Homeಮುಖಪುಟ2 ಕೋಟಿ ಉದ್ಯೋಗ ಎಲ್ಲಿ: "ಉತ್ತರ ಕೊಡಿ ಮೋದಿ" ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು.

- Advertisement -
- Advertisement -

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ದ ಎಚ್ಚೆತ್ತಿರುವ ಯುವಜನತೆ ಸಾಲು ಸಾಲು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಗದ ಕಾರಣ ಬುಧವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ‘ಮೋದಿ ಉತ್ತರ ಕೊಡಿ’ (ಮೋದಿ ಜವಾಬ್ ದೋ) ಅಭಿಯಾನ ಆರಂಭಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು. ವಿದ್ಯಾರ್ಥಿಗಳು, ಯುವಜನತೆ, ವಿರೋಧಪಕ್ಷಗಳು ಸೇರಿದಂತೆ ದೇಶದ ಜನರು ಪ್ರಧಾನಿಯವರನ್ನು ಉತ್ತರ ಕೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಕೇಳಿರುವ ಯುವಜನತೆ ತಮ್ಮದೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರೆ, ವಿದ್ಯಾರ್ಥಿಗಳು ಕೂಡ ತಮ್ಮ ಬೇಡಿಕೆಗಳನ್ನು ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಪ್ರಧಾನಿಯವರೇ ನಾವು ಈ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳುತ್ತಿದ್ದೇವೆ ಉತ್ತರ ನೀಡಿ ಎಂದು ಬೇಡಿಕೆಗಳ ಪಟ್ಟಿಯನ್ನು ಯುವಜನತೆ ಮುಂದಿಟ್ಟಿದ್ದಾರೆ.
(1) ಸಮಯೋಚಿತ ಅಧಿಸೂಚನೆ
(2) ಸಮಯೋಚಿತ ಪರೀಕ್ಷೆ
(3) ಸಮಯೋಚಿತ ಫಲಿತಾಂಶ
(4) ವೇಯ್ಟಿಂಗ್ ಲಿಸ್ಟ್
(5) ಹುದ್ದೆಗಳನ್ನು ಹೆಚ್ಚಿಸಿ
(6) ನಿಯಮಿತ ನೇಮಕಾತಿ
(7) ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ

ಇವುಗಳ ಬಗ್ಗೆ ದಯವಿಟ್ಟು ಉತ್ತರ ನೀಡಿ ಪ್ರಧಾನಿಯವರೇ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಪಟ್ಟಿಯನ್ನು ಇಟ್ಟು ಉತ್ತರಿಸುವಂತೆ ಕೇಳಿದ್ದಾರೆ.

1. ಖಾಲಿ ಹುದ್ದೆಗಳನ್ನು ಹೆಚ್ಚಿಸಿ

2. ಸಮಯೋಚಿತ ಪರೀಕ್ಷೆ
3. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ
4. ಸಮಯೋಚಿತ ಫಲಿತಾಂಶಗಳು
5. ವೇಗವಾದ ನೇಮಕಾತಿ

ಇವುಗಳ ಬಗ್ಗೆ ಏನಾದರೂ ಮಾತನಾಡಿ ಎಂದು ಆಗ್ರಹಿಸಿದ್ದಾರೆ.

ಯುವಜನತೆಯ ಅಭಿಯಾನವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ, ವಿದ್ಯಾರ್ಥಿಗಳ, ನಿರುದ್ಯೋಗದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ ಎಂದು #modi_jawab_do ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ಈ ದೇಶದ ನಿರುದ್ಯೋಗಿಗಳು, ಕಾರ್ಮಿಕರು, ರೈತರು, ದಲಿತರು, ಬುಡಕಟ್ಟು ಸಮುದಾಯಗಳು ನಿಮ್ಮಿಂದ ಉತ್ತರವನ್ನು ಬಯಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಮೋದಿಯವರ ದಾಡಿ ಬೆಳೆದಂತೆ ಉದ್ಯೋಗದ ಗ್ರಾಫ್‌ ಕೂಡ ಕೆಳಗಿಳಿಯುತ್ತಿದೆ ಎಂದು ಪ್ರಧಾನಿಯವರ ದಾಡಿಯ ಚಿತ್ರವನ್ನು ಹಂಚಿಕೊಂಡು ಯೋಗೇಂದ್ರ ಸಿಂಗ್ ಎನ್ನುವವರು ವ್ಯಂಗ್ಯವಾಡಿದ್ದಾರೆ.

ಯುವಜನತೆ ಇಷ್ಟು ಕೇಳಿಕೊಂಡರು ಮಾತನಾಡದ ಪ್ರಧಾನಿ ಎಂದು ನಿದ್ದೆ ಮಾಡುತ್ತಿರುವ ಕುಂಬಕರ್ಣನಿಗೆ ಹೋಲಿಸಿ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ನಿರುದ್ಯೋಗದ ಬಗ್ಗೆ ಮಾತನಾಡದ, ಪ್ರಧಾನ ಮಂತ್ರಿಯವರಲ್ಲಿ ಒಂದು ಪ್ರಶ್ನೆ ಕೇಳದ ಸುದ್ದಿ ಮಾಧ್ಯಮಗಳನ್ನು ಬಾಯ್ಕಾಟ್ ಮಾಡಿ ಎಂದು ಯುವಜನತೆ ಕೇಳುತ್ತಿದ್ದಾರೆ.

ಈಗಾಗಲೇ ಹಲವಾರು ಬಾರಿ ದೇಶದಲ್ಲಿ ಯುವಜನತೆ ಉದ್ಯೋಗಕ್ಕಾಗಿ ಬೀದಿಗಿಳಿದಿದೆ. ಆದರೂ ಕೂಡ ಯಾವುದೇ ಉಪಯೋಗವಾಗಿಲ್ಲ. ದಿನಕಳೆದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದ ಊದ್ಯೋಗಗಳನ್ನ ನುಂಗಿ ,ಸಕಾ೯ರಿ ವಲಯಗಳನ್ನ ಖಾಸಗಿಕರಣ ಗೊಳಿಸುವ ಇವರು ಊದ್ಯೋಗಗಳನ್ನ ಭವಿಷ್ಯ ಸ್ವಗ೯ದಲ್ಲಿ ಸೃಷ್ಟಿಸಬಹುದು

  2. ಅಂಬಾನಿ ಗಾಗಿ ಪ್ರಧಾನಿ ಯಾದವರು…
    ಭಾರತೀಯರ ಗಾಗಿ ಅಲ್ಲ….
    ಉತ್ತರವೇಕೆ ಕೊಡಬೇಕು…..

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...