Homeಕರ್ನಾಟಕಶಿವಮೊಗ್ಗ, ಚಿಕ್ಕಬಳ್ಳಾಪುರ ಸ್ಫೋಟಗಳ ಸಾಲಿಗೆ ಸೇರಬಾರದು ಬ್ರಹ್ಮಾವರ ತಾಲೂಕಿನ ಗಣಿ

ಶಿವಮೊಗ್ಗ, ಚಿಕ್ಕಬಳ್ಳಾಪುರ ಸ್ಫೋಟಗಳ ಸಾಲಿಗೆ ಸೇರಬಾರದು ಬ್ರಹ್ಮಾವರ ತಾಲೂಕಿನ ಗಣಿ

- Advertisement -
- Advertisement -

ಅಕ್ರಮವಾಗಿ ಹಣ ಹರಿದು ಬರುವಲ್ಲಿ ಅನಾಹುತ-ಅನಾಚಾರ ಆಗಿಯೇ ಆಗುತ್ತದೆ. ಇದು ಪ್ರಕೃತಿ ನಿಯಮ. ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಕಲ್ಲು ಮತ್ತು ಮರಳು ಗಣಿಗಳಲ್ಲಿ ಪ್ರತಿದಿನ ಒಂದಲ್ಲ ಒಂದು ಭಾನಗಡಿ ಇದ್ದದ್ದೇ! ಹತ್ತು-ಹನ್ನೆರಡು ಜಿಲ್ಲೆಗಳಲ್ಲಿ ನಿರಂತರ-ನಿರಾತಂಕವಾಗಿ ನಡೆಯುತ್ತಿರುವ ಕಳ್ಳ ಕಲ್ಲು ಗಣಿಗಾರಿಕೆಗೆ ಅಧಿಕಾರಸ್ಥರ ಪುಢಾರಿಗಳೇ ಪಿತಾಮಹರು. ಹೀಗಾಗಿ ಕಲ್ಲು ಕ್ವಾರಿಗಳಲ್ಲಿ ನರಬಲಿ, ರಕ್ತದೋಕುಳಿ ನಡೆಯುತ್ತಲೇ ಇದೆ. ಶಿವಮೊಗ್ಗದ ಹುಣಸೋಡು ಅಕ್ರಮ ಗಣಿಯಲ್ಲಿ ಘನಘೋರ ಸ್ಫೋಟ ಸಂಭವಿಸಿ ಆರು ಬಡ ಜೀವಗಳು ಆಹುತಿಯಾಗಿ ತಿಂಗಳಿನ್ನೂ ಕಳೆದಿಲ್ಲ; ಅದಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಜಿಲೆಟಿನ್ ಸಿಡಿತಕ್ಕೆ ಆರು ಮಂದಿ ಬಲಿಯಾಗಿದ್ದಾರೆ!!

ರಾಜ್ಯದ ಸುಮಾರು 10-15 ಸಾವಿರ ಎಕರೆ ಪ್ರದೇಶದಲ್ಲಿ ಸಾವಿರಾರು “ಅಧಿಕೃತ” ಕಲ್ಲುಕ್ವಾರಿ ಮತ್ತು ಕ್ರಶರ್‌ಗಳಿವೆ ಎಂಬುದೊಂದು ಅಂದಾಜು. ಆದರೆ ಇದಕ್ಕೆ ದುಪ್ಪಟ್ಟು ಜಾಗದಲ್ಲಿ ದುಪ್ಪಟ್ಟು ಕಲ್ಲುಗಣಿ-ಕ್ರಶರ್‌ಗಳ “ಅನಧಿಕೃತ” ದಂಧೆ ರಾಜಾರೋಷವಾಗಿ ಸಾಗಿದೆ! ಇದು ಸರ್ಕಾರ ನಡೆಸುವವರಿಗೆ ಮತ್ತವರ ಅಧಿಕಾರಿ ಗಣಕ್ಕೆ ಗೊತ್ತಿರುವ ಸತ್ಯವೇ. ಕಳ್ಳ ಮಾರ್ಗದಲ್ಲಿ ಕೋಟಿ-ಕೋಟಿ ಲೂಟಿಯಾಗುತ್ತಿದ್ದರೂ ಕಡಿವಾಣ ಹಾಕುವುದಕ್ಕಾಗುತ್ತಿಲ್ಲ. ಸರ್ಕಾರವನ್ನೇ ಉರುಳಿಸುವಷ್ಟು ಮತ್ತು ಎಂಪಿ-ಎಮ್ಮೆಲ್ಲೆಗಳ ಗೆಲ್ಲಿಸುವ-ಸೋಲಿಸುವಷ್ಟು ಕೊಬ್ಬಿರುವ ಕ್ವಾರಿ ಲಾಬಿ ಮಟ್ಟಹಾಕುವ ತಾಕತ್ತು ಯಾರಿಗೂ ಇಲ್ಲವಾಗಿದೆ.

ಕಲ್ಲು ಕ್ವಾರಿಗಳಲ್ಲಿ ಸ್ಥಳೀಯ ಅಮಾಯಕ ಕೂಲಿಗಳ ಜತೆ ಆಂಧ್ರ, ಬಿಹಾರ, ಜಾರ್ಖಂಡ್ ಮುಂತಾದ ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿದ್ದಾರೆ. ಇದೊಂಥರಾ ಜೀತ!! ಜೀವ ಪಣಕ್ಕಿಟ್ಟು ಬೆವರಿಳಿಸಬೇಕಾದ ಬರ್ಬರ-ಭೀಕರ ಪದ್ಧತಿ!! ಕೆಲವು ಕಡೆ ಟನ್‌ಗಟ್ಟಲೆ ಸ್ಫೋಟಕ ಸಂಗ್ರಹಿಸಿಡಲಾಗಿದೆ. ಆಂಧ್ರ-ತಮಿಳುನಾಡು ಮತ್ತಿತರ ರಾಜ್ಯಗಳಿಂದ ಜಿಲೆಟಿನ್, ಅಮೋನಿಯಮ್ ನೈಟ್ರೇಟ್, ಡಿಟೋನೇಟರ್ ಮತ್ತು ಫ್ಯೂಸ್ ಪೂರೈಕೆಯಾಗುತ್ತಿದೆ. ಈ ಸ್ಫೋಟಕಗಳನ್ನು ಒಂದೇ ಕಡೆ ಸಂಗ್ರಹಿಸಿಡುವುದು ಗಂಡಾಂತರಕಾರಿ. ಯಾವ ಸುರಕ್ಷಾ ಕ್ರಮಗಳು ಇಲ್ಲದೆ ಸ್ಫೋಟಕ ದಾಸ್ತಾನು ಮಾಡುವ ಗಣಿ ಧಣಿಗಳು ಮಾರಣಹೋಮ ಮಾಡುತ್ತಿದ್ದಾರೆ. ಬೃಹತ್ ಬಂಡೆ ಒಡೆಯುವಾಗ ಪರವಾನಗಿ ಹೊಂದಿರುವ ಪರಿಣಿತರಿಂದಲೇ ಸ್ಫೋಟ ನಡೆಸಬೇಕೆಂಬ ನಿಯಮವಿದೆ. ಇದ್ಯಾವುದೂ ಯಾವ ಗಣಿಯಲ್ಲೂ ಪಾಲನೆಯಾಗುತ್ತಿಲ್ಲ.

ಕಲ್ಲುಕ್ವಾರಿ ಹಾಗೂ ಕ್ರಶರ್ ಪರವಾನಗಿ ಕಟ್ಟುನಿಟ್ಟಿನ ನಿಯಮವೇನೋ ಇದೆ. ಅರಣ್ಯ ಸಂರಕ್ಷಣಾ ಕಾಯ್ದೆ 198 2(1) ಮತ್ತು 2(3) ಮತ್ತು ಅರಣ್ಯ ಸಂರಕ್ಷಣಾ ಕಾನೂನು 2003(6) ಹಾಗೂ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಸಿಕ್ಕ ಬಳಿಕ 20 ಅಥವಾ 30 ವರ್ಷದ ಲೀಸ್ ನೀಡಬೇಕಾಗುತ್ತದೆ. ಇದೆಲ್ಲವನ್ನೂ ಪ್ರಜ್ಞಾಪೂರ್ವಕವಾಗೇ ಧಿಕ್ಕರಿಸಿ ಕಳ್ಳಕ್ವಾರಿಗೆ ಅವಕಾಶ ನೀಡಿ ತಮ್ಮ ಪಾಲು ಪಡೆಯುವ ಅಧಿಕಾರಿಗಳು ಏನೂ ಆಗಿಲ್ಲವೆಂಬಂತೆ ಇದ್ದು ಬಿಡುತ್ತಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಂತೂ ಲೇವಾದೇವಿ ಅಡ್ಡೆಯಂತಾಗಿ ಹೋಗಿದೆ! ಹೀಗಾಗಿ ಕಾಯ್ದಿಟ್ಟ ಅರಣ್ಯ, ಅಭಯಾರಣ್ಯ, ಪರಿಸರ ಸೂಕ್ಷ್ಮ ಪ್ರದೇಶದಲ್ಲೂ ನಾಯಿಕೊಡೆಗಳಂತೆ ಭೀಭತ್ಸ ಕ್ವಾರಿಗಳು ತಲೆಯೆತ್ತಿವೆ. ಕ್ರಶರ್‌ಗಳಿಗಷ್ಟೇ ಪರವಾನಗಿ ಪಡೆದು ಕಣ್ಕಟ್ಟು ನಡೆಸುವ ಕ್ವಾರಿ ಕುಳಗಳಿಗೆ ಕಳ್ಳ ಕ್ವಾರಿ ನಡೆಸಲು ಅಧಿಕಾರಿ ಬಳಗ ಅನುಕೂಲ ಮಾಡಿಕೊಡುತ್ತಿದೆ!

ಕಳ್ಳಕ್ವಾರಿಗಳಿಂದ ಪರಿಸರ ಶಬ್ದಮಾಲಿನ್ಯ ಆಗುತ್ತಿದೆ. ಯಂತ್ರಗಳ ಸದ್ದು ಮತ್ತು ಸ್ಫೋಟದಿಂದ ವನ್ಯ ಪ್ರಾಣಿಗಳು ದಿಕ್ಕೆಟ್ಟು ನಾಡಿಗೆ ನುಗ್ಗುತ್ತಿವೆ. ಕಲ್ಲುಸಾಗಾಟಕ್ಕೆ ರಸ್ತೆ, ಕಾರ್ಮಿಕರ ಗುಡಿಸಲು, ಯಂತ್ರಗಳ ಸ್ಥಾಪನೆ ಎಂದೆಲ್ಲ ಅರಣ್ಯ ನಾಶವಾಗುತ್ತಿದೆ. ಗಣಿಗಾರಿಕೆಯಿಂದ ನದಿಗಳು ಬತ್ತಿಹೋಗುತ್ತಿವೆ. ರೈತರ ಬೆಳೆಗೆ ಹಾನಿಯಾಗುತ್ತಿದೆ. ಮಣ್ಣಿನ ಸಾರಾಂಶ ಕಡಿಮೆಯಾಗುತ್ತಿದೆ. ಉಸಿರಾಟದ ತೊಂದರೆ, ಶ್ವಾಸಕೋಶ, ಶ್ರವಣ ಸಮಸ್ಯೆ, ಕೆಮ್ಮುಗಳಂಥ ರೋಗ ಜನರಿಗೆ ಬಾಧಿಸುತ್ತಿದೆ. ಸ್ಥಳೀಯ ಪ್ರಭಾವಿ ಮರಿ ಪುಢಾರಿಗಳ ಸಚಿವ-ಸಂಸದ-ಶಾಸಕರ ನಿಕಟವರ್ತಿಗಳೇ ಗಣಿಗಾರಿಕೆ ಯಜಮಾನರಾಗಿರುವುದರಿಂದ ನಿಷ್ಠಾವಂತ ಅಧಿಕಾರಿಗಳ ಕೈಕಟ್ಟಿಹಾಕಿದಂತಾಗಿದೆ. ಅಕ್ರಮಕ್ಕೆ ಅಂಕುಶವಿಡಲು ಪ್ರಯತ್ನಿಸುವ ಅಧಿಕಾರಿಗಳನ್ನು ಸತಾಯಿಸಿ ಪಳಗಿಸಲು ಹವಣಿಸುವುದು ಮಾಮೂಲಿ ಎಂಬಂತಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೊಪ್ಪಳ, ಚಾಮರಾಜನಗರ, ಮಂಡ್ಯ, ಬೀದರ್ ಮತ್ತು ಶಿವಮೊಗ್ಗಗಳಲ್ಲಿ ಕಲ್ಲುಕ್ವಾರಿ ಹಾವಳಿ ಜೋರಾಗಿದೆ! ಮೊನ್ನೆ ನಡೆದ ಗ್ರಾಪಂ ಇಲೆಕ್ಷನ್‌ನಲ್ಲೂ ಈ ಕ್ವಾರಿ ಕಪ್ಪು ಕಾಸು ನಿರ್ಣಾಯಕ ಆಟ ಆಡಿದೆ.

ಕಾಯ್ದೆ ಉಲ್ಲಂಘಿಸುವ ಕಲ್ಲು ಗಣಗಾರಿಕೆಯವರಿಗೆ 2 ವರ್ಷ ಶಿಕ್ಷೆ ಮತ್ತು 5 ಲಕ್ಷ ರೂ ದಂಡ ವಿಧಿಸುವ ಕಾನೂನಿದೆ. ಇದು ಬರೀ ಹೆಸರಿಗಷ್ಟೇ. ಕಳೆದ 5 ವರ್ಷದಲ್ಲಿ ಕದ್ದು ಕಲ್ಲು ಸಾಗಿಸಿದ ಸುಮಾರು 800 ಪ್ರಕರಣಗಳಲ್ಲಿ ಗಣಿ ಇಲಾಖೆ ವಾಹನಗಳ ಜಪ್ತಿ ಮಾಡಿ 9 ಕೋಟಿ ದಂಡ ವಸೂಲಿ ಮಾಡಿದೆ ಎಂಬುದು ಸರ್ಕಾರಿ ಅಂಕಿ-ಅಂಶ. ಆದರೆ ಕಳ್ಳ ಗಣಿ ದೊರೆಗಳು-ಅಧಿಕಾರಿಗಳು-ಅಧಿಕಾರಸ್ಥ ರಾಜಕಾರಣಿಗಳ ಒಳ ಒಪ್ಪಂದದಲ್ಲಿ ಸಾವಿರಾರು ಕೋಟಿ ರೂ ಕಲ್ಲು ಕಳ್ಳ ಸಾಗಾಣಿಕೆ ಆಗಿದೆ; ರಾಜಧನ ತಪ್ಪಿಸಿ ಹಗಲು ದರೋಡೆ ಮಾಡಲಾಗುತ್ತಿದೆ. ಕಳೆದ 5 ವರ್ಷದಲ್ಲಿ ಅಕ್ರಮ ಗಣಿಗಾರಿಕೆಯ 1,126 ಕೇಸ್ ದಾಖಲಾಗಿದೆ. ಇದಕ್ಕೆ ಎರಡು ಪಟ್ಟು ಮುಚ್ಚಿಹೋಗಿದೆ. ಗಣಿ ಇಲಾಖೆ ಇತಿಹಾಸದಲ್ಲಿ ಒಂದಿಷ್ಟು ತೋರಿಕೆಗೆ ದಂಡ ಹಾಕುವ ಕಾರ್ಯಾಚರಣೆ ನಡೆದಿದೆಯೇ ಹೊರತು ಯಾವ ಕಲ್ಲು ಕಳ್ಳನಿಗೂ ಶಿಕ್ಷೆಯಾದ ದಾಖಲೆಯಿಲ್ಲ!! ಹಗಲಿರುಳೆನ್ನದೆ ಸ್ಫೋಟಕ ಜಿಲೆಟಿನ್ ಲಾರಿಗಟ್ಟಲೆ ಸಾಗಾಟವಾಗುತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಾರೆ. ಕೇಂದ್ರ ಗಣಿ ಮತ್ತು ಭೂವಿಜ್ಞಾನ ಮಂತ್ರಿ ಪ್ರಹ್ಲಾದ್ ಜೋಶಿಯೇ ಶಿವಮೊಗ್ಗದಲ್ಲಿ ಸ್ಫೋಟ ಆದಾಗ- “ಅಕ್ರಮ ಗಣಿಗಾರಿಕೆ ಮತ್ತು ಅಧಿಕಾರಿಗಳ ಮಧ್ಯೆ ಹೊಂದಾಣಿಕೆಯಿದೆ” ಎಂದು ಬಹಿರಂಗವಾಗೇ ಹೇಳಿದ್ದು ಕಪ್ಪು ಕ್ವಾರಿ ದಂಧೆ ಅಸಲಿಯತ್ತು ಸಾಬೀತು ಪಡಿಸುವಂತಿದೆ!!

ರಾಜ್ಯದಲ್ಲಿ ನಡೆಯುತ್ತಿರುವ ಅಷ್ಟೂ ಅಪಾಯಕಾರಿ ಅನಧಿಕೃತ ಮತ್ತು ಅಧಿಕೃತ ಕಲ್ಲು ಗಣಿಗಳ ಭೀಭತ್ಸತೆಯ ಸ್ಯಾಂಪಲ್‌ನಂತಿದೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ನಾಲ್ಕೂರು ಗ್ರಾಮದಲ್ಲಿ ಬಿಜೆಪಿ ಪ್ರಭಾವಿ ಶಾಸಕರೊಬ್ಬರ ಪರಮಾಪ್ತ ಬಂಟ ಅಕ್ರಮವಾಗಿ ನಡೆಸುತ್ತಿರುವ ಕಲ್ಲುಕ್ವಾರಿ ಕರ್ಮಕಾಂಡ! ಮಂದರ್ತಿ ಜಿಪಂ ಸದಸ್ಯ ಪ್ರತಾಪ್ ಹೆಗ್ಡೆ ಮತ್ತಾತನ ಸಹೋದರ ಪ್ರವೀಣ್ ಹೆಗಡೆ ಉಡುಪಿ ಶಾಸಕ ರಘುಪತಿ ಭಟ್ಟರ ಅಚ್ಚುಮೆಚ್ಚಿನ ಗೆಣೆಕಾರರು. ಪ್ರವೀಣ್ ಹೆಗಡೆ ಯುನಿಟಿ ರಾಕ್ ಇಂಡಸ್ಟ್ರೀಸ್ ಹೆಸರಿನ ಜಲ್ಲಿ ಕ್ರಶರ್ ಮತ್ತು ಕಲ್ಲುಕ್ವಾರಿ ಉದ್ಯಮ ಸಂಸ್ಥೆ ಸುಮಾರು 15 ಕೋಟಿ ರೂ ಬಂಡವಾಳದಲ್ಲಿ ಶುರು ಮಾಡಿದ್ದಾರೆ. ಇದನ್ನು ಮೊದಲು ರೆಸಾರ್ಟ್ ಉದ್ಯಮಿ ಜಾಯ್ ಆರಂಭಿಸಿದ್ದರು. ಅದಕ್ಕೆ ಹೆಗ್ಡೆ ಸಹೋದರರು ಸ್ಲೀಪಿಂಗ್ ಪಾರ್ಟ್‌ನರ್‌ಗಳಾಗಿದ್ದರು. ಈಚೆಗೆ ನಿಧನರಾದ ಅಂಡರ್ ವರ್ಲ್ಡ್ ಡಾನ್ ಒಬ್ಬನಿಂದ ಜಾಯ್‌ಗೆ ಬೆದರಿಕೆ ಬಂತೆಂದು ಹೇಳಲಾಗುತ್ತದೆ.

ಯುನಿಟಿ ರಾಕ್ ಇಂಡಸ್ಟ್ರೀಸ್‌ಗೆ ಲೀಸ್‌ನಲ್ಲಿ ಕೊಡಲಾಗಿರುವ ನಾಲ್ಕೂರು ಗ್ರಾಮದ ಸರ್ವೆ ನಂಬರ್ 27/7, 24/2, 24/8, 24/9ರಲ್ಲಿನ 1.97 ಎಕರೆ ಇಕೋ ಸೆನ್ಸಿಟಿವ್ ಝೋನ್‌ನಲ್ಲಿದೆ. ಈ ಬಗ್ಗೆ ದೂರು ಬಂದಾಗ ಅಂದಿನ ಹೆಬ್ರಿ ವಲಯದ ಅರಣ್ಯಾಧಿಕಾರಿ ಮುನಿರಾಜು ನಿಷ್ಠುರ ತನಿಖೆ ನಡೆಸಿ ಹೆಗ್ಡೆ ಬಂಧುಗಳ ರಾಕ್ ಇಂಡಸ್ಟ್ರಿಸ್ ಪರವಾನಗಿ ರದ್ದು ಮಾಡುವಂತೆ ವರದಿ ಕೊಟ್ಟಿದ್ದರು! ಅಷ್ಟೇ ಅಲ್ಲ, ಸರ್ವೆ ನಂಬರ್ 219/1ಪಿ1ರಲ್ಲೂ ಕ್ವಾರಿ ವ್ಯಾಪಿಸಿಕೊಂಡಿದ್ದು ಇದು ಡೀಮ್ಡ್ ಫಾರೆಸ್ಟ್‌ನಲ್ಲಿದೆ ಎಂದು ಆಕ್ಷೇಪಿಸಿದ್ದರು. ಸೋಮೇಶ್ವರ ವನ್ಯಜೀವಿ ವಲಯದ ತೆಂಕಹೊಲ ಮೀಸಲು ಅರಣ್ಯಕ್ಕೆ ಕೇವಲ 4.9 ಕಿ.ಮೀ ಅಂತರದಲ್ಲಿ ಕ್ವಾರಿಯಿರುವುದರಿಂದ ಹೆಗ್ಡೆಗಳು ನಡೆಸುತ್ತಿರುವ ಅಕ್ರಮ ಕ್ವಾರಿ ಸ್ಥಗಿತಗೊಳಿಸುವಂತೆ ವರದಿಯಲ್ಲಿ ಹೇಳಿದ್ದರು.

ಕ್ವಾರಿ ಧಣಿ ಅಧಿಕಾರಸ್ಥರ ಹತ್ತಿರದವನೆಂಬ ಕಾರಣಕ್ಕೆ ಖಡಕ್ ಮುನಿರಾಜು ನಂತರ ಬಂದ ಆರ್‌ಎಫ್‌ಓ ಸದ್ರಿ ಕಲ್ಲು ಗಣಿಗಾರಿಕೆಗೆ ಅವಕಾಶ ಕೊಟ್ಟು ಸುಮ್ಮನಿದ್ದಾರೆ. ಎರಡು ವರ್ಷದ ಹಿಂದೆ ಈ ಗಣಿಗಾರಿಕೆಯಲ್ಲಿ ಉತ್ತರ ಭಾರತದ ಕೂಲಿಯೊಬ್ಬ ನಿಗೂಢವಾಗಿ ಸತ್ತು ಬಿದ್ದಿದ್ದ. ಅದನ್ನು ಸಿಡಿಲು ಹೊಡೆತದಿಂದಾದ ಸಾವೆಂದು ಸಾರಲಾಗಿತ್ತು. ಮುಚ್ಚಿರುವ ಮಜುಬೂತ್ ಗೇಟಿನ ಒಳಗಿರುವ ಈ ಕ್ವಾರಿಯಲ್ಲಿ ನಿರಂತರವಾಗಿ ಜಿಲೆಟಿನ್ ಆಸ್ಫೋಟ ಆಗುತ್ತಿರುತ್ತದೆ. ಅಪಾರ ಸ್ಫೋಟಕ ಸಂಗ್ರಹ ಇಲ್ಲಿದೆಯೆನ್ನಲಾಗಿದೆ. ಪ್ರತಿದಿನ ಕಮ್ಮಿಯೆಂದರೂ 250 ಲಾರಿ ಲೋಡ್ ಜಲ್ಲಿಕಲ್ಲು ಈ ಕ್ವಾರಿಯಿಂದ ಆಚೀಚೆಯ ಜಿಲ್ಲೆಗಳಿಗೆ ಹೋಗುತ್ತದೆ! ಒಂದು ದಿನಕ್ಕೆ ಹತ್ತಿರಹತ್ತಿರ ಮುಕ್ಕಾಲು ಕೋಟಿ ಲೂಟಿಯಿದು!!

ಹೇಳೋರಿಲ್ಲ; ಕೇಳೋರಿಲ್ಲ! ನಿತ್ಯವೂ ಕಳ್ಳ ಕಲ್ಲುಗಣಿ ದೊರೆ ಬಳಗಕ್ಕೆ ಸುಗ್ಗಿಯೇ ಸುಗ್ಗಿ!!


ಇದನ್ನೂ ಓದಿ: ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...