Homeಮುಖಪುಟನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ - ಗುಜರಾತ್‌ನಲ್ಲಿ ಕೇಜ್ರಿವಾಲ್

ನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ – ಗುಜರಾತ್‌ನಲ್ಲಿ ಕೇಜ್ರಿವಾಲ್

- Advertisement -
- Advertisement -

ಗುಜರಾತ್‌ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು (ಮಾ.2) ನಡೆಯುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಎಎಪಿ, “ಗುಜರಾತ್‌ನಿಂದ ಒಳ್ಳೆಯ ಸುದ್ದಿ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 24 ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗುಜರಾತ್‌ನ ನಗರಗಳಲ್ಲಿ ಪ್ರಾರಂಭವಾದ ಕ್ರಾಂತಿ ಗ್ರಾಮೀಣ ಚುನಾವಣೆಯಲ್ಲಿಯೂ ಮುಂದುವರೆದಿದೆ” ಎಂದು ಹರ್ಷ ವ್ಯಕ್ತಪಡಿಸಿದೆ.

81 ಪುರಸಭೆಗಳು, 31 ಜಿಲ್ಲಾ ಪಂಚಾಯಿತಿಗಳು ಹಾಗೂ 231 ತಾಲ್ಲೂಕು ಪಂಚಾಯಿತಿಗಳ ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು.

ಬಿಜೆಪಿ 73 ತಾಲ್ಲೂಕು ಪಂಚಾಯಿತಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 11 ಹಾಗೂ ಇತರೆ ಪಕ್ಷಗಳು 3 ಸ್ಥಾನಗಳಲ್ಲಿ ಮುಂದಿವೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 60 ಪುರಸಭೆ ಸ್ಥಾನಗಳಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ಫೆಬ್ರವರಿ 21 ರಂದು ನಡೆದ ಆರು ಪುರಸಭೆಗಳ ಚುನಾವಣೆಯಲ್ಲಿ, ಎಎಪಿಯ ಸಾಧನೆ ಅಚ್ಚರಿ ಮೂಡಿಸಿತ್ತು. ಇದೇ ಮೊದಲ ಬಾರಿಗೆ ಗುಜರಾತ್‌ನ ಎಲ್ಲಾ ನಾಗರಿಕ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಿತ್ತು. ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಎಎಪಿಯು ಕಾಂಗ್ರೆಸ್ ಅನ್ನು ಹಿಂದಿಕ್ಕಿ 27 ಸ್ಥಾನಗಳನ್ನು ಪಡೆದುಕೊಂಡು ಎರಡನೇ ಸ್ಥಾನಕ್ಕೆ ಏರಿದೆ.

ಸೂರತ್ ಮತದಾರರಿಗೆ ಧನ್ಯವಾದ ಅರ್ಪಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಸೂರತ್‌ನಲ್ಲಿ ರೋಡ್ ಶೋ ನಡೆಸಿದರು. ಜೊತೆಗೆ ಇಲ್ಲಿ 2022 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸಾಧಿಸಬೇಕಾದ ಗುರಿಯ ಕುರಿತು ಘೋಷಿಸಿದರು.

ಇದನ್ನೂ ಓದಿ: ಈ ಸಲದ ಬೇಸಿಗೆ: ಉತ್ತರ ಉರಿಯಲಿದೆ, ದಕ್ಷಿಣಕ್ಕೆ ಕೊಂಚ ರಿಲೀಫ್!

“ಒಂದು ಪಕ್ಷವು ರಾಜಿಯ ರಾಜಕಾರಣ ಮಾಡುತ್ತಿದ್ದರೆ, ಇನ್ನೊಂದು ಪಕ್ಷವು ದ್ವೇಷದ ರಾಜಕಾರಣವನ್ನು ಮಾಡುತ್ತದೆ. ಆದರೆ, ಜನರಿಗೆ ಉದ್ಯೋಗ ಬೇಕೇ ಹೊರತು ರಾಜಕೀಯವಲ್ಲ. ಜನರು ಉತ್ತಮ ರಸ್ತೆಗಳು, ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳನ್ನು ಬಯಸುತ್ತಾರೆ” ಎಂದು ಕೇಜ್ರಿವಾಲ್ ಹೇಳಿದರು.

“ಅವರು 25 ವರ್ಷಗಳಲ್ಲಿ ಏನು ಮಾಡಲು ಸಾಧ್ಯವಾಗಲಿಲ್ಲವೋ ಅದನ್ನು ನಾವು 5 ವರ್ಷಗಳಲ್ಲಿ ಮಾಡುತ್ತೇವೆ. ಗುಜರಾತ್‌ನಲ್ಲಿ ಒಮ್ಮೆ ನಮಗೆ ಐದು ವರ್ಷಗಳನ್ನು ನೀಡಿ; ನಂತರ ಬಿಜೆಪಿಯ 25 ವರ್ಷಗಳ ಆಡಳಿತವನ್ನು ನೀವು ಮರೆತುಬಿಡುತ್ತೀರಿ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷವು ಈಗಾಗಲೇ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಜನೆಯನ್ನು ಈಗಾಗಲೇ ಪ್ರಕಟಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...