Homeಅಂತರಾಷ್ಟ್ರೀಯಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

- Advertisement -
- Advertisement -

ವಿಶ್ವಸಂಸ್ಥೆ ಹಕ್ಕುಗಳ ಕಚೇರಿಯ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್ ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

ಮ್ಯಾನ್ಮಾರ್‌ನ ಫೆಬ್ರವರಿ 1 ರ ದಂಗೆಯ ನಂತರ ಕನಿಷ್ಠ 54 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲ್ಲುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಮ್ಯಾನ್ಮಾರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯ ನಂತರ ಈ ಪ್ರತಿಕ್ರಿಯೆಗಳು ಬಂದಿವೆ. ಪ್ರತಿಭಟನಾನಿರತ ಜನಸಂದಣಿಯ ಮೇಲೆ ಭದ್ರತಾ ಪಡೆಗಳು ಗುಂಡುಗಳನ್ನು ಹಾರಿಸಿದ ಪರಿಣಾಮ ಬುಧವಾರ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.

“ಮ್ಯಾನ್ಮಾರ್‌ನ ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲೆ ಮಾಡುವುದು ಮತ್ತು ಜೈಲಿಗೆ ಹಾಕುವುದನ್ನು ನಿಲ್ಲಿಸಬೇಕು” ಎಂದು ಮಿಚೆಲ್ ಬ್ಯಾಚೆಲೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಭದ್ರತಾ ಪಡೆಗಳು ದೇಶಾದ್ಯಂತ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ನೇರ ಮದ್ದುಗುಂಡುಗಳನ್ನು ಹಾರಿಸುತ್ತಿರುವುದು ಸಂಪೂರ್ಣವಾಗಿ ಅಸಹ್ಯಕರವಾಗಿದೆ. ತುರ್ತು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್‌ಗಳ ವಿರುದ್ಧ ನಡೆದ ದಾಳಿಗಳ ಬಗ್ಗೆಯೂ ದಿಗಿಲುಗೊಂಡಿದ್ದೇವೆ” ಎಂದು ಅವರು ಹೇಳಿದರು.

‘ಫೆಬ್ರವರಿ 1 ರಿಂದ ಕನಿಷ್ಠ 54 ಜನರನ್ನು ಪೊಲೀಸ್ ಮತ್ತು ಮಿಲಿಟರಿ ಅಧಿಕಾರಿಗಳು ಕೊಂದಿದ್ದಾರೆ ಎಂಬ ಮಾಹಿತಿಯನ್ನು ದೃಢಪಡಿಸಲಾಗಿದೆ ಎಂದು ಯುಎನ್ ಹಕ್ಕುಗಳ ಕಚೇರಿ ತಿಳಿಸಿದೆ. ಆದರೂ ನಿಜವಾದ ಸಾವಿನ ಸಂಖ್ಯೆ ಹೆಚ್ಚಿರನಹುದು. ಈಗ ಲಭ್ಯವಾದ ಅಂಕಿಸಂಖ್ಯೆಯನ್ನು ಮಾತ್ರ ಪರಿಶೀಲಿಸಲು ಸಾಧ್ಯವಾಗಿದೆ’ ಎಂದು ಅದು ಒತ್ತಿ ಹೇಳಿದೆ.

ಯುಎನ್‌ನ ಇತರ ಸಂಸ್ಥೆಗಳು ಬುಧವಾರ ವರದಿ ಮಾಡಿದ 38 ಸಾವುಗಳಲ್ಲಿ 30 ಪ್ರಕರಣಗಳನ್ನು ಹಕ್ಕುಗಳ ಕಚೇರಿ ಪರಿಶೀಲಿಸಿದೆ. ಭದ್ರತಾ ಪಡೆಗಳ ಹತ್ಯೆಗಳು ಯಾಂಗೊನ್, ಮಾಂಡಲೆ, ಸಾಗಿಂಗ್, ಮ್ಯಾಗ್ವೇ ಮತ್ತು ಸೋಮಗಳಲ್ಲಿ ನಡೆದಿವೆ ಎಂದು ಅದು ಹೇಳಿದೆ.
ಇನ್ನೊಬ್ಬ ವ್ಯಕ್ತಿಯನ್ನು ಮಂಗಳವಾರ ಮತ್ತು 18 ಜನರನ್ನು ಭಾನುವಾರ ಕೊಲ್ಲಲಾಗಿದೆ ಎಂದು ದಾಖಲಿಸಲಾಗಿದೆ.

ದಂಗೆಯ ನಂತರ, 1,700 ಕ್ಕೂ ಹೆಚ್ಚು ಜನರನ್ನು “ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಥವಾ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ನಿರಂಕುಶವಾಗಿ ಬಂಧಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ಸೈನಿಕರು ಮತ್ತು ಪೊಲೀಸರು ಮನೆ ಮನೆಗೆ ತೆರಳಿ ಶೋಧ ನಡೆಸಿದ್ದರಿಂದ ಕನಿಷ್ಠ 700 ಜನರನ್ನು ಬುಧವಾರ ಒಂದೇ ದಿನ ವಶಕ್ಕೆ ಪಡೆಯಲಾಗಿದೆ.

ಮಿಲಿಟರಿ ದೌರ್ಜನ್ಯ ಕೊನೆಗೊಳಿಸಿ ಪ್ರತಿಭಟನೆಯ ಬಂಧಿತರಲ್ಲಿ ಸಂಸದರು, ರಾಜಕೀಯ ಮತ್ತು ಹಕ್ಕುಗಳ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು ಮತ್ತು ಸನ್ಯಾಸಿಗಳು ಸೇರಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಕನಿಷ್ಠ 29 ಪತ್ರಕರ್ತರನ್ನು ಬಂಧಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಮೇಲೆ ಸರ್ಕಾರದ ವಿರೋಧ ಅಥವಾ ದ್ವೇಷವನ್ನು ಪ್ರಚೋದಿಸುವುದು ಮತ್ತು ಕಾನೂನುಬಾಹಿರ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಇತರ ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ.

“ಮಾಹಿತಿ ಮತ್ತು ಪ್ರಭಾವ ಹೊಂದಿರುವ ಎಲ್ಲರನ್ನೂ ನಾನು ಕೋರುತ್ತೇನೆ … ಈಗ ಮತ್ತು ಹಿಂದೆ ನಡೆದಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಮಿಲಿಟರಿ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವ ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದು ಬ್ಯಾಚೆಲೆಟ್ ಹೇಳಿದರು.

“ಆಡಳಿತವನ್ನು ನ್ಯಾಯದ ಕಡೆಗೆ ತಿರುಗಿಸಲು ಮತ್ತು ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಮೇಲೆ ಮಿಲಿಟರಿಯ ಕತ್ತು ಹಿಸುಕುವಿಕೆಯನ್ನು ಕೊನೆಗೊಳಿಸಲು ಇದು ಸೂಕ್ತ ಸಂದರ್ಭವಾಗಿದೆ’ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...