Homeಮುಖಪುಟಹರಿಯಾಣದಲ್ಲಿ ‘ಲವ್ ಜಿಹಾದ್’ ಕಾನೂನಿಗೆ ಮೈತ್ರಿಪಕ್ಷದ ವಿರೋಧ: ಬಿಜೆಪಿಗೆ ಇರುಸುಮುರಿಸು

ಹರಿಯಾಣದಲ್ಲಿ ‘ಲವ್ ಜಿಹಾದ್’ ಕಾನೂನಿಗೆ ಮೈತ್ರಿಪಕ್ಷದ ವಿರೋಧ: ಬಿಜೆಪಿಗೆ ಇರುಸುಮುರಿಸು

ರೈತರ ಪ್ರತಿಭಟನೆಯ ಬಗ್ಗೆ ದುಶ್ಯಂತ್ ಚೌತಾಲಾ ಅವರ ಜೆಜೆಪಿಯು ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಈ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ.

- Advertisement -
- Advertisement -

ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು “ಲವ್ ಜಿಹಾದ್” ಶಾಸನ ತರಲು ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ಅದನ್ನು ಪ್ರಮುಖ ಮೈತ್ರಿ ಪಕ್ಷದ ನಾಯಕ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮತಾಂತರಗೊಳ್ಳುವಂತೆ ಒತ್ತಾಯಿಸಲು ಮದವೆಯ ನಾಟಕ ಆಡುತ್ತಾರೆ ಎಂದು ಬಲಪಂಥಿಯರು ಬಳಸುವ “ಲವ್ ಜಿಹಾದ್” ಎಂಬ ಪದವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

“ಲವ್ ಜಿಹಾದ್” ಎಂಬ ಈ ಪದವನ್ನು ನಾನು ಒಪ್ಪುವುದಿಲ್ಲ. ಬಲವಂತದ ಧಾರ್ಮಿಕ ಮತಾಂತರವನ್ನು ಪರೀಕ್ಷಿಸಲು ನಾವು ನಿರ್ದಿಷ್ಟವಾಗಿ ಕಾನೂನನ್ನು ರಚಿಸೋಣ. ನಾವು ಅದನ್ನು ಬೆಂಬಲಿಸುತ್ತೇವೆ. ಯಾರಾದರೂ ಸ್ವಇಚ್ಛೆಯಿಂದ ಮತಾಂತರಗೊಂಡರೆ ಅಥವಾ ಇನ್ನೊಂದು ನಂಬಿಕೆಯ ಪಾಲುದಾರನನ್ನು ಮದುವೆಯಾದರೆ, ಯಾವುದೇ ನಿರ್ಬಂಧವಿಲ್ಲ, ಇರಲೂ ಬಾರದು” ಎಂದು ದುಶ್ಯಂತ್ ಚೌತಾಲಾ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ರೈತರ ಪ್ರತಿಭಟನೆಯ ಬಗ್ಗೆ ದುಶ್ಯಂತ್ ಚೌತಾಲಾ ಮತ್ತು ಅವರ ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಈ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ. ತಮ್ಮ ಪಕ್ಷದ ಆಧಾರಸ್ತಂಭವಾದ ರೈತರು ವಿರೋಧಿಸುತ್ತಿರುವ ಕೇಂದ್ರ ಕಾನೂನುಗಳನ್ನು ಪರಿಶೀಲಿಸುವ ಬೇಡಿಕೆಯನ್ನು ಚೌತಾಲಾ ಬೆಂಬಲಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಮಾತು ಕೇಳದಿದ್ದರೆ ರಾಜೀನಾಮೆ ನೀಡುವುದಾಗಿಯೂ ಬೆದರಿಕೆ ಹಾಕಿದ್ದರು.

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಈಗಾಗಲೇ ‘ಲವ್ ಜಿಹಾದ್’ ಎಂಬ ಜನಪ್ರಿಯ ಹೆಸರಿನ ಶಾಸನಗಳನ್ನು ಜಾರಿಗೆ ತಂದಿವೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಹರಿಯಾಣದ ನುಹ್ ಜಿಲ್ಲೆಯಲ್ಲಿ ಜೆಜೆಪಿ ಈ ಕುರಿತಾಗಿ ಪ್ರಶ್ನೆಗಳನ್ನು ಮತ್ತು ಆತಂಕವನ್ನು ಎದುರಿಸುತ್ತಿದೆ.

ಚೌತಾಲಾ ಅವರು ಬುಧವಾರ ಚಂಡೀಗಢದಲ್ಲಿ ಸಮುದಾಯದ ಸದಸ್ಯರೊಂದಿಗೆ ಸಭೆ ನಡೆಸಿದರು. “ನಾವು ನಮ್ಮ ನಾಯಕ ದುಶ್ಯಂತ್ ಚೌತಾಲಾ ಅವರೊಂದಿಗೆ ಮೇವತ್‌ನ ಜನರ ಸಭೆಯನ್ನು ಏರ್ಪಡಿಸಿದ್ದೇವೆ. ವಿಧಾನಸಭೆಯಲ್ಲಿ ಪರಿಚಯಿಸಬೇಕಾದ ಹೊಸ ಕಾನೂನಿನ ಬಗ್ಗೆ ಅವರು ನಮ್ಮ ಕಾಳಜಿಯನ್ನು ತಿಳಿಸಿದರು” ಎಂದು ಜೆಜೆಪಿಯ ಅಲ್ಪಸಂಖ್ಯಾತ ಕೋಶದ ಮುಖ್ಯಸ್ಥ ಮೊಹ್ಸಿನ್ ಚೌಧರಿ ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಹರಿಯಾಣದಲ್ಲಿ ಅಂತರ್ ಧರ್ಮಿಯ ಸಂಬಂಧಗಳ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಆರ್‌ಟಿಐ ಉತ್ತರವು ಬಹಿರಂಗಪಡಿಸಿದೆ. ಎರಡು ಪ್ರಕರಣಗಳಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ ಮತ್ತು ಮೂರನೆಯದು ಖುಲಾಸೆಯಲ್ಲಿ ಕೊನೆಗೊಂಡಿದೆ. ನಾಲ್ಕನೇ ಪ್ರಕರಣ ನ್ಯಾಯಾಲಯದಲ್ಲಿದೆ.
ಆರ್‌ಟಿಐ ಅರ್ಜಿಯನ್ನು ಪಾಣಿಪತ್ ನಿವಾಸಿ ಪಿ.ಪಿ ಕಪೂರ್ ಸಲ್ಲಿಸಿದ್ದರು. ಅಂಬಾಲಾ, ನುಹ್ ಮತ್ತು ಪಾಣಿಪತ್ ಜಿಲ್ಲೆಗಳಲ್ಲಿ ಒಟ್ಟು ನಾಲ್ಕು ಲವ್ ಜಿಹಾದ್ ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: ತೈಲ ಬೆಲೆ 100 ರ ಗಡಿ ದಾಟಿದೆ; ಆದರೆ ಬಿಜೆಪಿ ‘ಲವ್ ಜಿಹಾದ್’ ಹಿಂದೆ ಬಿದ್ದಿದೆ: ವಿಜಯರಾಘವನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...