Homeಚಳವಳಿಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಯುವಜನರ ಆಕ್ರೋಶವೂ ಕೂಡ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ನೀಡಿ, ಉದ್ಯೋಗ ಹೆಚ್ಚಿಸಿ, ಪ್ರಧಾನಿಗಳೇ ಉತ್ತರ ನೀಡಿ ಎಂದು ಕೇಳುತ್ತಿದ್ದಾರೆ. ಗುರುವಾರ (ಮಾರ್ಚ್ 4) ಕೂಡ #noजॉब_noवोट  (ನೋ ಜಾಬ್, ನೋ ವೋಟ್) ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದು, #noजॉब_noवोट ಹ್ಯಾಶ್‌ಟ್ಯಾಗ್ ಟ್ವಿಟರ್‌ ಟ್ರೆಂಡಿಂಗ್‌ನಲ್ಲಿದೆ.

ಗುರುವಾರ ಟ್ವಿಟರ್‌ನಲ್ಲಿ #noजॉब_noवोट ಬಳಸಿ ಟ್ವೀಟ್ ಮಾಡುತ್ತಿರುವ ಜನರು, ಕೆಲಸ ನೀಡದಿದ್ದರೇ ಮತವೂ ನೀಡಲಾಗದು ಎಂದು ಹೇಳುತ್ತಿದ್ದಾರೆ. 2 ಕೋಟಿ ಉದ್ಯೋಗಗಳನ್ನು ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಇಂದು ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಯುವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಇಂದು ಒಂದು ಧ್ವನಿಯನ್ನು ಎತ್ತಿದೆ. ಅದೇನೆಂದರೆ ಬಿಜೆಪಿಗೆ ಮತ ನೀಡಬೇಡಿ ಎಂಬುದು ಎಂದು ಇಂಡಿಯನ್ ಸ್ಟೂಡೆಂಟ್ಸ್ ಅಂಡ್ ಯೂತ್ ಟ್ವಿಟರ್‌ ಹ್ಯಾಂಡಲ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

32 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಎಲ್ಲಾ ವಯೋಮಾನದವು ಬಿಜೆಪಿಗೆ ಮತ ನೀಡಬೇಡಿ ಎಂಬ ಭಿತ್ತಿಪತ್ರ ಹಿಡಿದುಕೊಂಡಿದ್ದಾರೆ. ದೇಶದ ಹಲವಾರು ರಾಜ್ಯಗಳ ಜನರನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ವಿಕ್ಕಿ ರಾಜ್ ಎನ್ನುವವರು ಖಾಲಿ ಹುದ್ದೆಗಳು ಹೇಗೆ ಪಾತಾಳಕ್ಕೆ ಇಳಿಯುತ್ತಿವೆ ಎಂಬ ಗ್ರಾಫ್‌ ಪೋಸ್ಟ್ ಮಾಡಿ, ಇನ್ನು ಮಕ್ಕಳು ಓದಿ ಏನಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಈಗ ವಿದ್ಯಾಭ್ಯಾಸ ಮುಗಿಸಿದವರಿಗೆ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಇನ್ನು ಮುಂದಿನ ಪೀಳಿಗೆ ಮಕ್ಕಳು ಓದಿ ಏನಾಗಬೇಕು ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ನಮ್ಮ ಉತ್ತಮ ಭವಿಷ್ಯಕ್ಕಾಗಿ ಈ ಅಭಿಯಾನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈಜೊಡಿಸಿ. ಈಗ ಒಂದಾಗದಿದ್ದರೇ ಮುಂದೆಂದೂ ಸಾಧ್ಯವಿಲ್ಲ ಎಂದು ಅನುರಾಗ್ ಶ್ರೀವಾತ್ಸವ್ ಎಂಬುವ ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.

#modi_jawab_do ಎಂಬ ಹ್ಯಾಶ್‌ಟ್ಯಾಗ್ ಬುಧವಾರ ಇಡೀ ದಿನ ಟ್ರೆಂಡಿಂಗ್‌ನಲ್ಲಿತ್ತು. ಇಂದು #noजॉब_noवोट ಹ್ಯಾಶ್‌ಟ್ಯಾಗ್ ಬಳಸಲಾಗುತ್ತಿದೆ. ಪ್ರಧಾನಿಗಳ ಬಳಿ ನಿರುದ್ಯೋಗಿಗಳು, ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಮಾತನಾಡಿದಾಗ ಕಣ್ಣು ಕಾಣಿಸುವುದಿಲ್ಲ, ಕಿವಿ ಕೇಳಿಸುವುದಿಲ್ಲ ಮತ್ತು ಮಾತು ಬರುವುದಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, ಭಾರತದ ಯುವಜನತೆಯ ಬೇಡಿಕೆ ಈಡೇರಿಸದಿದ್ದರೇ, ನಿರುದ್ಯೋಗವನ್ನು ತಡೆದು ಎಲ್ಲರಿಗೂ ಕೆಲಸ ನೀಡದಿದ್ದರೇ ನಿಮ್ಮ ಕುರ್ಚಿ ಉಳಿಯುವುದಿಲ್ಲ ಇದು ಭಾರತದ ಯುವಜನತೆ ಪ್ರಧಾನಿಯವರಿಗೆ ನೀಡುತ್ತಿರುವ ಎಚ್ಚರಿಕೆ ಎಂಬಂತ ಟ್ವೀಟ್‌ಗಳು ಕಾಣಿಸುತ್ತಿವೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ದೇಶದ ಎಲ್ಲ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಿ. ಉದ್ಯೋಗ ನೀಡದಿದ್ದರೇ ವೋಟು ನೀಡುವುದಿಲ್ಲ ಎಂಬುದನ್ನು ಒತ್ತಿ ಹೇಳಿ. 2024ರ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಡಿ. ನೋ ಜಾಬ್, ನೋ ವೋಟ್ ಎಂಬ ಹ್ಯಾಶ್‌ಟ್ಯಾಗ್ ಬಳಸಿ, ವಿದ್ಯಾರ್ಥಿಗಳ ಶಕ್ತಿ ದೇಶಕ್ಕೆ ತಿಳಿಯಲಿ ಎಂದು ನೆಟ್ಟಿಗರು ವಿದ್ಯಾರ್ಥಿ ಸಮುದಾಯವನ್ನು ಕೇಳಿಕೊಂಡಿದ್ದಾರೆ.

ಚುನಾವಣೆಯಲ್ಲಿ ಮತ ಕೇಳುವಾಗ ದೊಡ್ಡ ದೊಡ್ಡ ಭರವಸೆಗಳನ್ನು ನೀಡುತ್ತಾರೆ. ಅವುಗಳನ್ನು ಈಡೇರಿಸುವ ಸಮಯದಲ್ಲಿ ನಮ್ಮನ್ನು ಮೋಸಗೊಳಿಸುತ್ತಾರೆ. ಹಾಗಾಗಿ ಯುಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಧ್ವನಿಯನ್ನು ಗಟ್ಟಿ ಮಾಡಬೇಕಿದೆ. ಈ ಬಾರಿ ಉದ್ಯೋಗ ನೀಡದಿದ್ದರೇ ಮೋದಿಜಿಯವರನ್ನು ಮನೆಗೆ ಕಳಿಸುತ್ತೇವೆ ಎಂಬುದನ್ನು ತಿಳಿಸಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆಯೇ ಹೊರತು ಹೊಸ ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.


ಇದನ್ನೂ ಓದಿ: ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...