Homeಮುಖಪುಟ2 ಕೋಟಿ ಉದ್ಯೋಗ ಎಲ್ಲಿ: "ಉತ್ತರ ಕೊಡಿ ಮೋದಿ" ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು.

- Advertisement -
- Advertisement -

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ದ ಎಚ್ಚೆತ್ತಿರುವ ಯುವಜನತೆ ಸಾಲು ಸಾಲು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಗದ ಕಾರಣ ಬುಧವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ‘ಮೋದಿ ಉತ್ತರ ಕೊಡಿ’ (ಮೋದಿ ಜವಾಬ್ ದೋ) ಅಭಿಯಾನ ಆರಂಭಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು. ವಿದ್ಯಾರ್ಥಿಗಳು, ಯುವಜನತೆ, ವಿರೋಧಪಕ್ಷಗಳು ಸೇರಿದಂತೆ ದೇಶದ ಜನರು ಪ್ರಧಾನಿಯವರನ್ನು ಉತ್ತರ ಕೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಕೇಳಿರುವ ಯುವಜನತೆ ತಮ್ಮದೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರೆ, ವಿದ್ಯಾರ್ಥಿಗಳು ಕೂಡ ತಮ್ಮ ಬೇಡಿಕೆಗಳನ್ನು ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಪ್ರಧಾನಿಯವರೇ ನಾವು ಈ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳುತ್ತಿದ್ದೇವೆ ಉತ್ತರ ನೀಡಿ ಎಂದು ಬೇಡಿಕೆಗಳ ಪಟ್ಟಿಯನ್ನು ಯುವಜನತೆ ಮುಂದಿಟ್ಟಿದ್ದಾರೆ.
(1) ಸಮಯೋಚಿತ ಅಧಿಸೂಚನೆ
(2) ಸಮಯೋಚಿತ ಪರೀಕ್ಷೆ
(3) ಸಮಯೋಚಿತ ಫಲಿತಾಂಶ
(4) ವೇಯ್ಟಿಂಗ್ ಲಿಸ್ಟ್
(5) ಹುದ್ದೆಗಳನ್ನು ಹೆಚ್ಚಿಸಿ
(6) ನಿಯಮಿತ ನೇಮಕಾತಿ
(7) ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ

ಇವುಗಳ ಬಗ್ಗೆ ದಯವಿಟ್ಟು ಉತ್ತರ ನೀಡಿ ಪ್ರಧಾನಿಯವರೇ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಪಟ್ಟಿಯನ್ನು ಇಟ್ಟು ಉತ್ತರಿಸುವಂತೆ ಕೇಳಿದ್ದಾರೆ.

1. ಖಾಲಿ ಹುದ್ದೆಗಳನ್ನು ಹೆಚ್ಚಿಸಿ

2. ಸಮಯೋಚಿತ ಪರೀಕ್ಷೆ
3. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ
4. ಸಮಯೋಚಿತ ಫಲಿತಾಂಶಗಳು
5. ವೇಗವಾದ ನೇಮಕಾತಿ

ಇವುಗಳ ಬಗ್ಗೆ ಏನಾದರೂ ಮಾತನಾಡಿ ಎಂದು ಆಗ್ರಹಿಸಿದ್ದಾರೆ.

ಯುವಜನತೆಯ ಅಭಿಯಾನವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ, ವಿದ್ಯಾರ್ಥಿಗಳ, ನಿರುದ್ಯೋಗದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ ಎಂದು #modi_jawab_do ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ಈ ದೇಶದ ನಿರುದ್ಯೋಗಿಗಳು, ಕಾರ್ಮಿಕರು, ರೈತರು, ದಲಿತರು, ಬುಡಕಟ್ಟು ಸಮುದಾಯಗಳು ನಿಮ್ಮಿಂದ ಉತ್ತರವನ್ನು ಬಯಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಮೋದಿಯವರ ದಾಡಿ ಬೆಳೆದಂತೆ ಉದ್ಯೋಗದ ಗ್ರಾಫ್‌ ಕೂಡ ಕೆಳಗಿಳಿಯುತ್ತಿದೆ ಎಂದು ಪ್ರಧಾನಿಯವರ ದಾಡಿಯ ಚಿತ್ರವನ್ನು ಹಂಚಿಕೊಂಡು ಯೋಗೇಂದ್ರ ಸಿಂಗ್ ಎನ್ನುವವರು ವ್ಯಂಗ್ಯವಾಡಿದ್ದಾರೆ.

ಯುವಜನತೆ ಇಷ್ಟು ಕೇಳಿಕೊಂಡರು ಮಾತನಾಡದ ಪ್ರಧಾನಿ ಎಂದು ನಿದ್ದೆ ಮಾಡುತ್ತಿರುವ ಕುಂಬಕರ್ಣನಿಗೆ ಹೋಲಿಸಿ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ನಿರುದ್ಯೋಗದ ಬಗ್ಗೆ ಮಾತನಾಡದ, ಪ್ರಧಾನ ಮಂತ್ರಿಯವರಲ್ಲಿ ಒಂದು ಪ್ರಶ್ನೆ ಕೇಳದ ಸುದ್ದಿ ಮಾಧ್ಯಮಗಳನ್ನು ಬಾಯ್ಕಾಟ್ ಮಾಡಿ ಎಂದು ಯುವಜನತೆ ಕೇಳುತ್ತಿದ್ದಾರೆ.

ಈಗಾಗಲೇ ಹಲವಾರು ಬಾರಿ ದೇಶದಲ್ಲಿ ಯುವಜನತೆ ಉದ್ಯೋಗಕ್ಕಾಗಿ ಬೀದಿಗಿಳಿದಿದೆ. ಆದರೂ ಕೂಡ ಯಾವುದೇ ಉಪಯೋಗವಾಗಿಲ್ಲ. ದಿನಕಳೆದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದ ಊದ್ಯೋಗಗಳನ್ನ ನುಂಗಿ ,ಸಕಾ೯ರಿ ವಲಯಗಳನ್ನ ಖಾಸಗಿಕರಣ ಗೊಳಿಸುವ ಇವರು ಊದ್ಯೋಗಗಳನ್ನ ಭವಿಷ್ಯ ಸ್ವಗ೯ದಲ್ಲಿ ಸೃಷ್ಟಿಸಬಹುದು

  2. ಅಂಬಾನಿ ಗಾಗಿ ಪ್ರಧಾನಿ ಯಾದವರು…
    ಭಾರತೀಯರ ಗಾಗಿ ಅಲ್ಲ….
    ಉತ್ತರವೇಕೆ ಕೊಡಬೇಕು…..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...