Homeಮುಖಪುಟ2 ಕೋಟಿ ಉದ್ಯೋಗ ಎಲ್ಲಿ: "ಉತ್ತರ ಕೊಡಿ ಮೋದಿ" ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು.

- Advertisement -
- Advertisement -

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ದ ಎಚ್ಚೆತ್ತಿರುವ ಯುವಜನತೆ ಸಾಲು ಸಾಲು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಗದ ಕಾರಣ ಬುಧವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ‘ಮೋದಿ ಉತ್ತರ ಕೊಡಿ’ (ಮೋದಿ ಜವಾಬ್ ದೋ) ಅಭಿಯಾನ ಆರಂಭಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು. ವಿದ್ಯಾರ್ಥಿಗಳು, ಯುವಜನತೆ, ವಿರೋಧಪಕ್ಷಗಳು ಸೇರಿದಂತೆ ದೇಶದ ಜನರು ಪ್ರಧಾನಿಯವರನ್ನು ಉತ್ತರ ಕೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಕೇಳಿರುವ ಯುವಜನತೆ ತಮ್ಮದೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರೆ, ವಿದ್ಯಾರ್ಥಿಗಳು ಕೂಡ ತಮ್ಮ ಬೇಡಿಕೆಗಳನ್ನು ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಪ್ರಧಾನಿಯವರೇ ನಾವು ಈ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳುತ್ತಿದ್ದೇವೆ ಉತ್ತರ ನೀಡಿ ಎಂದು ಬೇಡಿಕೆಗಳ ಪಟ್ಟಿಯನ್ನು ಯುವಜನತೆ ಮುಂದಿಟ್ಟಿದ್ದಾರೆ.
(1) ಸಮಯೋಚಿತ ಅಧಿಸೂಚನೆ
(2) ಸಮಯೋಚಿತ ಪರೀಕ್ಷೆ
(3) ಸಮಯೋಚಿತ ಫಲಿತಾಂಶ
(4) ವೇಯ್ಟಿಂಗ್ ಲಿಸ್ಟ್
(5) ಹುದ್ದೆಗಳನ್ನು ಹೆಚ್ಚಿಸಿ
(6) ನಿಯಮಿತ ನೇಮಕಾತಿ
(7) ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ

ಇವುಗಳ ಬಗ್ಗೆ ದಯವಿಟ್ಟು ಉತ್ತರ ನೀಡಿ ಪ್ರಧಾನಿಯವರೇ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಪಟ್ಟಿಯನ್ನು ಇಟ್ಟು ಉತ್ತರಿಸುವಂತೆ ಕೇಳಿದ್ದಾರೆ.

1. ಖಾಲಿ ಹುದ್ದೆಗಳನ್ನು ಹೆಚ್ಚಿಸಿ

2. ಸಮಯೋಚಿತ ಪರೀಕ್ಷೆ
3. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ
4. ಸಮಯೋಚಿತ ಫಲಿತಾಂಶಗಳು
5. ವೇಗವಾದ ನೇಮಕಾತಿ

ಇವುಗಳ ಬಗ್ಗೆ ಏನಾದರೂ ಮಾತನಾಡಿ ಎಂದು ಆಗ್ರಹಿಸಿದ್ದಾರೆ.

ಯುವಜನತೆಯ ಅಭಿಯಾನವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ, ವಿದ್ಯಾರ್ಥಿಗಳ, ನಿರುದ್ಯೋಗದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ ಎಂದು #modi_jawab_do ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ಈ ದೇಶದ ನಿರುದ್ಯೋಗಿಗಳು, ಕಾರ್ಮಿಕರು, ರೈತರು, ದಲಿತರು, ಬುಡಕಟ್ಟು ಸಮುದಾಯಗಳು ನಿಮ್ಮಿಂದ ಉತ್ತರವನ್ನು ಬಯಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಮೋದಿಯವರ ದಾಡಿ ಬೆಳೆದಂತೆ ಉದ್ಯೋಗದ ಗ್ರಾಫ್‌ ಕೂಡ ಕೆಳಗಿಳಿಯುತ್ತಿದೆ ಎಂದು ಪ್ರಧಾನಿಯವರ ದಾಡಿಯ ಚಿತ್ರವನ್ನು ಹಂಚಿಕೊಂಡು ಯೋಗೇಂದ್ರ ಸಿಂಗ್ ಎನ್ನುವವರು ವ್ಯಂಗ್ಯವಾಡಿದ್ದಾರೆ.

ಯುವಜನತೆ ಇಷ್ಟು ಕೇಳಿಕೊಂಡರು ಮಾತನಾಡದ ಪ್ರಧಾನಿ ಎಂದು ನಿದ್ದೆ ಮಾಡುತ್ತಿರುವ ಕುಂಬಕರ್ಣನಿಗೆ ಹೋಲಿಸಿ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ನಿರುದ್ಯೋಗದ ಬಗ್ಗೆ ಮಾತನಾಡದ, ಪ್ರಧಾನ ಮಂತ್ರಿಯವರಲ್ಲಿ ಒಂದು ಪ್ರಶ್ನೆ ಕೇಳದ ಸುದ್ದಿ ಮಾಧ್ಯಮಗಳನ್ನು ಬಾಯ್ಕಾಟ್ ಮಾಡಿ ಎಂದು ಯುವಜನತೆ ಕೇಳುತ್ತಿದ್ದಾರೆ.

ಈಗಾಗಲೇ ಹಲವಾರು ಬಾರಿ ದೇಶದಲ್ಲಿ ಯುವಜನತೆ ಉದ್ಯೋಗಕ್ಕಾಗಿ ಬೀದಿಗಿಳಿದಿದೆ. ಆದರೂ ಕೂಡ ಯಾವುದೇ ಉಪಯೋಗವಾಗಿಲ್ಲ. ದಿನಕಳೆದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದ ಊದ್ಯೋಗಗಳನ್ನ ನುಂಗಿ ,ಸಕಾ೯ರಿ ವಲಯಗಳನ್ನ ಖಾಸಗಿಕರಣ ಗೊಳಿಸುವ ಇವರು ಊದ್ಯೋಗಗಳನ್ನ ಭವಿಷ್ಯ ಸ್ವಗ೯ದಲ್ಲಿ ಸೃಷ್ಟಿಸಬಹುದು

  2. ಅಂಬಾನಿ ಗಾಗಿ ಪ್ರಧಾನಿ ಯಾದವರು…
    ಭಾರತೀಯರ ಗಾಗಿ ಅಲ್ಲ….
    ಉತ್ತರವೇಕೆ ಕೊಡಬೇಕು…..

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...