Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...