Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

- Advertisement -
- Advertisement -

ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮತ್ತು ಸಿಡಿ ವಿವಾದದಲ್ಲಿ ಸಿಲುಕಿಕೊಂಡಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ.

ಸಿಡಿ ನಕಲಿಯಾಗಿದೆ. ನಾನು ರಾಜೀನಾಮೆ ನೀಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ರಮೇಶ್ ಜಾರಕಿಹೊಳಿ ಮೇಲೆ ವಿಪಕ್ಷ ನಾಯಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ನಂತರ ಮತ್ತೆ ಸಚಿವ ಆಗುತ್ತೇನೆ ಎಂದು ರಮೇಶ್‌ ಅವರು ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ…

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.

“ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಹೇಯ ಕೃತ್ಯ. ಬಿಜೆಪಿ ಪಕ್ಷ ಎಂದರೆ ಕಾಮಲೀಲೆ ಪಕ್ಷ ಎಂದು ಮತ್ತೊಮ್ಮೆ ಸಾಬೀತಾಗಿದೆ. ಅಧಿಕಾರದಲ್ಲಿದ್ದಾಗ ಮುಗ್ಧ ಹೆಣ್ಣುಮಕ್ಕಳ ಬಗ್ಗೆ ನಡೆಯುವ ಇಂತಹ ಕಾಮಲೀಲೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಕೂಡಲೇ ಇವರನ್ನ ಪಕ್ಷದಿಂದ ಅಮಾನತುಗೊಳಿಸಿ ಸಚಿವ ಸಂಪುಟದಿಂದ ವಜಾಗೊಳಿಸದೇ ಹೋದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇವೆ” ಎಂದು ಕಾಂಗ್ರೆಸ್ ಪಕ್ಷವು ಎಚ್ಚರಿಕೆ ನೀಡಿತ್ತು.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಪ್ರಶ್ನಿಸಿದ್ದರು.

ಇತ್ತ ರಮೇಶ್‌ ಜಾರಕಿಹೊಳಿಯವರದ್ದು ಎಂದು ಹೇಳಲಾಗುತ್ತಿರುವ ವೀಡಿಯೋ ಕುರಿತು ಸಿಐಡಿ ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಯಡಿಯೂರಪ್ಪ ಅವರನ್ನು ಬಾಲಚಂದರ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬಾಲಚಂದರ್ ಜಾರಕಿಹೊಳಿ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್‌) ಅಧ್ಯಕ್ಷರಾಗಿದ್ದು, ರಮೇಶ್ ಜಾರಕಿಹೊಳಿಯವರ ಸಹೋದರರಾಗಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಬಗ್ಗೆ CBI ತನಿಖೆ ಅಗತ್ಯ: ಬಾಲಚಂದರ್ ಜಾರಕಿಹೋಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...