Homeಮುಖಪುಟನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ರೈತರ ಪ್ರತಿಭಟನೆಗೆ ಬಂದ ಬೆಂಬಲವನ್ನು ವಿಮರ್ಶಿಸಿ ಮತ್ತು ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಮಾಡಿದ ಟ್ವೀಟ್‌ಗಳ ಸುತ್ತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಂಗಳವಾರ ತೀಕ್ಷ್ಣವಾದ ಮಾತುಗಳ ಮೂಲಕ ಪರಸ್ಪರ ದಾಳಿ ನಡೆಸಿದ್ದಾರೆ.

ಅಲಿಗಢ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನ್ ವಿಚಾರಣೆ ಮಾಡುವುದನ್ನು ಬಿಟ್ಟು ಇಬ್ಬರು ಭಾರತರತ್ನ ಪ್ರಶಸ್ತಿ ಪುರಸ್ಕೃತರ ವಿರುದ್ಧ ಆಡಳಿತಾರೂಢ ಶಿವಸೇನೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಫಡ್ನವೀಸ್ ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಗೃಹಸಚಿವ ದೇಶಮುಖ್, “ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ, ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಣೆ ಮಾಡುತ್ತಿದ್ದೇವೆ” ಎಂದಿದ್ದಾರೆ,

ಇತ್ತೀಚಿನ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಭಾಷಣ ಮಾಡುವಾಗ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ’ ಭಾಷಣವನ್ನು ಶರ್ಜಿಲ್ ಉಸ್ಮಾನ್ ಮಾಡಿದ್ದಾರೆ ಎಂದು ಆರೋಪಿಸಿರುವ ಫಡ್ನವೀಸ್, ಮಹಾರಾಷ್ಟ್ರ ಸರ್ಕಾರಕ್ಕೆ ಉಸ್ಮಾನ್ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

“ಉಸ್ಮಾನ್ ಹಿಂದೂಗಳನ್ನು ಅವಮಾನಿಸುತ್ತಾರೆ ಮತ್ತು ನೀವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎಲ್ಗಾರ್ ಪರಿಷತ್ ಸದಸ್ಯರು ಸಹ ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾರೆ, ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಯಾವುದೇ ಧೈರ್ಯವಿಲ್ಲ. ಆದರೆ ನೀವು ಭಾರತರತ್ನ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರುತ್ತೀರಿ’ ಎಂದು ಫಡ್ನವೀಸ್ ಅಸೆಂಬ್ಲಿಯಲ್ಲಿ ಹೇಳಿದರು.

“ಒಂದು ವೇಳೆ ನಾನು ಅವರನ್ನು ಆ ರೀತಿ ಟ್ವೀಟ್ ಮಾಡಲು ಕೇಳಿದೆ ಎಂದು ಭಾವಿಸೋಣ … ಹಾಗಾದರೆ ಇಲ್ಲಿ ನನ್ನ ಮೇಲಿನ ಆರೋಪ ಏನು? ಭಾರತವನ್ನು ಬೆಂಬಲಿಸಿ ಟ್ವೀಟ್ ಮಾಡಲು ನನ್ನ ಪಕ್ಷವು ಅವರನ್ನು ಕೇಳಿದ್ದರೆ, ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಫಡ್ನವೀಸ್ ಘೋಷಿಸಿದ್ದರು, “ನಾವು ನಿಮ್ಮ ವಿಚಾರಣೆಗೆ ಹೆದರುವುದಿಲ್ಲ’ ಎಂದು ಗೃಹ ಸಚಿವ ದೇಶಮುಖ್‌ಗೆ ಸವಾಲು ಹಾಕಿದರು.

ಈ ದಾಳಿಗೆ ಗೃಹ ಸಚಿವರು ಉತ್ತರಿಸಿದ್ದು, “ನಾವು ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಿಸುತ್ತಿದ್ದೇವೆ. ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಿಸುತ್ತಿಲ್ಲ … ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ನಮ್ಮ ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.

“ನೀವು ರಾಷ್ಟ್ರವನ್ನು ಬೆಂಬಲಿಸುವ ಜನರ ವಿರುದ್ಧ ವಿಚಾರಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಇದು ನಿಮ್ಮ ದೇಶಪ್ರೇಮವನ್ನು ತೋರಿಸುತ್ತದೆ’ ಎಂದು ಫಡ್ನವೀಸ್ ವ್ಯಂಗ್ಯ ಮಾಡಿದರು.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಕಾಂಗ್ರೆಸ್ ಸಚಿನ್ ಅಥವಾ ರೇಖಾ ಅವರನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ನಾವು ಅವರನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಇಂದು ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಸೆಲೆಬ್ರಿಟಿಗಳನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಿ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಬಾಲಿವುಡ್ ಮತ್ತು ಕ್ರಿಕೆಟ್ ಸೆಲೆಬ್ರಿಟಿಗಳು ಪಾಪ್ ತಾರೆ ರಿಹಾನ್ನಾ ಅವರ ರೈತರ ಪರ ಟ್ವೀಟ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರವನ್ನು ಬೆಂಬಲಿಸಿದ್ದರು.

ಈ ಹಲವಾರು ಟ್ವೀಟ್‌ಗಳು ಒಂದಕ್ಕೊಂದು ಹೋಲುತ್ತಿದ್ದವು, ಇದು, ಅವುಗಳು ಕೇಂದ್ರದಿಂದ ರಚಿಸಲ್ಪಟ್ಟವು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿತ್ತು ಮತ್ತು ಟ್ವೀಟ್ ಮಾಡಿದವರಲ್ಲಿ ಅನೇಕರು ಸರ್ಕಾರದ ‘ನಿರ್ದೇಶನದ’ ಮೇರೆಗೆ ಟ್ವೀಟ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ, ಕೇಂದ್ರವು ತೆಂಡೂಲ್ಕರ್ ಮತ್ತು ಮಂಗೇಶ್ಕರ್ ಅವರಂತಹವರನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕೆ ಮಾಡಿದ್ದರು.

ಗೃಹ ಸಚಿವ ದೇಶಮುಖ್ ಅವರು ಈ ಟ್ವೀಟ್‌ಗಳ ಹಿಂದಿನ ರಾಜಕೀಯದ ಕುರಿತು ತನಿಖೆಗೆ ಆದೇಶಿಸಿದ್ದರು. ‘ಬಿಜೆಪಿಯ ವಿರುದ್ಧ ಮಾತನಾಡಿದರೆ ರಾಜಕಾರಣಿಗಳಿಗೆ ಇ.ಡಿ ಅಥವಾ ಸಿಬಿಐ ತನಿಖೆಯ ಬೆದರಿಕೆ ಹಾಕುತ್ತಾರೆ… ಸೆಲೆಬ್ರಿಟಿಗಳ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ, ನಾವು ಖಂಡಿತವಾಗಿಯೂ ಆ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದರು.


ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...