Homeಮುಖಪುಟ2 ಕೋಟಿ ಉದ್ಯೋಗ ಎಲ್ಲಿ: "ಉತ್ತರ ಕೊಡಿ ಮೋದಿ" ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು.

- Advertisement -
- Advertisement -

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ದ ಎಚ್ಚೆತ್ತಿರುವ ಯುವಜನತೆ ಸಾಲು ಸಾಲು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಗದ ಕಾರಣ ಬುಧವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ‘ಮೋದಿ ಉತ್ತರ ಕೊಡಿ’ (ಮೋದಿ ಜವಾಬ್ ದೋ) ಅಭಿಯಾನ ಆರಂಭಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು. ವಿದ್ಯಾರ್ಥಿಗಳು, ಯುವಜನತೆ, ವಿರೋಧಪಕ್ಷಗಳು ಸೇರಿದಂತೆ ದೇಶದ ಜನರು ಪ್ರಧಾನಿಯವರನ್ನು ಉತ್ತರ ಕೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಕೇಳಿರುವ ಯುವಜನತೆ ತಮ್ಮದೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರೆ, ವಿದ್ಯಾರ್ಥಿಗಳು ಕೂಡ ತಮ್ಮ ಬೇಡಿಕೆಗಳನ್ನು ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಪ್ರಧಾನಿಯವರೇ ನಾವು ಈ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳುತ್ತಿದ್ದೇವೆ ಉತ್ತರ ನೀಡಿ ಎಂದು ಬೇಡಿಕೆಗಳ ಪಟ್ಟಿಯನ್ನು ಯುವಜನತೆ ಮುಂದಿಟ್ಟಿದ್ದಾರೆ.
(1) ಸಮಯೋಚಿತ ಅಧಿಸೂಚನೆ
(2) ಸಮಯೋಚಿತ ಪರೀಕ್ಷೆ
(3) ಸಮಯೋಚಿತ ಫಲಿತಾಂಶ
(4) ವೇಯ್ಟಿಂಗ್ ಲಿಸ್ಟ್
(5) ಹುದ್ದೆಗಳನ್ನು ಹೆಚ್ಚಿಸಿ
(6) ನಿಯಮಿತ ನೇಮಕಾತಿ
(7) ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ

ಇವುಗಳ ಬಗ್ಗೆ ದಯವಿಟ್ಟು ಉತ್ತರ ನೀಡಿ ಪ್ರಧಾನಿಯವರೇ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಪಟ್ಟಿಯನ್ನು ಇಟ್ಟು ಉತ್ತರಿಸುವಂತೆ ಕೇಳಿದ್ದಾರೆ.

1. ಖಾಲಿ ಹುದ್ದೆಗಳನ್ನು ಹೆಚ್ಚಿಸಿ

2. ಸಮಯೋಚಿತ ಪರೀಕ್ಷೆ
3. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ
4. ಸಮಯೋಚಿತ ಫಲಿತಾಂಶಗಳು
5. ವೇಗವಾದ ನೇಮಕಾತಿ

ಇವುಗಳ ಬಗ್ಗೆ ಏನಾದರೂ ಮಾತನಾಡಿ ಎಂದು ಆಗ್ರಹಿಸಿದ್ದಾರೆ.

ಯುವಜನತೆಯ ಅಭಿಯಾನವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ, ವಿದ್ಯಾರ್ಥಿಗಳ, ನಿರುದ್ಯೋಗದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ ಎಂದು #modi_jawab_do ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ಈ ದೇಶದ ನಿರುದ್ಯೋಗಿಗಳು, ಕಾರ್ಮಿಕರು, ರೈತರು, ದಲಿತರು, ಬುಡಕಟ್ಟು ಸಮುದಾಯಗಳು ನಿಮ್ಮಿಂದ ಉತ್ತರವನ್ನು ಬಯಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಮೋದಿಯವರ ದಾಡಿ ಬೆಳೆದಂತೆ ಉದ್ಯೋಗದ ಗ್ರಾಫ್‌ ಕೂಡ ಕೆಳಗಿಳಿಯುತ್ತಿದೆ ಎಂದು ಪ್ರಧಾನಿಯವರ ದಾಡಿಯ ಚಿತ್ರವನ್ನು ಹಂಚಿಕೊಂಡು ಯೋಗೇಂದ್ರ ಸಿಂಗ್ ಎನ್ನುವವರು ವ್ಯಂಗ್ಯವಾಡಿದ್ದಾರೆ.

ಯುವಜನತೆ ಇಷ್ಟು ಕೇಳಿಕೊಂಡರು ಮಾತನಾಡದ ಪ್ರಧಾನಿ ಎಂದು ನಿದ್ದೆ ಮಾಡುತ್ತಿರುವ ಕುಂಬಕರ್ಣನಿಗೆ ಹೋಲಿಸಿ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ನಿರುದ್ಯೋಗದ ಬಗ್ಗೆ ಮಾತನಾಡದ, ಪ್ರಧಾನ ಮಂತ್ರಿಯವರಲ್ಲಿ ಒಂದು ಪ್ರಶ್ನೆ ಕೇಳದ ಸುದ್ದಿ ಮಾಧ್ಯಮಗಳನ್ನು ಬಾಯ್ಕಾಟ್ ಮಾಡಿ ಎಂದು ಯುವಜನತೆ ಕೇಳುತ್ತಿದ್ದಾರೆ.

ಈಗಾಗಲೇ ಹಲವಾರು ಬಾರಿ ದೇಶದಲ್ಲಿ ಯುವಜನತೆ ಉದ್ಯೋಗಕ್ಕಾಗಿ ಬೀದಿಗಿಳಿದಿದೆ. ಆದರೂ ಕೂಡ ಯಾವುದೇ ಉಪಯೋಗವಾಗಿಲ್ಲ. ದಿನಕಳೆದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದ ಊದ್ಯೋಗಗಳನ್ನ ನುಂಗಿ ,ಸಕಾ೯ರಿ ವಲಯಗಳನ್ನ ಖಾಸಗಿಕರಣ ಗೊಳಿಸುವ ಇವರು ಊದ್ಯೋಗಗಳನ್ನ ಭವಿಷ್ಯ ಸ್ವಗ೯ದಲ್ಲಿ ಸೃಷ್ಟಿಸಬಹುದು

  2. ಅಂಬಾನಿ ಗಾಗಿ ಪ್ರಧಾನಿ ಯಾದವರು…
    ಭಾರತೀಯರ ಗಾಗಿ ಅಲ್ಲ….
    ಉತ್ತರವೇಕೆ ಕೊಡಬೇಕು…..

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...