Homeಚಳವಳಿಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಯುವಜನರ ಆಕ್ರೋಶವೂ ಕೂಡ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ನೀಡಿ, ಉದ್ಯೋಗ ಹೆಚ್ಚಿಸಿ, ಪ್ರಧಾನಿಗಳೇ ಉತ್ತರ ನೀಡಿ ಎಂದು ಕೇಳುತ್ತಿದ್ದಾರೆ. ಗುರುವಾರ (ಮಾರ್ಚ್ 4) ಕೂಡ #noजॉब_noवोट  (ನೋ ಜಾಬ್, ನೋ ವೋಟ್) ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದು, #noजॉब_noवोट ಹ್ಯಾಶ್‌ಟ್ಯಾಗ್ ಟ್ವಿಟರ್‌ ಟ್ರೆಂಡಿಂಗ್‌ನಲ್ಲಿದೆ.

ಗುರುವಾರ ಟ್ವಿಟರ್‌ನಲ್ಲಿ #noजॉब_noवोट ಬಳಸಿ ಟ್ವೀಟ್ ಮಾಡುತ್ತಿರುವ ಜನರು, ಕೆಲಸ ನೀಡದಿದ್ದರೇ ಮತವೂ ನೀಡಲಾಗದು ಎಂದು ಹೇಳುತ್ತಿದ್ದಾರೆ. 2 ಕೋಟಿ ಉದ್ಯೋಗಗಳನ್ನು ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಇಂದು ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಯುವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಇಂದು ಒಂದು ಧ್ವನಿಯನ್ನು ಎತ್ತಿದೆ. ಅದೇನೆಂದರೆ ಬಿಜೆಪಿಗೆ ಮತ ನೀಡಬೇಡಿ ಎಂಬುದು ಎಂದು ಇಂಡಿಯನ್ ಸ್ಟೂಡೆಂಟ್ಸ್ ಅಂಡ್ ಯೂತ್ ಟ್ವಿಟರ್‌ ಹ್ಯಾಂಡಲ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

32 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಎಲ್ಲಾ ವಯೋಮಾನದವು ಬಿಜೆಪಿಗೆ ಮತ ನೀಡಬೇಡಿ ಎಂಬ ಭಿತ್ತಿಪತ್ರ ಹಿಡಿದುಕೊಂಡಿದ್ದಾರೆ. ದೇಶದ ಹಲವಾರು ರಾಜ್ಯಗಳ ಜನರನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ವಿಕ್ಕಿ ರಾಜ್ ಎನ್ನುವವರು ಖಾಲಿ ಹುದ್ದೆಗಳು ಹೇಗೆ ಪಾತಾಳಕ್ಕೆ ಇಳಿಯುತ್ತಿವೆ ಎಂಬ ಗ್ರಾಫ್‌ ಪೋಸ್ಟ್ ಮಾಡಿ, ಇನ್ನು ಮಕ್ಕಳು ಓದಿ ಏನಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಈಗ ವಿದ್ಯಾಭ್ಯಾಸ ಮುಗಿಸಿದವರಿಗೆ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಇನ್ನು ಮುಂದಿನ ಪೀಳಿಗೆ ಮಕ್ಕಳು ಓದಿ ಏನಾಗಬೇಕು ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ನಮ್ಮ ಉತ್ತಮ ಭವಿಷ್ಯಕ್ಕಾಗಿ ಈ ಅಭಿಯಾನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈಜೊಡಿಸಿ. ಈಗ ಒಂದಾಗದಿದ್ದರೇ ಮುಂದೆಂದೂ ಸಾಧ್ಯವಿಲ್ಲ ಎಂದು ಅನುರಾಗ್ ಶ್ರೀವಾತ್ಸವ್ ಎಂಬುವ ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.

#modi_jawab_do ಎಂಬ ಹ್ಯಾಶ್‌ಟ್ಯಾಗ್ ಬುಧವಾರ ಇಡೀ ದಿನ ಟ್ರೆಂಡಿಂಗ್‌ನಲ್ಲಿತ್ತು. ಇಂದು #noजॉब_noवोट ಹ್ಯಾಶ್‌ಟ್ಯಾಗ್ ಬಳಸಲಾಗುತ್ತಿದೆ. ಪ್ರಧಾನಿಗಳ ಬಳಿ ನಿರುದ್ಯೋಗಿಗಳು, ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಮಾತನಾಡಿದಾಗ ಕಣ್ಣು ಕಾಣಿಸುವುದಿಲ್ಲ, ಕಿವಿ ಕೇಳಿಸುವುದಿಲ್ಲ ಮತ್ತು ಮಾತು ಬರುವುದಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, ಭಾರತದ ಯುವಜನತೆಯ ಬೇಡಿಕೆ ಈಡೇರಿಸದಿದ್ದರೇ, ನಿರುದ್ಯೋಗವನ್ನು ತಡೆದು ಎಲ್ಲರಿಗೂ ಕೆಲಸ ನೀಡದಿದ್ದರೇ ನಿಮ್ಮ ಕುರ್ಚಿ ಉಳಿಯುವುದಿಲ್ಲ ಇದು ಭಾರತದ ಯುವಜನತೆ ಪ್ರಧಾನಿಯವರಿಗೆ ನೀಡುತ್ತಿರುವ ಎಚ್ಚರಿಕೆ ಎಂಬಂತ ಟ್ವೀಟ್‌ಗಳು ಕಾಣಿಸುತ್ತಿವೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ದೇಶದ ಎಲ್ಲ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಿ. ಉದ್ಯೋಗ ನೀಡದಿದ್ದರೇ ವೋಟು ನೀಡುವುದಿಲ್ಲ ಎಂಬುದನ್ನು ಒತ್ತಿ ಹೇಳಿ. 2024ರ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಡಿ. ನೋ ಜಾಬ್, ನೋ ವೋಟ್ ಎಂಬ ಹ್ಯಾಶ್‌ಟ್ಯಾಗ್ ಬಳಸಿ, ವಿದ್ಯಾರ್ಥಿಗಳ ಶಕ್ತಿ ದೇಶಕ್ಕೆ ತಿಳಿಯಲಿ ಎಂದು ನೆಟ್ಟಿಗರು ವಿದ್ಯಾರ್ಥಿ ಸಮುದಾಯವನ್ನು ಕೇಳಿಕೊಂಡಿದ್ದಾರೆ.

ಚುನಾವಣೆಯಲ್ಲಿ ಮತ ಕೇಳುವಾಗ ದೊಡ್ಡ ದೊಡ್ಡ ಭರವಸೆಗಳನ್ನು ನೀಡುತ್ತಾರೆ. ಅವುಗಳನ್ನು ಈಡೇರಿಸುವ ಸಮಯದಲ್ಲಿ ನಮ್ಮನ್ನು ಮೋಸಗೊಳಿಸುತ್ತಾರೆ. ಹಾಗಾಗಿ ಯುಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಧ್ವನಿಯನ್ನು ಗಟ್ಟಿ ಮಾಡಬೇಕಿದೆ. ಈ ಬಾರಿ ಉದ್ಯೋಗ ನೀಡದಿದ್ದರೇ ಮೋದಿಜಿಯವರನ್ನು ಮನೆಗೆ ಕಳಿಸುತ್ತೇವೆ ಎಂಬುದನ್ನು ತಿಳಿಸಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆಯೇ ಹೊರತು ಹೊಸ ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.


ಇದನ್ನೂ ಓದಿ: ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...