Homeಅಂಕಣಗಳುನೂರರ ನೋಟ; ದೊಡ್ಡರಂಗೇಗೌಡರು ಆತ್ಮಾವಲೋಕನ ಮಾಡಿಕೊಳ್ಳಲಿ

ನೂರರ ನೋಟ; ದೊಡ್ಡರಂಗೇಗೌಡರು ಆತ್ಮಾವಲೋಕನ ಮಾಡಿಕೊಳ್ಳಲಿ

- Advertisement -
- Advertisement -

ಅಮೆರಿಕದಲ್ಲಿ ಒಂದು ಮಾತಿದೆ Get On, Get Honour, Get Honest ಎಂದು.

ಮೊದಲು Get On ಆಗಿ, ದೊಡ್ಡರಂಗೇಗೌಡರು ಸಾಹಿತಿ ಎನಿಸಿದರು. ಸಿನಿಮಾ ಹಾಡು ಬರೆಯುವುದರಲ್ಲೂ ಹೆಸರು ಮಾಡಿದರು.

ಮುಂದಿನ ಹೆಜ್ಜೆ Get Honour. ಬಿಜೆಪಿಯ ಮೇಲ್ಮನೆ ಸದಸ್ಯರಾದರು. ಸರ್ಕಾರದ ಪುಸ್ತಕಕೊಳ್ಳುವ ಸಮಿತಿಯ ಅಧ್ಯಕ್ಷರು ಆದರು. ಅನಾಯಾಸವಾಗಿ, ಬಿಜೆಪಿಯ ಸಹಕಾರದಿಂದ ಪದ್ಮಶ್ರೀ ಪ್ರಶಸ್ತಿಯೂ ದೊರೆಯಿತು.

ಇಷ್ಟೆಲ್ಲ ಗೌರವಗಳನ್ನು ಬಿಜೆಪಿ ಸರ್ಕಾರ ದೊಡ್ಡರಂಗೇಗೌಡರಿಗೆ ಬಳುವಳಿಯಾಗಿ ಕೊಟ್ಟಿರುವಾಗ ಅವರು ಬಿಜೆಪಿಗೆ ಪ್ರತ್ಯುಪಕಾರ ಮಾಡಿ ಸಾಲ ತೀರಿಸಬೇಡವೇ? ಕೃತಜ್ಞತೆ ಸಲ್ಲಿಸಬೇಡವೇ? ಈಗ ಅವರು Honest ಆಗುವ ಪ್ರಯತ್ನದಲ್ಲಿದ್ದಾರೆ. ಯಾರಿಗೆ Honest ಆಗುವುದು? ಬಿಜೆಪಿಗಲ್ಲದೆ ಬೇರೆ ಯಾರಿಗೆ Honest ಆಗುವುದು?

ಆದರೆ ಅವರು ಅದಕ್ಕಾಗಿ ಮೊದಲು ಆಯ್ಕೆಮಾಡಿದ್ದು ಹಿಂದಿ ಭಾಷೆಯನ್ನು ರಾಷ್ಟ್ರಭಾಷೆಯಾಗಿ ಒಪ್ಪಿಕೊಳ್ಳುವ ವಿಚಾರ ಪ್ರಸ್ತಾಪಿಸುವ ಮುಖಾಂತರ. ಕನ್ನಡಿಗರು ಹೆಮ್ಮೆ ಪಡಬಹುದಾದ, ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ಕನ್ನಡ ಸಾಹಿತ್ಯ ಪರಿಷತ್ತು ಅವರಿಗೆ ದಯಪಾಲಿಸಿತು. ಆ ಸುದ್ದಿ ತಿಳಿದ ಒಡನೆ ದೊಡ್ಡರಂಗೇಗೌಡರು ಮೊದಲಿಗೆ ಆಡಿದ ಮಾತು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಯನ್ನು ಸಮರ್ಥಿಸುವ ಮೂಲಕ ಕರ್ನಾಟಕ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಏಕೆ ಒಪ್ಪಿಕೊಳ್ಳಬಾರದು ಎನ್ನುವ ರೀತಿಯಲ್ಲಿ ಪ್ರಶ್ನಿಸಿದರು. ಅವರೇ ಹೇಳಿರುವಂತೆ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಚಲಾವಣೆಯಲ್ಲಿಲ್ಲ.

ಉತ್ತರ ಭಾರತದ ರಾಜ್ಯಗಳು ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಒಪ್ಪಿರುವ ಮಾತ್ರಕ್ಕೆ, ನಾವು, ಹಿಂದಿಯ ಗಂಧವೇ ಇಲ್ಲದ ದಕ್ಷಿಣ ಭಾರತದ ಜನ ಇದನ್ನು ಯಾಕೆ ಒಪ್ಪಬೇಕು ಎಂದು ಜನರು ಕೇಳಲಾರಂಭಿಸಿದರು. ದೊಡ್ಡರಂಗೇಗೌಡರ ಬಾಯಿ ಕಟ್ಟಿಹೋಯ್ತು. ಸಮ್ಮೇಳನದ ಸಮಯದಲ್ಲಿ ಕನ್ನಡಿಗರು ಒಕ್ಕೊರಲಿನಿಂದ ಸಮ್ಮೇಳಾನಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಂಬ ಮತ್ತು ಬೆವರಿಳಿಸುತ್ತಾರೆಂಬ ಭಯ ದೊಡ್ಡರಂಗೇಗೌಡರನ್ನು ಕಾಡಲು ಆರಂಭವಾಯಿತು. ಸರ್ಕಾರಕ್ಕೂ ಈ ಭಯ ತಾಕಿ ಸಮ್ಮೇಳನವನ್ನೇ ಮುಂದಕ್ಕೆ ಹಾಕುವ ತೀರ್ಮಾನ ಕೈಗೊಂಡಿತು. ಸಂಬಂಧಪಟ್ಟ ಮಂತ್ರಿಗಳು ಸಮ್ಮೇಳನವನ್ನು ಮುಂದಕ್ಕೆ ಹಾಕಿರುವ ಸುದ್ದಿ ಪ್ರಕಟಿಸಿದರು.

ಈ ಮಧ್ಯೆ ದೊಡ್ಡರಂಗೇಗೌಡರು, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದೂ ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆ ನಂತರ ಇನ್ನೊಂದು ಸಂದರ್ಭದಲ್ಲಿ ತಮ್ಮ ನಿಲುವನ್ನು ಬದಲಾಯಿಸಿರುವುದಾಗಿ ಹೇಳಿದರು. ಬಹುಶಃ ಸಮ್ಮೇಳನದಲ್ಲಿ ಎಲ್ಲ ಕನ್ನಡಿಗರ ಒಕ್ಕೊರಲಿನ ಪ್ರಕೋಪಕ್ಕೆ ಒಳಗಾಗಬಹುದು ಎಂಬ ಹೆದರಿಕೆ ಅವರನ್ನು ಕಾಡಿರಬಹುದು.

ಸಮ್ಮೇಳನ ಮುಂದಕ್ಕೆ ಹೋಯಿತು. ತಮಗೆ ಮೋದಿ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದ್ದು ದೊಡ್ಡರಂಗೇಗೌಡರಿಗೆ ಮತ್ತೆ ಜ್ಞಾಪಕಕ್ಕೆ ಬಂದಿರಬೇಕು. ಬಿಜೆಪಿಗೆ ಕೃತಜ್ಞತೆ ಸಲ್ಲಿಸುವುದನ್ನು ಮರೆಯಬಾರದು ಎಂದುಕೊಂಡು, ಹಿಂದುತ್ವ ಪ್ರತಿಪಾದಕರ Hidden Agendaವನ್ನು ಒಂದೊಂದಾಗಿ ಸಮರ್ಥಿಸುವುದು ತಮ್ಮ ಕರ್ತವ್ಯ ಎಂದುಕೊಂಡು ಈಗ ಸಂವಿಧಾನವನ್ನು ಬದಲಿಸುವ ಪ್ರಸ್ತಾಪ ಮಾಡಿದ್ದಾರೆ. ಸಂವಿಧಾನದಲ್ಲಿ ಅಥವಾ ರಾಜ್ಯಾಂಗದಲ್ಲಿ ಏನೇನು ಬದಲಾವಣೆ ತರಬೇಕು ಎಂಬುದನ್ನು ವಿವರಿಸುವ ಧೈರ್ಯ ಅವರು ಮಾಡಲಿಲ್ಲ. ಮುಗುಮ್ಮಾಗಿ ಸಂವಿಧಾನದಲ್ಲಿ ಬದಲಾವಣೆಗೆ ತರಬೇಕು ಎಂದು ಸಾಹಿತ್ಯ ಸಮ್ಮೇಳನ ಒಂದರಲ್ಲಿ ಪ್ರಸ್ತಾಪಿಸಿದ್ದಾರೆ. ಈ ಮಾತಿಗೂ ಸಾಕಷ್ಟು ಪ್ರತಿಭಟನೆ ವ್ಯಕ್ತವಾಗಿದೆ. ಹಾವೇರಿ ಸಮ್ಮೇಳನ ನಡೆಯುವುದೇ ಆದರೆ ಕನ್ನಡಿಗರು ದೊಡ್ಡರಂಗೇಗೌಡರಿಗೆ ಚಾರಿತ್ರಿಕ ಪ್ರತಿಭಟನೆ ತೋರುತ್ತಾರೆ. ಬಿಜೆಪಿಯ ವಕ್ತಾರನಾಗಲು ಬಯಸುವ ನಾನು ಯಾಕಾದರು ಈ ಸಮ್ಮೇಳನಾಧ್ಯಕ್ಷ ಪದವಿಯನ್ನು ಒಪ್ಪಿಕೊಂಡೆ ಎಂದು ಪರಿತಪಿಸುತ್ತಾರೆ.

ದೊಡ್ಡರಂಗೇಗೌಡರು ಇನ್ನು ಮುಂದೆ ಕನ್ನಡಿಗರ ಹಿತವನ್ನು ಕಾಪಾಡುವವರಲ್ಲ. ಅವರು ಬಿಜೆಪಿಯ ಬಾಯಿ ಹರುಕ ಶಾಸಕರಂತೆ ತಾವೂ ಒಬ್ಬ ವಕ್ತಾರರಾಗಿ ಪರಿವರ್ತನೆಗೊಳ್ಳುವವರು ಎಂಬುದನ್ನು ಸಾಬೀತುಮಾಡಿದ್ದಾರೆ.
ಮನುಷ್ಯ ಎಷ್ಟೇ ಬುದ್ಧಿವಂತನಾಗಿರಲಿ, ಬದ್ಧತೆಯನ್ನುಳ್ಳವನಾಗಿರಲಿ ಸರ್ಕಾರ ನೀಡುವ ಬಿರುದು ಬಾವಲಿ ಸ್ಥಾನಮಾನಗಳಿಗೆ ಮನ ಸೋತರೆ ಎಷ್ಟು ಕ್ರೂರನಾಗಬಲ್ಲ, ದಾಸನಾಗಬಲ್ಲ ಎಂಬುದಕ್ಕೆ ಜ್ವಲಂತ ಉದಾಹರಣೆ ದೊಡ್ಡರಂಗೇಗೌಡರು.

ದೊಡ್ಡರಂಗೇಗೌಡರನ್ನು ಅನೇಕ ವರ್ಷಗಳಿಂದ ಬಲ್ಲವನು ನಾನು. ಅವರನ್ನು ಕಂಡರೆ ನನಗೆ ತುಂಬ ಗೌರವ, ಮೆಚ್ಚುಗೆ. ಅವರಿಗೆ ತಮ್ಮ ಹೆಸರು ಬೆಳಗಬೇಕು ಎಂಬ ಆಸೆ ಇತ್ತು. ಅದನ್ನೂ ನಾನು ಬಲ್ಲೆ. ಆದರೆ ಅವರು For a pot of Porridgeಗೋಸ್ಕರ ತಮ್ಮ soulಅನ್ನೇ ಮಾರಿಕೊಳ್ಳುವವರು ಎಂದು ನಾನು ಭಾವಿಸಿರಲಿಲ್ಲ. ಕನ್ನಡಿಗರೆಲ್ಲರ ಹೃನ್ಮನಗಳನ್ನು ಗೆದ್ದಿದ್ದ ಅವರಿಗೆ ಪದ್ಮಭೂಷಣ ಎಂಬ ಚಿನ್ನದ ಉರುಳು ಜನರ ಮನ್ನಣೆಗಿಂತ ಹೆಚ್ಚಾಯಿತೇ? What a fall my Countrymen!

ಕನ್ನಡದ ಜನತೆಗೆಲ್ಲರಿಗೂ ಬೇಕಾಗಿದ್ದ ಅವರು ಈಗ ಹಿಂದುತ್ವ ಪ್ರತಿಪಾದಕರ ಸಣ್ಣ ಪಂಗಡದ ಅಡಿಯಾಳಾದರೇಕೆ ಎಂಬುದು ನನ್ನನ್ನು ಬಾಧಿಸುವ ಪ್ರಶ್ನೆ.


ಇದನ್ನೂ ಓದಿ: “ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...