Homeಮುಖಪುಟಹರಿಯಾಣದಲ್ಲಿ ‘ಲವ್ ಜಿಹಾದ್’ ಕಾನೂನಿಗೆ ಮೈತ್ರಿಪಕ್ಷದ ವಿರೋಧ: ಬಿಜೆಪಿಗೆ ಇರುಸುಮುರಿಸು

ಹರಿಯಾಣದಲ್ಲಿ ‘ಲವ್ ಜಿಹಾದ್’ ಕಾನೂನಿಗೆ ಮೈತ್ರಿಪಕ್ಷದ ವಿರೋಧ: ಬಿಜೆಪಿಗೆ ಇರುಸುಮುರಿಸು

ರೈತರ ಪ್ರತಿಭಟನೆಯ ಬಗ್ಗೆ ದುಶ್ಯಂತ್ ಚೌತಾಲಾ ಅವರ ಜೆಜೆಪಿಯು ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಈ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ.

- Advertisement -
- Advertisement -

ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು “ಲವ್ ಜಿಹಾದ್” ಶಾಸನ ತರಲು ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ಅದನ್ನು ಪ್ರಮುಖ ಮೈತ್ರಿ ಪಕ್ಷದ ನಾಯಕ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮತಾಂತರಗೊಳ್ಳುವಂತೆ ಒತ್ತಾಯಿಸಲು ಮದವೆಯ ನಾಟಕ ಆಡುತ್ತಾರೆ ಎಂದು ಬಲಪಂಥಿಯರು ಬಳಸುವ “ಲವ್ ಜಿಹಾದ್” ಎಂಬ ಪದವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

“ಲವ್ ಜಿಹಾದ್” ಎಂಬ ಈ ಪದವನ್ನು ನಾನು ಒಪ್ಪುವುದಿಲ್ಲ. ಬಲವಂತದ ಧಾರ್ಮಿಕ ಮತಾಂತರವನ್ನು ಪರೀಕ್ಷಿಸಲು ನಾವು ನಿರ್ದಿಷ್ಟವಾಗಿ ಕಾನೂನನ್ನು ರಚಿಸೋಣ. ನಾವು ಅದನ್ನು ಬೆಂಬಲಿಸುತ್ತೇವೆ. ಯಾರಾದರೂ ಸ್ವಇಚ್ಛೆಯಿಂದ ಮತಾಂತರಗೊಂಡರೆ ಅಥವಾ ಇನ್ನೊಂದು ನಂಬಿಕೆಯ ಪಾಲುದಾರನನ್ನು ಮದುವೆಯಾದರೆ, ಯಾವುದೇ ನಿರ್ಬಂಧವಿಲ್ಲ, ಇರಲೂ ಬಾರದು” ಎಂದು ದುಶ್ಯಂತ್ ಚೌತಾಲಾ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ರೈತರ ಪ್ರತಿಭಟನೆಯ ಬಗ್ಗೆ ದುಶ್ಯಂತ್ ಚೌತಾಲಾ ಮತ್ತು ಅವರ ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಈ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ. ತಮ್ಮ ಪಕ್ಷದ ಆಧಾರಸ್ತಂಭವಾದ ರೈತರು ವಿರೋಧಿಸುತ್ತಿರುವ ಕೇಂದ್ರ ಕಾನೂನುಗಳನ್ನು ಪರಿಶೀಲಿಸುವ ಬೇಡಿಕೆಯನ್ನು ಚೌತಾಲಾ ಬೆಂಬಲಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಮಾತು ಕೇಳದಿದ್ದರೆ ರಾಜೀನಾಮೆ ನೀಡುವುದಾಗಿಯೂ ಬೆದರಿಕೆ ಹಾಕಿದ್ದರು.

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಈಗಾಗಲೇ ‘ಲವ್ ಜಿಹಾದ್’ ಎಂಬ ಜನಪ್ರಿಯ ಹೆಸರಿನ ಶಾಸನಗಳನ್ನು ಜಾರಿಗೆ ತಂದಿವೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಹರಿಯಾಣದ ನುಹ್ ಜಿಲ್ಲೆಯಲ್ಲಿ ಜೆಜೆಪಿ ಈ ಕುರಿತಾಗಿ ಪ್ರಶ್ನೆಗಳನ್ನು ಮತ್ತು ಆತಂಕವನ್ನು ಎದುರಿಸುತ್ತಿದೆ.

ಚೌತಾಲಾ ಅವರು ಬುಧವಾರ ಚಂಡೀಗಢದಲ್ಲಿ ಸಮುದಾಯದ ಸದಸ್ಯರೊಂದಿಗೆ ಸಭೆ ನಡೆಸಿದರು. “ನಾವು ನಮ್ಮ ನಾಯಕ ದುಶ್ಯಂತ್ ಚೌತಾಲಾ ಅವರೊಂದಿಗೆ ಮೇವತ್‌ನ ಜನರ ಸಭೆಯನ್ನು ಏರ್ಪಡಿಸಿದ್ದೇವೆ. ವಿಧಾನಸಭೆಯಲ್ಲಿ ಪರಿಚಯಿಸಬೇಕಾದ ಹೊಸ ಕಾನೂನಿನ ಬಗ್ಗೆ ಅವರು ನಮ್ಮ ಕಾಳಜಿಯನ್ನು ತಿಳಿಸಿದರು” ಎಂದು ಜೆಜೆಪಿಯ ಅಲ್ಪಸಂಖ್ಯಾತ ಕೋಶದ ಮುಖ್ಯಸ್ಥ ಮೊಹ್ಸಿನ್ ಚೌಧರಿ ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಹರಿಯಾಣದಲ್ಲಿ ಅಂತರ್ ಧರ್ಮಿಯ ಸಂಬಂಧಗಳ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಆರ್‌ಟಿಐ ಉತ್ತರವು ಬಹಿರಂಗಪಡಿಸಿದೆ. ಎರಡು ಪ್ರಕರಣಗಳಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ ಮತ್ತು ಮೂರನೆಯದು ಖುಲಾಸೆಯಲ್ಲಿ ಕೊನೆಗೊಂಡಿದೆ. ನಾಲ್ಕನೇ ಪ್ರಕರಣ ನ್ಯಾಯಾಲಯದಲ್ಲಿದೆ.
ಆರ್‌ಟಿಐ ಅರ್ಜಿಯನ್ನು ಪಾಣಿಪತ್ ನಿವಾಸಿ ಪಿ.ಪಿ ಕಪೂರ್ ಸಲ್ಲಿಸಿದ್ದರು. ಅಂಬಾಲಾ, ನುಹ್ ಮತ್ತು ಪಾಣಿಪತ್ ಜಿಲ್ಲೆಗಳಲ್ಲಿ ಒಟ್ಟು ನಾಲ್ಕು ಲವ್ ಜಿಹಾದ್ ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: ತೈಲ ಬೆಲೆ 100 ರ ಗಡಿ ದಾಟಿದೆ; ಆದರೆ ಬಿಜೆಪಿ ‘ಲವ್ ಜಿಹಾದ್’ ಹಿಂದೆ ಬಿದ್ದಿದೆ: ವಿಜಯರಾಘವನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...