Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...