Homeಕರ್ನಾಟಕ'ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ' - ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ- ಪಂಚಮಸಾಲಿ ಸ್ವಾಮೀಜಿ

- Advertisement -
- Advertisement -

ರಾಜಧಾನಿಗೆ ಪಾದಯಾತ್ರೆ, ರಾಜಧಾನಿಯಲ್ಲಿ ಬೃಹತ್ ಸಭೆ ನಡೆಸುವ ಮೂಲಕ ಲಿಂಗಾಯತರ ಒಳಪಂಗಡವಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಡ ಹಾಕಲಾಗಿದೆ.

ಇದರ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಿಂದೆಲ್ಲ ಪ್ರಗತಿಪರ ಚಳುವಳಿಗಳಲ್ಲಿ ಕಾಣಿಸಿಕೊಂಡವರು. ಆದರೆ, ಈಗ ಅವರ ನೇತೃತ್ವದ ಹೋರಾಟ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಕುರಿತು ಫೋನಿನಲ್ಲಿ ಸ್ವಾಮೀಜಿ ನಾನುಗೌರಿ.ಕಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನುಗೌರಿ: ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು. ಅದರಲ್ಲಿ ಬಹು ಸಂಖ್ಯಾತರಾದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡುವುದು ತಪ್ಪಲ್ಲವೆ?

ಸ್ವಾಮೀಜಿ: ಆರ್ಥಿಕವಾಗಿ ಪಂಚಮಸಾಲಿಗಳು ತುಂಬ ತೊಂದರೆಯಲ್ಲಿದ್ದಾರೆ. ಕೃಷಿಯನ್ನೇ ಆಧಾರ ಮಾಡಿಕೊಂಡಿರುವ ಸಮುದಾಯ ಸಂಕಷ್ಟದಲ್ಲಿದೆ. ಶೈಕ್ಷಣಿಕವಾಗಿಯೂ ಹಿಂದುಳಿದಿದ್ದಾರೆ. ಹೀಗಿರುವಾಗ ಹೆಚ್ಚಿನ ಮೀಸಲಾತಿ ಕೇಳಲು ಸಂವಿಧಾನವೇ ಅವಕಾಶ ನೀಡಿದೆ.

ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

ನಾನುಗೌರಿ: ನಿಮ್ಮ ಉತ್ತರದಲ್ಲೇ ಹಲವು ಪ್ರಶ್ನೆ ಇವೆ. ಕೃಷಿಕರು-ಕೃಷಿ ಕಾರ್ಮಿಕರೇ ಹೆಚ್ಚಿರುವ ಪಂಚಮಸಾಲಿಗಳ ಹೋರಾಟ ಮುನ್ನಡೆಸುವಾಗ ನೀವು ಸಾಂಕೇತಿಕವಾಗಿ ನೇಗಿಲು ಹಿಡಿದಿದ್ದಿರಿ. ಆದರೆ, ಒಮ್ಮೆಯೂ, ಎಲ್ಲಿಯೂ ನೀವು ಕರಾಳ ಕೃಷಿ ಕಾನೂನುಗಳ ವಿರುದ್ಧ ಮತ್ತು ಪ್ರತಿಭಟಿಸುತ್ತಿರುವ ರೈತರ ಪರ ಒಂದೂ ಹೇಳಿಕೆ ನೀಡಿಲ್ಲವಲ್ಲ?

ಸ್ವಾಮೀಜಿ: ಖಂಡಿತವಾಗಿಯೂ ರೈತರ ಹೋರಾಟದ ಬೆಂಬಲಿಗ ನಾನು. ಆದರೆ, ಮಾಧ್ಯಮಗಳು ಈ ರೈತ ಹೋರಾಟವನ್ನು ತಪ್ಪಾಗಿ ಬಿಂಬಿಸಿವೆ. ನಾವೇನಾದರೂ ಈಗ ರೈತ ಹೋರಾಟದ ಪರ, ಕೃಷಿ ಕಾನೂನುಗಳ ವಿರುದ್ಧ ಹೇಳಿಕೆ ಕೊಟ್ಟರೆ ನಮ್ಮ ಮೀಸಲಾತಿ ಹೋರಾಟವನ್ನು ಮಾಧ್ಯಮಗಳು ತುಳಿದೇ ಬಿಡುತ್ತವೆ.

ನಾನುಗೌರಿ: ಬಹುಪಾಲು ಪಂಚಮಸಾಲಿಗಳು ಬಿಜೆಪಿಯ ಬೆಂಬಲಿಗರಾಗಿರುವ ಕಾರಣಕ್ಕೆ ನೀವು ಸಾಫ್ಟ್ ಸ್ಟ್ಯಾಂಡ್ ತಗೊಂಡಿದ್ದೀರಾ ಎಂಬ ಆರೋಪವಿದೆಯಲ್ಲ?

ಸ್ವಾಮೀಜಿ: ಹಾಗೇನೂ ಇಲ್ಲ. ನಮ್ಮ ಬೇಡಿಕೆ ಈಡೇರಬೇಕು ಅಷ್ಟೇ. ಸಮುದಾಯದ ಪಾಲಿಟಿಕಲ್ ಒರಿಯೆಂಟೆಶನ್ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಅನಿಸುತ್ತದೆ.

ನಾನುಗೌರಿ: ಪ್ರತಿಭಟನೆ ಎಂದರೆ, ಅದು ಪ್ರಭುತ್ವದ ವಿರುದ್ಧವೇ ಇರುತ್ತದೆ. ನಿಮ್ಮ ಪ್ರತಿಭಟನೆ-ಹೋರಾಟ ಕೇಂದ್ರ-ರಾಜ್ಯಗಳ ಬಿಜೆಪಿ ಸರ್ಕಾರದ ವಿರುದ್ಧವಾಗಿರುವಾಗ, ನಿಮ್ಮ ಸಭೆ-ಸಮಾವೇಶಗಳಲ್ಲಿ ಸಚಿವರಾದ ನಿರಾಣಿ-ಸಿಸಿ ಪಾಟೀಲರಿಗೇನು ಕೆಲಸ?

ಸ್ವಾಮೀಜಿ: ಅವರು ಜನಾಂಗದ ನಾಯಕರಾಗಿ ಭಾಗವಹಿಸಿದ್ದಾರೆ ಅಷ್ಟೇ…

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ: ಹಿಂದೆ ನೀವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಇದ್ದಿರಿ. ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಎಲ್ಲ ಬಡ ಲಿಂಗಾಯತರಿಗೂ ಶೈಕ್ಷಣಿಕ ಮೀಸಲಾತಿ ತನ್ನಿಂದ ತಾನೇ ಸಿಗುತ್ತಿತ್ತು ಅಲ್ಲವೆ?

ಸ್ವಾಮೀಜಿ: 800-900 ವರ್ಷಗಳ ಹಿಂದೆಯೇ ಲಿಂಗಾಯತ ಪ್ರತ್ಯೇಕ ಧರ್ಮವಾಗಿದೆ. ಅದಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂಬುದು ನಮ್ಮ ಬೇಡಿಕೆ. ಆದರೆ, ಸರ್ಕಾರಗಳು ಮತ್ತು ಮಾಧ್ಯಮಗಳು ಇಡೀ ಹೋರಾಟವನ್ನೆ ತಪ್ಪಾಗಿ ಬಿಂಬಿಸಿದವು. ಈಗ ಒಂದು ಜಾತಿಗಾಗಿ ನಾವು ನ್ಯಾಯಬದ್ಧ ಮೀಸಲಾತಿ ಕೇಳುತ್ತಿದ್ದೇವೆ.

ನಾನುಗೌರಿ: ಗೌರಿ ಲಂಕೇಶ್ ಮತ್ತು ಪ್ರೊ ಕಲಬುರ್ಗಿ ಅವರ ಹತ್ಯೆಗಳನ್ನು ನೀವು ತೀವ್ರವಾಗಿ ಖಂಡಿಸಿದವರು. ಅವರನ್ನು ಕೊಂದ ಸಿದ್ದಾಂತಗಳನ್ನೇ ಉಸಿರಾಡುವ ಬಸನಗೌಡ ಪಾಟೀಲ್ ಯತ್ನಾಳರು ನಿಮ್ಮ ಹೋರಾಟದ ರಾಜಕೀಯ ಮುಖವಾಣಿ ಆಗಿದ್ದಾರೆ ಅಲ್ಲವೆ?

ಸ್ವಾಮೀಜಿ: ಗೌರಿ ಮತ್ತು ಕಲಬುರ್ಗಿಯವರ ಬಗ್ಗೆ ನನಗೆ ತುಂಬ ಗೌರವ ಇದೆ. ಸತ್ಯ ಹೇಳುವವರನ್ನು ಎದುರಿಸಲಾಗದ ಹೇಡಿಗಳು ಕೊಲೆಯ ಮಟ್ಟಕ್ಕೆ ಇಳಿದಿದ್ದಾರೆ. ಯತ್ನಾಳ್ ಮುಂಚಿನಿಂದಲೂ ಆರ್‌ಎಸ್‌ಎಸ್ ಸಿದ್ದಾಂತದವರು ಎಂಬುದು ಗೊತ್ತೇ ಇರುವ ವಿಷಯ. ನಮ್ಮ ಸಭೆ-ಸಮಾವೇಶಗಳಲ್ಲಿ ಅವರು ಕೇವಲ ಜನಾಂಗದ ಮುಖಂಡರಾಗಿಯಷ್ಟೇ ಭಾಗವಹಿಸಿದ್ದಾರೆ. ನಾನು ಎಂದಿಗೂ ಕೊಲ್ಲುವ ಸಿದ್ದಾಂತ, ದ್ವೇಷ ಸೃಷ್ಟಿಸುವ ಐಡಿಯಾಲಜಿಯ ವಿರುದ್ಧವೇ ಇದ್ದೇನೆ.

ನಾನುಗೌರಿ: ‘3ಎ’ ಮತ್ತು ‘3ಬಿ’ಯಲ್ಲಿ ಇರುವ ಇತರ ಲಿಂಗಾಯತರ ಬಗ್ಗೆ ತಮಗೆ ಕಾಳಜಿ ಇಲ್ಲವೆ?

ಸ್ವಾಮೀಜಿ: ನಮ್ಮ ಸಮುದಾಯದ ಪರ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇತರ ಲಿಂಗಾಯತರೂ ಹೋರಾಟ ಮಾಡಿದರೆ ಬೆಂಬಲ ನೀಡುತ್ತೇವೆ.

ನಾನುಗೌರಿ: ದೊಡ್ಡ ಸಮುದಾಯವೊಂದು 2ಎ ಹೊಕ್ಕರೆ ಅಲ್ಲಿರುವ ಇತರ ಧ್ವನಿಯಿಲ್ಲದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಆಗುತ್ತಲ್ಲ?

ಸ್ವಾಮೀಜಿ: ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ. ಸಂವಿಧಾನದ ಪ್ರಕಾರ ನಮಗೆ ಸಿಗಬೇಕಾದ ಮೀಸಲಾತಿ ಸೌಲಭ್ಯ ನೀಡಲು ಹಲವು ಮಾರ್ಗಗಳಿವೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...