವಿಕಾಸ್ ಆರ್ ಮೌರ್ಯ |

‘ವಾಡಿ’ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ದಲಿತರಿಗೆ ಸುಪರಿಚಿತ ಹೆಸರು. 1874ರಲ್ಲಿ ಹೈದರಾಬಾದಿನ ನಿಜಾಮ ಈ ವಾಡಿ ರೈಲ್ವೇ ಜಂಕ್ಷನ್ ಸ್ಥಾಪಿಸಲು ಹಣ ಬಿಡುಗಡೆ ಮಾಡಿದ್ದನು. ಮುಂಬೈಯಿಂದ ಹೈದರಾಬಾದಿಗೆ ಹೋಗಬೇಕೆಂದರೆ ಈ ವಾಡಿಯಲ್ಲಿ ರೈಲು ಬದಲು ಮಾಡಬೇಕಿತ್ತು. ಅಷ್ಟೇ ಅಲ್ಲ, ರೈಲುಗಳು ಕಲ್ಲಿದ್ದಲು ತುಂಬಿಸಿಕೊಳ್ಳಲು ವಾಡಿಯಲ್ಲಿಯೇ ನಿಲ್ಲುತ್ತಿದ್ದವು. ಆದರೆ ‘ವಾಡಿ’ ಇಂದು ಮನೆಮಾತಾಗಿರಲು ಕಾರಣ ಇದಲ್ಲ. ಬಾಬಾಸಾಹೇಬ್ ಅಂಬೇಡ್ಕರರು ಅಲ್ಲಿಗೆ ಎರಡು ಬಾರಿ ಭೇಟಿ ನೀಡಿದ್ದರಿಂದ ಇಂದು ವಾಡಿ ಹೆಸರುವಾಸಿಯಾಗಿದೆ.

ಏಪ್ರಿಲ್ 27, 1945 ನೇ ಇಸವಿ. ಅಂದು ಗುಲ್ಬರ್ಗಾ ಜಿಲ್ಲೆಯ ‘ವಾಡಿ’ ರೈಲ್ವೇ ಜಂಕ್ಷನ್ನಿನಲ್ಲಿ ಹೈದರಾಬಾದ್‍ಗೆ ತೆರಳುತ್ತಿದ್ದ ರೈಲು ಕಲ್ಲಿದ್ದಲು ತುಂಬಿಸಿಕೊಳ್ಳಲು ಎರಡು ಗಂಟೆಗಳ ಕಾಲ ನಿಂತಿತ್ತು. ಅಲ್ಲಿ ಅದ್ಯಾರೋ ಅಂಬೇಡ್ಕರರು ರೈಲಿನಲ್ಲಿರುವ ವಿಚಾರವನ್ನು ಮಾತಾಡುತ್ತಿದ್ದದ್ದನ್ನು ಕೇಳಿಸಿಕೊಂಡ ಸ್ಟೇಷನ್ನಿನಲ್ಲಿ ಟೀ ಮಾರುತ್ತಿದ್ದ ದಿಲ್ದಾರ್ ಹುಸೇನ್‍ರವರು ಇದನ್ನು ತಿಳಿಸಲು ಅತೀವ ಸಂತಸದಿಂದ ‘ವಾಡಿ’ಗೆ ಓಡಿ ಬಂದು ‘ಬಾಬಾಸಾಹೇಬ್ ಅಂಬೇಡ್ಕರ್’ ರೈಲಿನಲ್ಲಿದ್ದಾರೆ ಎಂದು ತಿಳಿಸಿದ ತಕ್ಷಣ ಅಮೃತರಾವ್ ಕೋಮಟೆ, ಜ್ಞಾನೋಬ ಗಾಯಕ್‍ವಾಡ್, ಬಸಪ್ಪ ಬಟ್ರಿಕಿ ಜೊತೆ ಇಡೀ ವಾಡಿಯೇ ಅಂಬೇಡ್ಕರರನ್ನು ನೋಡಲು ತೆರಳಿತು. ಅದಾಗಲೇ ಗಾಯಕ್‍ವಾಡ್ ಅವರು ಮರಾಠಿ ಪತ್ರಿಕೆ ‘ಪ್ರಬುದ್ಧ ಭಾರತ’ ಓದುತ್ತಿದ್ದರಾದ್ದರಿಂದ ಅಂಬೇಡ್ಕರರ ಹೋರಾಟದ ಪರಿಚಯವಿತ್ತು. ಅಂದು ಅಂಬೇಡ್ಕರರು ತನ್ನ ಜನಗಳನ್ನು ಉದ್ದೇಶಿಸಿ ಮಾತನಾಡಿದರು. ಭಾವಚಿತ್ರವನ್ನೂ ತೆಗೆಸಿಕೊಂಡರು. ಬಾಬಾಸಾಹೇಬರನ್ನು ಬೀಳ್ಕೊಟ್ಟ ವಾಡಿ ಜನತೆ ಅಂದೇ ಸೈಕಲ್ಲುಗಳ ಮೇಲೆ ಬಾಬಾಸಾಹೇಬ್ ಅಂಬೇಡ್ಕರರ ಫೋಟೋ ಕಟ್ಟಿಕೊಂಡು ಊರೆಲ್ಲಾ ಮೆರವಣಿಗೆ ಮಾಡಿದ್ದರು. ಕಾಕತಾಳೀಯವೆಂಬಂತೆ ಅಂಬೇಡ್ಕರರು ವಾಡಿಗೆ ಮತ್ತೊಮ್ಮೆ ಭೇಟಿ ಇತ್ತದ್ದು 1952 ಏಪ್ರಿಲ್ 28 ರಂದು. ಆದ್ದರಿಂದ ವಾಡಿಯ ಜನತೆ ಏಪ್ರಿಲ್ 27 ಮತ್ತು 28 ರಂದು ಪ್ರತಿವರ್ಷ ‘ಅಂಬೇಡ್ಕರ್ ಹಬ್ಬ’ವೆಂದು ಆಚರಿಸುತ್ತಾರೆ. 1956 ರಲ್ಲಿ ಅಂಬೇಡ್ಕರರು ಬೌದ್ಧ ಧಮ್ಮಕ್ಕೆ ಮತಾಂತರವಾದಾಗಲೂ ಇಲ್ಲಿಂದ ಹತ್ತು ಮಂದಿ ನಾಗಪುರಕ್ಕೆ ಹೋಗಿ ಮತಾಂತರಗೊಂಡು ಬಂದರು. ಇಂದಿಗೂ ಸಹ ಅಮೃತರಾವ್ ಕೋಮಟೆಯವರ ಮಗ ಟೋಪಣ್ಣ ಕೋಮಟೆಯವರು ಮತಾಂತರ ದಿನದ ಕರಪತ್ರ, ಪ್ರಬುದ್ಧ ಭಾರತದಲ್ಲಿ ಪ್ರಕಟವಾದ ಅಂಬೇಡ್ಕರರ ದೇಹವನ್ನು ಹೊತ್ತೊಯ್ದ ಭಾವಚಿತ್ರಗಳನ್ನು ಕಾಪಿಟ್ಟುಕೊಂಡಿದ್ದಾರೆ.

ಅಂಬೇಡ್ಕರರು ವಾಡಿಗೆ ಬಂದುಹೋಗಿ 73 ವರ್ಷಗಳು ಉರುಳಿವೆ. ಅಲ್ಲಿನ ದಲಿತರು ಒಗ್ಗಟ್ಟಿನಿಂದ ಹಿಂದೂ ದೇವಾಲಯಗಳ ಬದಲು ಬುದ್ಧ ವಿಹಾರಗಳನ್ನು ನಿರ್ಮಿಸಿಕೊಂಡಿದ್ದಾರೆ. ಅಂಬೇಡ್ಕರರು ಬಂದು ಕುಳಿತುಹೋದ ಜಾಗದಲ್ಲಿ ಅಂಬೇಡ್ಕರರು ಕುಳಿತಿರುವ ಭಂಗಿಯಲ್ಲಿ ಮೂರ್ತಿ ನಿರ್ಮಿಸಿದ್ದಾರೆ. ಆ ವೃತ್ತಕ್ಕೆ ಅಂಬೇಡ್ಕರ್ ವೃತ್ತ ಎಂದು ಹೆಸರಿಟ್ಟಿದ್ದಾರೆ. ಅಂಬೇಡ್ಕರ್ ಕಲ್ಯಾಣಮಂಟಪವನ್ನೂ ಕಟ್ಟಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಂಟು ಮಂದಿ ತಮ್ಮವರನ್ನೇ ಗೆಲ್ಲಿಸಿಕೊಂಡಿದ್ದಾರೆ.

ವಾಡಿಯ ದಲಿತರನ್ನು ಭೇಟಿಯಾದ ತಕ್ಷಣ ನಿಮಗೆ ‘ಜೈ ಭೀಮ್’ ಎಂಬ ನಮಸ್ಕಾರ ಎದುರಾಗುತ್ತದೆ. ಮಕ್ಕಳ ಹೆಸರಿನ ಜೊತೆ ‘ಬೌದ್’ ಎಂಬ ಪದನಾಮ ಸೇರಿದೆ. ಬಹುತೇಕ ಮಕ್ಕಳ ಹೆಸರು ಬೌದ್ಧರ ಹೆಸರಾಗಿವೆ. ಮನೆಗಳ ಮೇಲೆ ‘ಅಶೋಕ ಚಕ್ರ’ವುಳ್ಳ ನೀಲಿ ಬಾವುಟ ಮತ್ತು ‘ಬೌದ್ಧ ಧರ್ಮ’ದ ಬಾವುಟಗಳು ಹಾರಾಡುತ್ತಿರುತ್ತವೆ. ಏಪ್ರಿಲ್ ತಿಂಗಳು ಬಂತೆಂದರೆ ಬೀದಿಗಳೆಲ್ಲ ನೀಲಿ ಬಣ್ಣಕ್ಕೆ ತಿರುಗುತ್ತವೆ. ಇವರು ಆಚರಿಸುವ ಮೂರು ಹಬ್ಬಗಳು ದಲಿತರ ಮೂಲದ್ದಾಗಿವೆ. ಒಂದು ಕೊರೆಗಾವ್ ವಿಜಯೋತ್ಸವ, ಎರಡನೆಯದ್ದು ಅಂಬೇಡ್ಕರ್ ಹಬ್ಬ, ಮೂರನೆಯದ್ದು ಬುದ್ಧ ಪೂರ್ಣಿಮೆ.

ಏಪ್ರಿಲ್ 27 ಮತ್ತು 28 ಈ ಎರಡು ದಿನಗಳ ಅಂಬೇಡ್ಕರ್ ಹಬ್ಬವನ್ನು ಆಚರಿಸುವ ಪರಿ ನಿಜಕ್ಕೂ ಕುತೂಹಲಕಾರಿ. ಮೊದಲ ದಿನ ಸಂಜೆ ವೇದಿಕೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಅದು ಕೇವಲ ಭಾಷಣ ಕಾರ್ಯಕ್ರಮವಲ್ಲ. ಪ್ರತಿವರ್ಷ ಸರತಿಯ ಮೇಲೆ ಅಶೋಕ ಚಕ್ರ ಮೆರವಣಿಗೆ ಮಾಡಿ ಅದು ವೇದಿಕೆ ತಲುಪಿದಾಗಲೇ ವೇದಿಕೆ ಕಾರ್ಯಕ್ರಮ ಆರಂಭವಾಗುವುದು. ಈ ವರ್ಷ ಆ ಸರತಿ ಅಂಬೇಡ್ಕರ್ ನಗರದ ಪಾಲಾಗಿತ್ತು.

ಎರಡನೆಯ ದಿನದ ಸಂಭ್ರಮ ನಿಜಕ್ಕೂ ವಿಸ್ಮಯ. ದೂರದೂರಿನಿಂದ ನೆಂಟರು-ನಿಷ್ಟರನ್ನು ಅಂಬೇಡ್ಕರ್ ಹಬ್ಬಕ್ಕೆ ಆಹ್ವಾನಿಸಲಾಗಿರುತ್ತದೆ. ಎಲ್ಲರೂ ಹೊಸ ಬಟ್ಟೆ. ಅಕ್ಕ-ತಂಗಿಯರಿಗೆ ತವರುಮನೆಯಿಂದ ಸೀರೆಯನ್ನು ಉಡುಗೊರೆಯಾಗಿ ನೀಡಿ ಆಹ್ವಾನಿಸಲಾಗಿರುತ್ತದೆ. ಊರಿನ ತುಂಬಾ ಬಣ್ಣಬಣ್ಣದ ಬಟ್ಟೆ ಮತ್ತು ತಲೆಗೆ ನೀಲಿ ರುಮಾಲು ತೊಟ್ಟ ಮಕ್ಕಳು, ಯುವಕರ ಸಂಭ್ರಮ. ಯುವತಿಯರು ಕೆನ್ನೆಗೆ ನೀಲಿ ಬಣ್ಣ ಬಳಿದುಕೊಂಡು, ಯುವಕರು ನೀಲಿ ತಿಲಕವಿಟ್ಟುಕೊಂಡು ಮೆರವಣಿಗೆಗಾಗಿ ಕಾಯುತ್ತಿರುತ್ತಾರೆ. ಕೇವಲ ನೋಡಲು ಮಾತ್ರವಲ್ಲ. ಕುಣಿಯಲು, ಕುಣಿದು ಕುಪ್ಪಳಿಸಲು. ಹೌದು ಎರಡನೆಯ ದಿನದ ಮುಖ್ಯ ಆಕರ್ಷಣೆ ಬುದ್ಧ ಮತ್ತು ಅಂಬೇಡ್ಕರರ ಪ್ರತಿಮೆಗಳ ಮೆರವಣಿಗೆ. ಆಹಾರವೂ ವಿಭಿನ್ನ. ಮೊದಲ ದಿನ ಮಾಂಸಾಹಾರವಾದರೆ ಎರಡನೆಯ ದಿನ ಹೋಳಿಗೆ ಊಟ.

ಈ ಮೆರವಣಿಗೆ ಮೈಸೂರು ದಸರೆಯನ್ನು ನೆನಪಿಸುವುದರಲ್ಲಿ ಸಂಶಯವಿಲ್ಲ. ವಾಡಿಯ ಅಂಬೇಡ್ಕರ್ ಕಾಲೋನಿ, ಭೀಮ್ ನಗರ, ಸಿದ್ದಾರ್ಥ ನಗರ, ಗೌತಮ್ ನಗರ ಮತ್ತು ಇಂದಿರಾನಗರಗಳಿಂದ ತಲಾ ಒಂದೊಂದು ಬುದ್ಧ ಮತ್ತು ಅಂಬೇಡ್ಕರ್ ಪ್ರತಿಮೆಗಳನ್ನು ಟ್ರ್ಯಾಕ್ಟರ್ ಮೇಲೆ ವಿಶಿಷ್ಟವಾಗಿ ಹಾಗು ವಿಭಿನ್ನವಾಗಿ ಅವರವರ ಸಾಮಥ್ರ್ಯಕ್ಕೆ ತಕ್ಕಂತೆ ಸಿಂಗರಿಸಿಕೊಂಡಿರುತ್ತಾರೆ. ಪ್ರತಿ ಪ್ರತಿಮೆಯ ಮುಂದೆ ಅಬ್ಬರಿಸುವ ಡಿಜೆ ಸೌಂಡ್ ಸಿಸ್ಟಮ್ ಇರುತ್ತದೆ. ಅದರ ಹಿಂದೆ ಮನಬಿಚ್ಚಿ ಕುಣಿಯುವ ಯುವಜನರ ತಂಡವಿರುತ್ತದೆ. ಹೀಗೆ ಐದೂ ನಗರಗಳಿಂದ ಹೊರಟ ಐದು ಪ್ರತಿಮೆಗಳು ಅಂಬೇಡ್ಕರ್ ವೃತ್ತದ ಬಳಿ ನಿರ್ಮಿಸಿರುವ ಅವರÀ ಪುತ್ಥಳಿ ಹತ್ತಿರ ಬಂದು ಸೇರುತ್ತವೆ. ಅಲ್ಲಿಂದ ಶುರು. ಅಂಬೇಡ್ಕರ್ ಹಬ್ಬದ ಮೆರವಣಿಗೆ. ಹಾಡು, ಕುಣಿತ, ಅಂಬೇಡ್ಕರ್ ಹಾಗು ಬುದ್ಧನಿಗೆ ಜೈಕಾರ. ಬಿರು ಬಿಸಿಲಿನ ಮಧ್ಯಾಹ್ನ ಆರಂಭವಾಗುವ ಮೆರವಣಿಗೆ ಮುಗಿಯುವುದು ಮಧ್ಯ ರಾತ್ರಿ 12 ಗಂಟೆಗೆ. ಪ್ರತಿ ಏರಿಯಾದ ಮಕ್ಕಳು, ಯುವಕರು ಹದಿನೈದು ದಿನಗಳಿಂದ ಕಲಿತುಕೊಂಡ ನೃತ್ಯಗಳನ್ನ ಮೆರವಣಿಗೆಯುದ್ದಕ್ಕೂ ಪ್ರದರ್ಶಿಸುತ್ತಾ ಹೋಗುತ್ತಾರೆ. ಅವರ ಜೊತೆ ಇಡಿ ಊರಿಗೇ ಊರೇ ಕುಣಿಯುತ್ತದೆ. ಸಂತಸವೆಂದರೆ ಹೆಂಗಸರು ತಮ್ಮ ಮಕ್ಕಳೊಂದಿಗೆ ಹೆಜ್ಜೆ ಹಾಕುವ ಪರಿ. ದಣಿವಾರಿಸಲು ದಾರಿಯುದ್ದಕ್ಕೂ ಮಜ್ಜಿಗೆ ಮತ್ತು ತಂಪು ನೀರು ಉಚಿತವಾಗಿ ಸಿಗುತ್ತದೆ.
ವಾಡಿಯಲ್ಲಿ ಅಂಬೇಡ್ಕರ್ ಜಯಂತಿ ಎಂದರೆ ಹಬ್ಬ. ದಸರಾ ನೆನಪಿಸುವ ಹಬ್ಬ. ಇಂತಹ ಹಬ್ಬ ದೇಶ ವ್ಯಾಪಿ ಬೇಗ ಹಬ್ಬಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...