Homeಮುಖಪುಟದೆಹಲಿ ಪಾಲಿಕೆ ಉಪಚುನಾವಣೆ: 4 ವಾರ್ಡ್‌ಗಳು ಆಪ್‌ಗೆ, 1 ವಾರ್ಡ್ ಕಾಂಗ್ರೆಸ್ ಪಾಲು

ದೆಹಲಿ ಪಾಲಿಕೆ ಉಪಚುನಾವಣೆ: 4 ವಾರ್ಡ್‌ಗಳು ಆಪ್‌ಗೆ, 1 ವಾರ್ಡ್ ಕಾಂಗ್ರೆಸ್ ಪಾಲು

ತನ್ನ ತೆಕ್ಕೆಯಲ್ಲಿದ್ದ ಒಂದೇ ಒಂದು ಸ್ಥಾನವನ್ನೂ ಕಳೆದುಕೊಂಡ ಬಿಜೆಪಿ

- Advertisement -
- Advertisement -

ದೆಹಲಿ ಮಹಾನಗರ ಪಾಲಿಕೆಯ ಐದು ವಾರ್ಡ್‌ಗಳ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ನಾಲ್ಕು ವಾರ್ಡ್‌ಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆದುಕೊಂಡಿದೆ.

ಎಎಪಿ ಅಭ್ಯರ್ಥಿಗಳು ಶಾಲಿಮಾರ್ ಬಾಗ್ ನಾರ್ತ್, ಕಲ್ಯಾಣ್‌ಪುರಿ, ತ್ರಿಲೋಕ್‌ಪುರಿ ಮತ್ತು ರೋಹಿಣಿ- ಸಿ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದು, ಚೌಹಾಣ್ ಬಂಗಾರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ಫೆಬ್ರವರಿ 28 ರಂದು ನಡೆದ ಐದು ಪುರಸಭೆ ವಾರ್ಡ್‌ಗಳಿಗೆ ಉಪಚುನಾವಣೆಯಲ್ಲಿ ಶೇ .50 ಕ್ಕಿಂತ ಹೆಚ್ಚು ಮತದಾನವಾಗಿತ್ತು.

ಈ ಹಿಂದೆ ಐದು ವಾರ್ಡ್‌ಗಳಲ್ಲಿ ನಾಲ್ವರು ಎಎಪಿ ಮತ್ತು ಶಾಲಿಮಾರ್ ಬಾಗ್ ನಾರ್ತ್‌ನಲ್ಲಿ ಒಬ್ಬ ಬಿಜೆಪಿ ಕೌನ್ಸಿಲರ್ ಇದ್ದರು.

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿಯ ಜನರು ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

’ದೆಹಲಿಯ ಜನರು ಅವರು ಬಿಜೆಪಿಯಿಂದ ಬೇಸರಗೊಂಡಿದ್ದಾರೆ. ಅದಕ್ಕೆ ಈ ಚುನಾವಣೆಯೇ ಅದರ ಸೂಚನೆಯಾಗಿದೆ. 2022 ರ ದೆಹಲಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸಂಪೂರ್ಣವಾಗಿ ಅಳಿಸಿಹಾಕಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಉಪ ಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಎಎಪಿ ಅಭ್ಯರ್ಥಿ ಮೊಹಮ್ಮದ್ ಇಶ್ರಕ್ ಖಾನ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಚೌಧರಿ ಜುಬೈರ್ ಅಹ್ಮದ್ ಅವರು  ಚೌಹಾಣ್  ಬಂಗಾರ್‌ ವಾರ್ಡ್‌ನಲ್ಲಿ 10,642 ಮತಗಳಿಂದ ಜಯ ಸಾಧಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಶಾಲಿಮಾರ್ ಬಾಗ್ (ಉತ್ತರ) ವಾರ್ಡ್‌ ಮಹಿಳೆ ಮೀಸಲು ಕ್ಷೇತ್ರವಾಗಿತ್ತು. ಎಎಪಿಯ ಸುನೀತಾ ಮಿಶ್ರಾ ವಾರ್ಡ್ ನಂ 62 N, ಶಾಲಿಮಾರ್ ಬಾಗ್ ನಾರ್ತ್‌ನಿಂದ ಬಿಜೆಪಿ ಪ್ರತಿಸ್ಪರ್ಧಿ ಸುರ್ಬಿ ಜಾಜು ಅವರನ್ನು 2705 ಮತಗಳಿಂದ ಸೋಲಿಸಿದ್ದಾರೆ.

ಎಎಪಿ ಅಭ್ಯರ್ಥಿಗಳಾದ ತ್ರಿಲೋಕ್‌ಪುರಿಯಲ್ಲಿ ವಿಜಯ್ ಕುಮಾರ್ ಮತ್ತು ರೋಹಿಣಿ-ಸಿ ಯಲ್ಲಿ ರಾಮ್ ಚಂದರ್ ಕೂಡ ತಮ್ಮ ಹತ್ತಿರದ ಪ್ರತಿಸ್ಪರ್ಧಿಗಳಾದ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಆರಾಮದಾಯಕ  ಗೆಲುವು ಸಾಧಿಸಿದ್ದಾರೆ.

2022 ರಲ್ಲಿ ನಡೆಯುವ ದೆಹಲಿ ಮಹಾನಗರ ಪಾಲಿಕೆಯ ಎಲ್ಲಾ 272 ವಾರ್ಡ್‌ಗಳ ಚುನಾವಣೆಗೆ ಈ ಉಪಚುನಾವಣೆಯನ್ನು ಸೆಮಿಫೈನಲ್ ಎಂದು ಪರಿಗಣಿಸಲಾಗಿತ್ತು.


ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...