Homeಮುಖಪುಟಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

ಶ್ರದ್ಧಾಂಜಲಿ; ಹಾಸ್ಯಪ್ರಜ್ಞೆಯ ಗೆಳೆಯ ಮತ್ತು ವೃತ್ತಿಪರ ಪತ್ರಕರ್ತ ನಚ್ಚಿ

- Advertisement -
- Advertisement -

ಆಪ್ತ ವಲಯದಲ್ಲಿ ನಚ್ಚಿ ಎಂದೇ ಕರೆಸಿಕೊಳ್ಳುತ್ತಿದ್ದ ಪತ್ರಕರ್ತ ಎಂ.ಎನ್. ಚಕ್ರವರ್ತಿ ಅನೇಕ ಬಣ್ಣಗಳಿಂದ ಕೂಡಿದ ಮತ್ತು ಮಲ್ಲೇಶ್ವರದಲ್ಲಿ ಎಲ್ಲ ಕಡೆಗೂ ಹರಡಿಕೊಂಡು ಬೆಳಗುತ್ತಿದ್ದ ಬೃಹತ್ತಾದ ಕಾಮನ ಬಿಲ್ಲು. ನಾನು ಬೆಂಗಳೂರಿಗೆ ಬಂದು ನನ್ನ ಪಿ.ಯು.ಸಿ. ತರಗತಿಗೆ ದಾಖಲಾದಾಗ, ನಾನು ವಾಸವಿದ್ದ ನಮ್ಮಣ್ಣನ ಮನೆಯ ರಸ್ತೆಯಲ್ಲಿಯೇ ನಚ್ಚಿಯ ಮನೆಯೂ ಇದ್ದದ್ದು. ಮೊದಲ ಭೇಟಿಯಲ್ಲಿಯೇ ನಮ್ಮಿಬ್ಬರ ಸ್ನೇಹದ ಸಂಕೋಲೆಗೆ ಪುಷ್ಟಿಕೊಟ್ಟಿದ್ದು ಇಬ್ಬರಲ್ಲಿಯೂ ಇದ್ದ ಮತ್ತು ಹೊಂದಿಕೊಳ್ಳುತ್ತಿದ್ದ ಒಂದೇ ತರಂಗಾಂತರದ ಹಾಸ್ಯ ಪ್ರಜ್ಞೆ. ನನ್ನ ಹಳ್ಳಿಯ ಅನುಭವಗಳನ್ನ ವಿವರಿಸುವಾಗ ಪಟ್ಟಣದಲ್ಲೇ ಬೆಳೆದ ನಚ್ಚಿ ವಿಸ್ಮಯಗೊಳ್ಳುತ್ತಿದ್ದ. ಇದೇ ಕಾರಣಕ್ಕೆ ಆಗತಾನೆ ನನಗೆ ಪರಿಚಯವಾಗುತ್ತಿದ್ದ ನನ್ನ ಸ್ನೇಹಿತರ ಬಳಗ ನನಗೆ ’ಗೌಡ’ ಎಂಬ ನಾಮಕರಣವನ್ನ ಮಾಡಿದ್ದರು.

ಸಂಜೆಯಾದರೆ ಈ ಬಳಗವೆಲ್ಲಾ ನಚ್ಚಿಯ ಮನೆಯ ಮುಂದಿದ್ದ ಖಾಲಿ ಸೈಟಿನಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದೆವು. ನಚ್ಚಿಯಲ್ಲಿ ಆಗತಾನೆ ಮೊಳಕೆಯೊಡೆದ ಸಾಹಿತ್ಯಾಭಿಮಾನ ನನ್ನಲ್ಲೂ ಅದು ಅಂಕುರವಾಗುವಂತೆ ಮಾಡಿತು. ಮಲ್ಲೇಶ್ವರದ ಗುಪ್ತ ಲೈಬ್ರರಿಗೆ ಪ್ರತಿ ದಿನವೂ ನಮ್ಮ ಭೇಟಿ ಇರುತ್ತಲೇ ಇತ್ತು. ಆಗ ನಾವು ಓದುತ್ತಿದ್ದದ್ದು ನರಸಿಂಹಯ್ಯನವರ ಪುರುಷೋತ್ತಮನ ಸಾಹಸ, ಪೆರ್ರಿಮೇಸನ್ ಮುಂತಾದ ಪತ್ತೇದಾರಿ ಕಾದಂಬರಿಗಳು ಮತ್ತು ಆಸ್ಟರಿಕ್ಸ್ ಕಾಮಿಕ್ಸ್‌ಗಳು ಇತ್ಯಾದಿ. ಈ ಸಮಯದಲ್ಲಿ ನಚ್ಚಿಗೆ ವಿಶೇಷವಾದ ಆಸಕ್ತಿ ಮೂಡಿದ್ದು ಪತ್ರಿಕೋದ್ಯಮದ ಮೇಲೆ. ನಮ್ಮ ಪದವೀಧರ ಪರೀಕ್ಷೆ ಮುಗಿದ ಮೇಲೆ ನಚ್ಚಿ ಮೂರು ವರ್ಷಗಳ ಕಾಲ ಲಂಕೇಶ್ ಪತ್ರಿಕೆಯ ಬರಹಗಾರ ಆಗಿದ್ದರು.

ನಂತರ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಮುಖ್ಯ ವರದಿಗಾರರಾಗಿ ನಿವೃತ್ತಿ ಹೊಂದಿದರು. ಈಗಿನ ದೂರದರ್ಶನದ ಮಹಾನಿರ್ದೇಶಕ ಸೂರ್ಯಪ್ರಕಾಶ್ ಅವರ ಒಡನಾಡಿಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡಿದ್ದರು.

ಪತ್ರಿಕೋದ್ಯಮದ ಜೊತೆಜೊತೆಗೇ, ನಚ್ಚಿ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದರು. ಪ್ರಕಾಶ್ ಬೆಳವಾಡಿ ನಿರ್ದೇಶಿಸಿದ್ದ ಗರ್ವ ಧಾರಾವಾಹಿಯ ಸಂಭಾಷಣೆಯನ್ನು ಕೂಡ ಬರೆದಿದ್ದರು. ಇಂತಹ ಅನೇಕ ಘಟನೆಗಳು ನನ್ನ ನೆನಪಿನಲ್ಲಿ ಹಾದುಹೋಗುತ್ತಿವೆ.

ಅಂದು ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಟಿ.ಜೆ.ಎಸ್ ಜಾರ್ಜ್ ಅವರು ಬರೆದ ಎಂ.ಎಸ್. ಸುಬ್ಬಲಕ್ಷ್ಮಿಯವರ ಜೀವನ ಚರಿತ್ರೆಯ ಬಿಡುಗಡೆ. ಅದೇ ಸಂದರ್ಭದಲ್ಲಿ ಸುಧಾ ರಘುನಾಥನ್ ಅವರ ಸಂಗೀತ. ನಾನೂ ಅಲ್ಲಿಗೆ ಹೋಗಿದ್ದೆ. ನಚ್ಚಿಯ ಪತ್ರಿಕೋದ್ಯಮದಲ್ಲಿನ ಆಸಕ್ತಿ ಅವನನ್ನು ಅಲ್ಲಿಗೆ ಕರೆತಂದಿತ್ತು. ನನ್ನ ಸಂಗೀತದ ಆಸಕ್ತಿ ನಾನು ಅಲ್ಲಿಗೆ ಹೋಗುವಂತೆ ಪ್ರೇರೇಪಿಸಿದ್ದು. ಅಂದು ಜಾರ್ಜ್ ಅವರ ಹಸ್ತಾಕ್ಷರವನ್ನು ಎರಡೂ ಪುಸ್ತಕಗಳಿಗೆ ಇಬ್ಬರೂ ಹಾಕಿಸಿಕೊಂಡು ಕೊಂಡೆವು.

ಭಾಷಣದ ಕಾರ್ಯಕ್ರಮ ಮುಗಿದಮೇಲೆ ಇಡೀ ಮೂರು ಗಂಟೆಗಳ ಕಾಲ ನಚ್ಚಿ ನನ್ನ
ಜತೆಯಲ್ಲಿಯೇ ಕುಳಿತಿದ್ದ. ವಿಶೇಷವೆಂದರೆ ನನಗೂ ತಿಳಿಯದಿದ್ದ ಕೆಲವು ರಾಗಗಳ ಬಗ್ಗೆ ನನಗೆ ಹೇಳುತ್ತಿದ್ದ. ಅವನ ವೈವಿಧ್ಯಮಯ ಆಸಕ್ತಿಯ ಬಗ್ಗೆ ಹೇಳಬೇಕಾದ ಉದಾಹರಣೆಯಲ್ಲಿ ಇದೂ ಒಂದು.

ಇನ್ನೊಂದು ಘಟನೆ ಈಗ ನೆನಪಿಗೆ ಬರುತ್ತಿದೆ. ಒಮ್ಮೆ ’ಫ್ರೀಡಂ ಅಟ್ ಮಿಡ್ ನೈಟ್’ ಪುಸ್ತಕ ಬರೆದ ಲ್ಯಾರಿ ಕಾಲಿನ್ಸ್ ಮತ್ತು ಡೊಮಿನಿಕ್ ಲ್ಯಾಪಿಯರ್ ಬೆಂಗಳೂರಿಗೆ ಬಂದಿದ್ದರು. ಆ ಪುಸ್ತಕವನ್ನ ಗಂಗಾರಾಮ್ ಬುಕ್‌ಹೌಸ್‌ನಲ್ಲಿ ಕೊಂಡು ಅವರ ಹಸ್ತಾಕ್ಷರವನ್ನ ಹಾಕಿಸಿಕೊಳ್ಳಲು ಅವರು ಉಳಿದುಕೊಂಡಿದ್ದ ಅಶೋಕ ಹೊಟೇಲಿಗೆ ಇಬ್ಬರೂ ನಡೆದುಕೊಂಡು ಹೋದೆವು. ಆದರೆ ಅವರು ನಮ್ಮನ್ನು ಭೇಟಿಮಾಡಲು ನಿರಾಕರಿಸಿದರು. ಅವರು ಆಚೆ ಬರುವವರೆಗೂ ನಾವು ರಿಸೆಪ್ಷನ್ ಬಳಿಯೇ ಕುಳಿತಿದ್ದೆವು. ಅವರು ಹೊರಬಂದಾಗ ನಮಗೆ ತಿಳಿಸಬೇಕೆಂದು ರಿಸೆಪ್ಷನಿಸ್ಟ್ ಅನ್ನು ಕೇಳಿಕೊಂಡಿದ್ದೆವು. ಅವರಿಬ್ಬರೂ ಆಚೆ ಬಂದಾಗ ರಿಸೆಪ್ಷನಿಸ್ಟ್ ನಮಗೆ ಸಂಜ್ಞೆ ಮಾಡಿದ. ತಕ್ಷಣ ಓಡಿ ಹೋಗಿ ಅವರ ಹಸ್ತಾಕ್ಷರವನ್ನ ಪಡೆದವು.

ಇನ್ನೂ ಒಂದು ಘಟನೆ ನೆನಪಿಗೆ ಬರುತ್ತಿದೆ. ಮಲ್ಲೇಶ್ವರದಲ್ಲಿ ಒಬ್ಬ ಉಭಯಕರ್ ಎನ್ನುವ ಎಣ್ಣೆ ಪಾರ್ಟಿ ಗೆಳೆಯ ಇದ್ದ. ನಮ್ಮಿಬ್ಬರಿಗೂ ಸ್ನೇಹಿತ. ಬೆಳಿಗ್ಗೆ ಶುರುಮಾಡಿದರೆ ರಾತ್ರಿ ಬಾರ್ ಮುಚ್ಚುವವರೆಗೂ ಕುಡಿಯುತ್ತಲೇ ಇರುತ್ತಿದ್ದ. ಅದೇ ಕಾರಣಕ್ಕೆ ಲಿವರ್ ಕೆಟ್ಟು ಹೋಗಿ ಅಸು ನೀಗಿದ್ದು ದುರಂತದ ಮತ್ತು ದುಃಖದ ಸಂಗತಿಯಾಗಿತ್ತು. ಅವನ ತಿಥಿಗೆ ಇಬ್ಬರೂ ಹೋಗಿದ್ದೆವು. ಅವನ ತಂದೆ ಪಿಂಡ ತಂದಿಟ್ಟಾಗ ಒಂದು ಕಾಗೆಯೂ ಬರಲಿಲ್ಲ. ನಚ್ಚಿಗೆ ಏನೋ ಹೊಳೆದಂತಾಯಿತು. ಅಂದು ಅಕ್ಟೋಬರ್ ಎರಡು. ಎಲ್ಲಾ ಹೆಂಡದ ಅಂಗಡಿಗಳೂ ಬಂದ್. ಮಲ್ಲೇಶ್ವರಂ ಅಸೋಸಿಯೇಷನ್‌ನಲ್ಲಿ ಕಾಡಿ ಬೇಡಿ ನಚ್ಚಿ ಒಂದು ಕ್ವಾರ್ಟರ್ ತಂದು ಪಿಂಡ ಇಟ್ಟ ದೊನ್ನೆಯ ಒಳಗೆ ಸುರಿದ. ತಕ್ಷಣ ಅನೇಕ ಕಾಗೆಗಳು ಬಂದು ಮುತ್ತಿಕೊಂಡವು. ದುಃಖದ ಸನ್ನಿವೇಶದಲ್ಲಿಯೂ ನಚ್ಚಿಯ ಸಮಯ ಮತ್ತು ಹಾಸ್ಯಪ್ರಜ್ಞೆ ನಮ್ಮೆಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು.

ಕೆಲವು ವರ್ಷಗಳಿಂದ ಕಣ್ಣಿನಲ್ಲಿ ಡಯಾಬೆಟಿಕ್ ರೆಟಿನೊಪತಿಯಿಂದ ಬಳಲುತ್ತಿದ್ದ ನಚ್ಚಿ ದೃಷ್ಟಿಹೀನರಾಗಿದ್ದರು. ಹಲವು ಬಾರಿ ಅವರ ಮನೆಗೆ ಭೇಟಿ ನೀಡಿದಾಗ ಏನೇನೋ ಓದಿ ಹೇಳುವಂತೆ ನನಗೆ ಹೇಳುತ್ತಿದ್ದ.

ನಚ್ಚಿ ಮಾರ್ಚ್ 1, 2021 ರಂದು ಈ ಇಹ ಲೋಕವನ್ನ ತ್ಯಜಿಸಿದ್ದು, ಆತನ ಪ್ರೀತಿಪಾತ್ರರೆಲ್ಲರಲ್ಲೂ ಅತೀವವಾದ ದುಃಖ ಮಡುವುಗಟ್ಟಿದೆ.

ಶ್ರೀನಾಥ್ ಕೆ
ನಟ ಮತ್ತು ಲೇಖಕ. ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಶ್ರೀನಾಥ್ ಇತ್ತೀಚೆಗೆ ಫ್ಯೋದೊರ್ ದಾಸ್ತೋವ್‌ಸ್ಕಿಯ ’ಕರಮಜೋವ್ ಸಹೋದರರು’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...