Homeಅಂತರಾಷ್ಟ್ರೀಯಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

- Advertisement -
- Advertisement -

ವಿಶ್ವಸಂಸ್ಥೆ ಹಕ್ಕುಗಳ ಕಚೇರಿಯ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್ ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

ಮ್ಯಾನ್ಮಾರ್‌ನ ಫೆಬ್ರವರಿ 1 ರ ದಂಗೆಯ ನಂತರ ಕನಿಷ್ಠ 54 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲ್ಲುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಮ್ಯಾನ್ಮಾರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯ ನಂತರ ಈ ಪ್ರತಿಕ್ರಿಯೆಗಳು ಬಂದಿವೆ. ಪ್ರತಿಭಟನಾನಿರತ ಜನಸಂದಣಿಯ ಮೇಲೆ ಭದ್ರತಾ ಪಡೆಗಳು ಗುಂಡುಗಳನ್ನು ಹಾರಿಸಿದ ಪರಿಣಾಮ ಬುಧವಾರ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.

“ಮ್ಯಾನ್ಮಾರ್‌ನ ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲೆ ಮಾಡುವುದು ಮತ್ತು ಜೈಲಿಗೆ ಹಾಕುವುದನ್ನು ನಿಲ್ಲಿಸಬೇಕು” ಎಂದು ಮಿಚೆಲ್ ಬ್ಯಾಚೆಲೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಭದ್ರತಾ ಪಡೆಗಳು ದೇಶಾದ್ಯಂತ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ನೇರ ಮದ್ದುಗುಂಡುಗಳನ್ನು ಹಾರಿಸುತ್ತಿರುವುದು ಸಂಪೂರ್ಣವಾಗಿ ಅಸಹ್ಯಕರವಾಗಿದೆ. ತುರ್ತು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್‌ಗಳ ವಿರುದ್ಧ ನಡೆದ ದಾಳಿಗಳ ಬಗ್ಗೆಯೂ ದಿಗಿಲುಗೊಂಡಿದ್ದೇವೆ” ಎಂದು ಅವರು ಹೇಳಿದರು.

‘ಫೆಬ್ರವರಿ 1 ರಿಂದ ಕನಿಷ್ಠ 54 ಜನರನ್ನು ಪೊಲೀಸ್ ಮತ್ತು ಮಿಲಿಟರಿ ಅಧಿಕಾರಿಗಳು ಕೊಂದಿದ್ದಾರೆ ಎಂಬ ಮಾಹಿತಿಯನ್ನು ದೃಢಪಡಿಸಲಾಗಿದೆ ಎಂದು ಯುಎನ್ ಹಕ್ಕುಗಳ ಕಚೇರಿ ತಿಳಿಸಿದೆ. ಆದರೂ ನಿಜವಾದ ಸಾವಿನ ಸಂಖ್ಯೆ ಹೆಚ್ಚಿರನಹುದು. ಈಗ ಲಭ್ಯವಾದ ಅಂಕಿಸಂಖ್ಯೆಯನ್ನು ಮಾತ್ರ ಪರಿಶೀಲಿಸಲು ಸಾಧ್ಯವಾಗಿದೆ’ ಎಂದು ಅದು ಒತ್ತಿ ಹೇಳಿದೆ.

ಯುಎನ್‌ನ ಇತರ ಸಂಸ್ಥೆಗಳು ಬುಧವಾರ ವರದಿ ಮಾಡಿದ 38 ಸಾವುಗಳಲ್ಲಿ 30 ಪ್ರಕರಣಗಳನ್ನು ಹಕ್ಕುಗಳ ಕಚೇರಿ ಪರಿಶೀಲಿಸಿದೆ. ಭದ್ರತಾ ಪಡೆಗಳ ಹತ್ಯೆಗಳು ಯಾಂಗೊನ್, ಮಾಂಡಲೆ, ಸಾಗಿಂಗ್, ಮ್ಯಾಗ್ವೇ ಮತ್ತು ಸೋಮಗಳಲ್ಲಿ ನಡೆದಿವೆ ಎಂದು ಅದು ಹೇಳಿದೆ.
ಇನ್ನೊಬ್ಬ ವ್ಯಕ್ತಿಯನ್ನು ಮಂಗಳವಾರ ಮತ್ತು 18 ಜನರನ್ನು ಭಾನುವಾರ ಕೊಲ್ಲಲಾಗಿದೆ ಎಂದು ದಾಖಲಿಸಲಾಗಿದೆ.

ದಂಗೆಯ ನಂತರ, 1,700 ಕ್ಕೂ ಹೆಚ್ಚು ಜನರನ್ನು “ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಥವಾ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ನಿರಂಕುಶವಾಗಿ ಬಂಧಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ಸೈನಿಕರು ಮತ್ತು ಪೊಲೀಸರು ಮನೆ ಮನೆಗೆ ತೆರಳಿ ಶೋಧ ನಡೆಸಿದ್ದರಿಂದ ಕನಿಷ್ಠ 700 ಜನರನ್ನು ಬುಧವಾರ ಒಂದೇ ದಿನ ವಶಕ್ಕೆ ಪಡೆಯಲಾಗಿದೆ.

ಮಿಲಿಟರಿ ದೌರ್ಜನ್ಯ ಕೊನೆಗೊಳಿಸಿ ಪ್ರತಿಭಟನೆಯ ಬಂಧಿತರಲ್ಲಿ ಸಂಸದರು, ರಾಜಕೀಯ ಮತ್ತು ಹಕ್ಕುಗಳ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು ಮತ್ತು ಸನ್ಯಾಸಿಗಳು ಸೇರಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಕನಿಷ್ಠ 29 ಪತ್ರಕರ್ತರನ್ನು ಬಂಧಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಮೇಲೆ ಸರ್ಕಾರದ ವಿರೋಧ ಅಥವಾ ದ್ವೇಷವನ್ನು ಪ್ರಚೋದಿಸುವುದು ಮತ್ತು ಕಾನೂನುಬಾಹಿರ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಇತರ ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ.

“ಮಾಹಿತಿ ಮತ್ತು ಪ್ರಭಾವ ಹೊಂದಿರುವ ಎಲ್ಲರನ್ನೂ ನಾನು ಕೋರುತ್ತೇನೆ … ಈಗ ಮತ್ತು ಹಿಂದೆ ನಡೆದಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಮಿಲಿಟರಿ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವ ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದು ಬ್ಯಾಚೆಲೆಟ್ ಹೇಳಿದರು.

“ಆಡಳಿತವನ್ನು ನ್ಯಾಯದ ಕಡೆಗೆ ತಿರುಗಿಸಲು ಮತ್ತು ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಮೇಲೆ ಮಿಲಿಟರಿಯ ಕತ್ತು ಹಿಸುಕುವಿಕೆಯನ್ನು ಕೊನೆಗೊಳಿಸಲು ಇದು ಸೂಕ್ತ ಸಂದರ್ಭವಾಗಿದೆ’ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...