Homeಕರ್ನಾಟಕಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ "ಒನ್ ನೇಷನ್, ಒನ್ ಲೀಡರ್" ಆಗಿದೆ.

- Advertisement -
- Advertisement -

ವಿಧಾನಸಭೆ ಅಧಿವೇಶದಲ್ಲಿ ಶರ್ಟ್ ಬಿಚ್ಚಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇಲೆ ಒಂದು ವಾರ ಕಲಾಪದಿಂದ ಅಮಾನತಾಗಿರುವ ಶಾಸಕ ಸಂಗಮೇಶ್ ಸಮರ್ಥನೆಗೆ ಕಾಂಗ್ರೆಸ್ ನಾಯಕರ ದಂಡು ನಿಂತಿದೆ. ಸಂಗಮೇಶ್ ಪರ ಬ್ಯಾಟ್ ಬೀಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವಂತೆ ವರ್ತಿಸಿಲ್ಲ ಎಂದಿದ್ದಾರೆ.

ಶಾಸಕ ಸಂಗಮೇಶ್, ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತ ಪಕ್ಷದವರು ನಡೆಸುತ್ತಿರುವ ಅನ್ಯಾಯ, ದಬ್ಬಾಳಿಕೆಗಳಿಂದ ನೊಂದು ಸದನದಲ್ಲಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ನೀಡಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರ ಪುತ್ರ ಸಂಸದ ರಾಘವೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಸಂಗಮೇಶ್ ಮತ್ತು ಅವರ ಕುಟುಂಬದವರ ವಿರುದ್ಧ ಕ್ಷುಲ್ಲಕ ಕಾರಣಕ್ಕೆ ಕೊಲೆ ಯತ್ನದ ಮೊಕದ್ದಮೆಯನ್ನು ದಾಖಲಿಸುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ಭದ್ರಾವತಿ ಶಾಸಕ ಸಂಗಮೇಶ್‌ರನ್ನು ಒಂದು ವಾರದ ಕಾಲ ಸದನದಿಂದ ವಜಾ ಮಾಡಿರುವ ಸ್ಪೀಕರ್ ಅವರ ಆದೇಶವನ್ನು ಖಂಡಿಸಿರುವ ಸಿದ್ದರಾಮಯ್ಯ, ಸಂಗಮೇಶ್ ಅವರಿಗಾಗಲೀ, ಪ್ರತಿಪಕ್ಷದ ನಾಯಕನಾದ ನನಗಾಗಲೀ ಮಾತನಾಡಲು ಅವಕಾಶ ನೀಡದೆ ವಿಧಾನ ಸಭಾಧ್ಯಕ್ಷರು ಏಕಪಕ್ಷೀಯವಾಗಿ ಕೈಗೊಂಡಿರುವ ನಿರ್ಣಯ ಅಸಂವಿಧಾನಿಕ ಎಂದಿದ್ದಾರೆ.

ಇನ್ನು, ಸಂಗಮೇಶ್ ಅವರ ಮೇಲೆ ದಾಖಲಿಸಲಾಗಿರುವ ಸುಳ್ಳು ಮೊಕದ್ದಮೆಯನ್ನು ವಾಪಾಸು ಪಡೆದು ಸರ್ಕಾರ ಕ್ಷಮಾಪಣೆ ಕೇಳಬೇಕು ಮತ್ತು ಅವರನ್ನು ಸದನದಿಂದ ವಜಾಗೊಳಿಸಿರುವ ನಿರ್ಣಯವನ್ನು ಕೂಡ ಹಿಂಪಡೆಯಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಒಂದು ದೇಶ ಒಂದು ಚುನಾವಣೆ ವಿಚಾರವನ್ನು ಸದನದಲ್ಲಿ ಚರ್ಚಿಸಿದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ’ದೇಶದಲ್ಲಿ ನಡೆಯುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು. ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿರುವುದು ಕೂಡ ಕೇಂದ್ರ ಸರ್ಕಾರ. ಹೀಗಿರುವಾಗ ವಿಧಾನ ಮಂಡಲ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಚರ್ಚಿಸುವುದರಿಂದ ಆಗುವ ಉಪಯೋಗ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಬಿಜೆಪಿಯವರು ಕೇವಲ ಪ್ರಚಾರದ ದೃಷ್ಟಿಯಿಂದ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಂಡಿದ್ದಾರೆ. ನಿಯಮಾವಳಿಗಳ ಪ್ರಕಾರ ಈ ವಿಷಯದ ಚರ್ಚೆಗೆ ಅವಕಾಶವಿಲ್ಲ, ಹೀಗಾಗಿ ನಾವು ವಿರೋಧ ಮಾಡಿದ್ದೇವೆಯೇ ಹೊರತು ಚರ್ಚೆ ನಡೆಸಲಾಗದೆ ಅಲ್ಲ ಎಂದು ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ್ದಾರೆ.

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ “ಒನ್ ನೇಷನ್, ಒನ್ ಲೀಡರ್” ಆಗಿದೆ. ಇದರ ಬದಲು ರಾಜ್ಯ ಸರ್ಕಾರ ಚುನಾವಣಾ ವ್ಯವಸ್ಥೆಯಲ್ಲಿ ತರಬಹುದಾದ ಸುಧಾರಣೆಗಳ ಕುರಿತು ಚರ್ಚಿಸುವುದಾದರೆ, ನಾವು ನಮ್ಮ ಅಭಿಪ್ರಾಯ ಹಂಚಿಕೊಳ್ಳಲು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

’ಒಂದು ದೇಶ ಒಂದು ಚುನಾವಣೆ’ ಚರ್ಚೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದರು. ಕಾಂಗ್ರೆಸ್​ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

ಶಾಸಕರ ವಿರುದ್ಧ ಪ್ರಸ್ತಾವನೆ ಮಂಡಿಸಿ, ಧ್ವನಿ ಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಮಾರ್ಚ್​ 12 ನೇ ತಾರೀಖಿನವರೆಗೆ, ಸುಮಾರು 9 ದಿನಗಳ ಕಾಲ ಶಾಸಕ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡರು.


ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...