Homeಮುಖಪುಟಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಆಡಳಿತಾರೂಢ ಬಿಜೆಪಿ ಸರ್ಕಾರ ನೀಡಿದ ಅಡೆತಡೆಗಳಿಂದಾಗಿ ತಾವು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ಬುಧವಾರ (ಮಾರ್ಚ್ 3) ವಿ. ಪೊನ್ರಾಜ್ ಎಂಬುವವರು ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿ. ಪೊನ್ರಾಜ್ ದಿವಂಗತ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿದ್ದವರು.

ಚೆನ್ನೈನ ಅಲ್ಪಾರ್‌ಪೇಟ್‌ನಲ್ಲಿ ನಡೆದ ಸಭೆಯಲ್ಲಿ ಪೊನ್ರಾಜ್ ಅವರನ್ನು ಪರಿಚಯಿಸಿದ ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು ಡಾ.ಆರ್.ಮಹೇಂದ್ರನ್ ಅವರೊಂದಿಗೆ ಪೊನ್ರಾಜ್ ಕೂಡ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ದೇಶಕ್ಕಾಗಿ ಅಬ್ದುಲ್ ಕಲಾಂ ಅವರ ದೃಷ್ಟಿಕೋನವನ್ನು ನಿಜವಾಗಿಸುವ ಯಾರೊಂದಿಗಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಕಮಲ್ ಹಾಸನ್ ಅವರಿಂದ ಕರೆ ಬಂದಾಗ, ನಾನು ಪಕ್ಷಕ್ಕೆ ಸೇರಲು ನಿರ್ಧರಿಸಿದೆ. ಕಮಲ್ ಹಾಸನ್ ಅವರ ಸಮರ್ಥ ನಾಯಕತ್ವದಲ್ಲಿ ಅಬ್ದುಲ್ ಕಲಾಂ ಅವರ ಕನಸುಗಳನ್ನು ನನಸು ಮಾಡುವ  ವಿಶ್ವಾಸವಿದೆ ”ಎಂದು ಪೊನ್ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ರಾಜಕೀಯ ನೀತಿಗಳನ್ನು ರೂಪಿಸುವಲ್ಲಿ ನಟ ರಜನಿಕಾಂತ್ ಅವರೊಂದಿಗೆ ಒಂದೆರಡು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊನ್ರಾಜ್ ಹೇಳಿದ್ದಾರೆ. ಆದರೆ ಅವರಿಗೆ ಆರೋಗ್ಯದ ತೊಂದರೆಗಳಿಂದಾಗಿ ಅವರ ಪಕ್ಷ ಘೋಷಣೆಯಾಗಲಿಲ್ಲ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರವು ನೀಡಿದ ಅಡೆತಡೆಗಳಿಂದಾಗಿ ತಾನು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ. ಎಲ್ಲಾ ಯುವಕರು ಮತ್ತು ಮಾಜಿ ರಾಷ್ಟ್ರಪತಿಗಳ ಹೆಸರಿನಲ್ಲಿ ಕಲ್ಯಾಣ ಕ್ಲಬ್‌ಗಳನ್ನು ನಡೆಸುತ್ತಿರುವವರು ತಮಿಳುನಾಡಿನ ಬದಲಾವಣೆಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿ ಕೆಲಸ ಮಾಡಬೇಕೆಂದು ಪೊನ್ರಾಜ್ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...