Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...