Homeಕರ್ನಾಟಕಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

- Advertisement -
- Advertisement -

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ.

ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ನೆಟ್ಟಿಗರು ಸಚಿವ ಅಧಿಕಾರವನ್ನು ಬಳಸಿಕೊಂಡು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಿಡಿಕಾರಿದ್ದಾರೆ.

ಈ ಪ್ರಕರಣ ಕುರಿತು ತನಿಖೆ ನಡೆಸುವಂತೆ ನಾಗರೀಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷರಾದ ದಿನೇಶ ಕಲ್ಲಹಳ್ಳಿ ಅವರು ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದರಾದರೂ ಅವರ ದೂರನ್ನು ಪೊಲೀಸರು ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ಈ ದೂರಿನ ಪತ್ರವು ನಾನುಗೌರಿ.ಕಾಮ್‌ಗೆ ಲಭ್ಯವಾಗಿದ್ದು, ದಿನೇಶ ಕಲ್ಲಹಳ್ಳಿ ಅವರು ಸಚಿವರು ಯುವತಿಗೆ ಕೆಲಸದ ಆಮೀಷ ಒಡ್ಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಲೈಂಗಿಕ ಕಿರುಕುಳ ಮಾತ್ರವಲ್ಲದೆ ಯುವತಿಗೆ ಜೀವ ಬೆದರಿಕೆಯನ್ನೂ ಹಾಕುತ್ತಿದ್ದಾರೆಂದು ದೂರಿನಲ್ಲಿ ತಿಳಿಸಿಲಾಗಿದೆ. ದೂರಿನೊಂದಿಗೆ ಲೈಂಗಿಕ ಕಿರುಕುಳದ ಆಡಿಯೊ, ವಿಡಿಯೋ ಸಿಡಿಯನ್ನೂ ಲಗತ್ತಿಸಲಾಗಿದೆ ಎಂದು ಬರೆದಿದ್ದಾರೆ.

 

ತಮ್ಮ ವಿರುದ್ದ ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ರಮೇಶ್‌ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಪ್ರಕರಣದ ಬಗ್ಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು ಸಚಿವ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

“ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಹೇಯ ಕೃತ್ಯ. ಬಿಜೆಪಿ ಪಕ್ಷ ಎಂದರೆ ಕಾಮಲೀಲೆ ಪಕ್ಷ ಎಂದು ಮತ್ತೊಮ್ಮೆ ಸಾಬೀತಾಗಿದೆ. ಅಧಿಕಾರದಲ್ಲಿದ್ದಾಗ ಮುಗ್ಧ ಹೆಣ್ಣುಮಕ್ಕಳ ಬಗ್ಗೆ ನಡೆಯುವ ಇಂತಹ ಕಾಮಲೀಲೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಕೂಡಲೇ ಇವನನ್ನ ಪಕ್ಷದಿಂದ ಅಮಾನತುಗೊಳಿಸಿ ಸಚಿವ ಸಂಪುಟದಿಂದ ವಜಾಗೊಳಿಸದೇ ಹೋದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇವೆ” ಎಂದು ಕಾಂಗ್ರೆಸ್ ಪಕ್ಷವು ಎಚ್ಚರಿಕೆ ನೀಡಿದೆ.

ಕೂಡಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ: ಆಮ್ ಆದ್ಮಿ ಪಕ್ಷ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಆಗ್ರಹ

 

ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಹಾಗೂ ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ನಮ್ಮ ಕರ್ನಾಟಕದ ಘನತೆಗೆ ಕಪ್ಪು ಚುಕ್ಕೆ ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾ ಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಆಗ್ರಹಿಸಿದ್ದಾರೆ.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...