Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...