Homeಅಂತರಾಷ್ಟ್ರೀಯಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

- Advertisement -
- Advertisement -

ವಿಶ್ವಸಂಸ್ಥೆ ಹಕ್ಕುಗಳ ಕಚೇರಿಯ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್ ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

ಮ್ಯಾನ್ಮಾರ್‌ನ ಫೆಬ್ರವರಿ 1 ರ ದಂಗೆಯ ನಂತರ ಕನಿಷ್ಠ 54 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲ್ಲುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಮ್ಯಾನ್ಮಾರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯ ನಂತರ ಈ ಪ್ರತಿಕ್ರಿಯೆಗಳು ಬಂದಿವೆ. ಪ್ರತಿಭಟನಾನಿರತ ಜನಸಂದಣಿಯ ಮೇಲೆ ಭದ್ರತಾ ಪಡೆಗಳು ಗುಂಡುಗಳನ್ನು ಹಾರಿಸಿದ ಪರಿಣಾಮ ಬುಧವಾರ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.

“ಮ್ಯಾನ್ಮಾರ್‌ನ ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲೆ ಮಾಡುವುದು ಮತ್ತು ಜೈಲಿಗೆ ಹಾಕುವುದನ್ನು ನಿಲ್ಲಿಸಬೇಕು” ಎಂದು ಮಿಚೆಲ್ ಬ್ಯಾಚೆಲೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಭದ್ರತಾ ಪಡೆಗಳು ದೇಶಾದ್ಯಂತ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ನೇರ ಮದ್ದುಗುಂಡುಗಳನ್ನು ಹಾರಿಸುತ್ತಿರುವುದು ಸಂಪೂರ್ಣವಾಗಿ ಅಸಹ್ಯಕರವಾಗಿದೆ. ತುರ್ತು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್‌ಗಳ ವಿರುದ್ಧ ನಡೆದ ದಾಳಿಗಳ ಬಗ್ಗೆಯೂ ದಿಗಿಲುಗೊಂಡಿದ್ದೇವೆ” ಎಂದು ಅವರು ಹೇಳಿದರು.

‘ಫೆಬ್ರವರಿ 1 ರಿಂದ ಕನಿಷ್ಠ 54 ಜನರನ್ನು ಪೊಲೀಸ್ ಮತ್ತು ಮಿಲಿಟರಿ ಅಧಿಕಾರಿಗಳು ಕೊಂದಿದ್ದಾರೆ ಎಂಬ ಮಾಹಿತಿಯನ್ನು ದೃಢಪಡಿಸಲಾಗಿದೆ ಎಂದು ಯುಎನ್ ಹಕ್ಕುಗಳ ಕಚೇರಿ ತಿಳಿಸಿದೆ. ಆದರೂ ನಿಜವಾದ ಸಾವಿನ ಸಂಖ್ಯೆ ಹೆಚ್ಚಿರನಹುದು. ಈಗ ಲಭ್ಯವಾದ ಅಂಕಿಸಂಖ್ಯೆಯನ್ನು ಮಾತ್ರ ಪರಿಶೀಲಿಸಲು ಸಾಧ್ಯವಾಗಿದೆ’ ಎಂದು ಅದು ಒತ್ತಿ ಹೇಳಿದೆ.

ಯುಎನ್‌ನ ಇತರ ಸಂಸ್ಥೆಗಳು ಬುಧವಾರ ವರದಿ ಮಾಡಿದ 38 ಸಾವುಗಳಲ್ಲಿ 30 ಪ್ರಕರಣಗಳನ್ನು ಹಕ್ಕುಗಳ ಕಚೇರಿ ಪರಿಶೀಲಿಸಿದೆ. ಭದ್ರತಾ ಪಡೆಗಳ ಹತ್ಯೆಗಳು ಯಾಂಗೊನ್, ಮಾಂಡಲೆ, ಸಾಗಿಂಗ್, ಮ್ಯಾಗ್ವೇ ಮತ್ತು ಸೋಮಗಳಲ್ಲಿ ನಡೆದಿವೆ ಎಂದು ಅದು ಹೇಳಿದೆ.
ಇನ್ನೊಬ್ಬ ವ್ಯಕ್ತಿಯನ್ನು ಮಂಗಳವಾರ ಮತ್ತು 18 ಜನರನ್ನು ಭಾನುವಾರ ಕೊಲ್ಲಲಾಗಿದೆ ಎಂದು ದಾಖಲಿಸಲಾಗಿದೆ.

ದಂಗೆಯ ನಂತರ, 1,700 ಕ್ಕೂ ಹೆಚ್ಚು ಜನರನ್ನು “ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಥವಾ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ನಿರಂಕುಶವಾಗಿ ಬಂಧಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ಸೈನಿಕರು ಮತ್ತು ಪೊಲೀಸರು ಮನೆ ಮನೆಗೆ ತೆರಳಿ ಶೋಧ ನಡೆಸಿದ್ದರಿಂದ ಕನಿಷ್ಠ 700 ಜನರನ್ನು ಬುಧವಾರ ಒಂದೇ ದಿನ ವಶಕ್ಕೆ ಪಡೆಯಲಾಗಿದೆ.

ಮಿಲಿಟರಿ ದೌರ್ಜನ್ಯ ಕೊನೆಗೊಳಿಸಿ ಪ್ರತಿಭಟನೆಯ ಬಂಧಿತರಲ್ಲಿ ಸಂಸದರು, ರಾಜಕೀಯ ಮತ್ತು ಹಕ್ಕುಗಳ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು ಮತ್ತು ಸನ್ಯಾಸಿಗಳು ಸೇರಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಕನಿಷ್ಠ 29 ಪತ್ರಕರ್ತರನ್ನು ಬಂಧಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಮೇಲೆ ಸರ್ಕಾರದ ವಿರೋಧ ಅಥವಾ ದ್ವೇಷವನ್ನು ಪ್ರಚೋದಿಸುವುದು ಮತ್ತು ಕಾನೂನುಬಾಹಿರ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಇತರ ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ.

“ಮಾಹಿತಿ ಮತ್ತು ಪ್ರಭಾವ ಹೊಂದಿರುವ ಎಲ್ಲರನ್ನೂ ನಾನು ಕೋರುತ್ತೇನೆ … ಈಗ ಮತ್ತು ಹಿಂದೆ ನಡೆದಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಮಿಲಿಟರಿ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವ ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದು ಬ್ಯಾಚೆಲೆಟ್ ಹೇಳಿದರು.

“ಆಡಳಿತವನ್ನು ನ್ಯಾಯದ ಕಡೆಗೆ ತಿರುಗಿಸಲು ಮತ್ತು ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಮೇಲೆ ಮಿಲಿಟರಿಯ ಕತ್ತು ಹಿಸುಕುವಿಕೆಯನ್ನು ಕೊನೆಗೊಳಿಸಲು ಇದು ಸೂಕ್ತ ಸಂದರ್ಭವಾಗಿದೆ’ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...