Homeಚಳವಳಿಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಯುವಜನರ ಆಕ್ರೋಶವೂ ಕೂಡ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ನೀಡಿ, ಉದ್ಯೋಗ ಹೆಚ್ಚಿಸಿ, ಪ್ರಧಾನಿಗಳೇ ಉತ್ತರ ನೀಡಿ ಎಂದು ಕೇಳುತ್ತಿದ್ದಾರೆ. ಗುರುವಾರ (ಮಾರ್ಚ್ 4) ಕೂಡ #noजॉब_noवोट  (ನೋ ಜಾಬ್, ನೋ ವೋಟ್) ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದು, #noजॉब_noवोट ಹ್ಯಾಶ್‌ಟ್ಯಾಗ್ ಟ್ವಿಟರ್‌ ಟ್ರೆಂಡಿಂಗ್‌ನಲ್ಲಿದೆ.

ಗುರುವಾರ ಟ್ವಿಟರ್‌ನಲ್ಲಿ #noजॉब_noवोट ಬಳಸಿ ಟ್ವೀಟ್ ಮಾಡುತ್ತಿರುವ ಜನರು, ಕೆಲಸ ನೀಡದಿದ್ದರೇ ಮತವೂ ನೀಡಲಾಗದು ಎಂದು ಹೇಳುತ್ತಿದ್ದಾರೆ. 2 ಕೋಟಿ ಉದ್ಯೋಗಗಳನ್ನು ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಇಂದು ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಯುವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಇಂದು ಒಂದು ಧ್ವನಿಯನ್ನು ಎತ್ತಿದೆ. ಅದೇನೆಂದರೆ ಬಿಜೆಪಿಗೆ ಮತ ನೀಡಬೇಡಿ ಎಂಬುದು ಎಂದು ಇಂಡಿಯನ್ ಸ್ಟೂಡೆಂಟ್ಸ್ ಅಂಡ್ ಯೂತ್ ಟ್ವಿಟರ್‌ ಹ್ಯಾಂಡಲ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

32 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಎಲ್ಲಾ ವಯೋಮಾನದವು ಬಿಜೆಪಿಗೆ ಮತ ನೀಡಬೇಡಿ ಎಂಬ ಭಿತ್ತಿಪತ್ರ ಹಿಡಿದುಕೊಂಡಿದ್ದಾರೆ. ದೇಶದ ಹಲವಾರು ರಾಜ್ಯಗಳ ಜನರನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ವಿಕ್ಕಿ ರಾಜ್ ಎನ್ನುವವರು ಖಾಲಿ ಹುದ್ದೆಗಳು ಹೇಗೆ ಪಾತಾಳಕ್ಕೆ ಇಳಿಯುತ್ತಿವೆ ಎಂಬ ಗ್ರಾಫ್‌ ಪೋಸ್ಟ್ ಮಾಡಿ, ಇನ್ನು ಮಕ್ಕಳು ಓದಿ ಏನಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಈಗ ವಿದ್ಯಾಭ್ಯಾಸ ಮುಗಿಸಿದವರಿಗೆ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಇನ್ನು ಮುಂದಿನ ಪೀಳಿಗೆ ಮಕ್ಕಳು ಓದಿ ಏನಾಗಬೇಕು ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ನಮ್ಮ ಉತ್ತಮ ಭವಿಷ್ಯಕ್ಕಾಗಿ ಈ ಅಭಿಯಾನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈಜೊಡಿಸಿ. ಈಗ ಒಂದಾಗದಿದ್ದರೇ ಮುಂದೆಂದೂ ಸಾಧ್ಯವಿಲ್ಲ ಎಂದು ಅನುರಾಗ್ ಶ್ರೀವಾತ್ಸವ್ ಎಂಬುವ ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.

#modi_jawab_do ಎಂಬ ಹ್ಯಾಶ್‌ಟ್ಯಾಗ್ ಬುಧವಾರ ಇಡೀ ದಿನ ಟ್ರೆಂಡಿಂಗ್‌ನಲ್ಲಿತ್ತು. ಇಂದು #noजॉब_noवोट ಹ್ಯಾಶ್‌ಟ್ಯಾಗ್ ಬಳಸಲಾಗುತ್ತಿದೆ. ಪ್ರಧಾನಿಗಳ ಬಳಿ ನಿರುದ್ಯೋಗಿಗಳು, ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಮಾತನಾಡಿದಾಗ ಕಣ್ಣು ಕಾಣಿಸುವುದಿಲ್ಲ, ಕಿವಿ ಕೇಳಿಸುವುದಿಲ್ಲ ಮತ್ತು ಮಾತು ಬರುವುದಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, ಭಾರತದ ಯುವಜನತೆಯ ಬೇಡಿಕೆ ಈಡೇರಿಸದಿದ್ದರೇ, ನಿರುದ್ಯೋಗವನ್ನು ತಡೆದು ಎಲ್ಲರಿಗೂ ಕೆಲಸ ನೀಡದಿದ್ದರೇ ನಿಮ್ಮ ಕುರ್ಚಿ ಉಳಿಯುವುದಿಲ್ಲ ಇದು ಭಾರತದ ಯುವಜನತೆ ಪ್ರಧಾನಿಯವರಿಗೆ ನೀಡುತ್ತಿರುವ ಎಚ್ಚರಿಕೆ ಎಂಬಂತ ಟ್ವೀಟ್‌ಗಳು ಕಾಣಿಸುತ್ತಿವೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ದೇಶದ ಎಲ್ಲ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಿ. ಉದ್ಯೋಗ ನೀಡದಿದ್ದರೇ ವೋಟು ನೀಡುವುದಿಲ್ಲ ಎಂಬುದನ್ನು ಒತ್ತಿ ಹೇಳಿ. 2024ರ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಡಿ. ನೋ ಜಾಬ್, ನೋ ವೋಟ್ ಎಂಬ ಹ್ಯಾಶ್‌ಟ್ಯಾಗ್ ಬಳಸಿ, ವಿದ್ಯಾರ್ಥಿಗಳ ಶಕ್ತಿ ದೇಶಕ್ಕೆ ತಿಳಿಯಲಿ ಎಂದು ನೆಟ್ಟಿಗರು ವಿದ್ಯಾರ್ಥಿ ಸಮುದಾಯವನ್ನು ಕೇಳಿಕೊಂಡಿದ್ದಾರೆ.

ಚುನಾವಣೆಯಲ್ಲಿ ಮತ ಕೇಳುವಾಗ ದೊಡ್ಡ ದೊಡ್ಡ ಭರವಸೆಗಳನ್ನು ನೀಡುತ್ತಾರೆ. ಅವುಗಳನ್ನು ಈಡೇರಿಸುವ ಸಮಯದಲ್ಲಿ ನಮ್ಮನ್ನು ಮೋಸಗೊಳಿಸುತ್ತಾರೆ. ಹಾಗಾಗಿ ಯುಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಧ್ವನಿಯನ್ನು ಗಟ್ಟಿ ಮಾಡಬೇಕಿದೆ. ಈ ಬಾರಿ ಉದ್ಯೋಗ ನೀಡದಿದ್ದರೇ ಮೋದಿಜಿಯವರನ್ನು ಮನೆಗೆ ಕಳಿಸುತ್ತೇವೆ ಎಂಬುದನ್ನು ತಿಳಿಸಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆಯೇ ಹೊರತು ಹೊಸ ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.


ಇದನ್ನೂ ಓದಿ: ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...