Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...