Homeಮುಖಪುಟಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ.

ಬುಧವಾರ (ಮಾರ್ಚ್ 3) ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಭಾರತ, ಜಪಾನ್ ಮತ್ತು ಸಿರಿಯಾದ ಮೂವರು “ಪ್ರಾಚೀನ” ಮಹಿಳೆಯರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರತಿಯೊಬ್ಬರೂ ತಮ್ಮ ದೇಶಗಳ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ. 1885 ರಲ್ಲಿ ತೆಗೆದಿರುವ ಈ ಛಾಯಾಚಿತ್ರದಲ್ಲಿರುವ ಮೂವರು ಮಹಿಳೆಯರು, ತಮ್ಮ ತಮ್ಮ ದೇಶದ ಮೊದಲ ಪರವಾನಗಿ ಪಡೆದ ಮಹಿಳಾ ವೈದ್ಯರು ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆ ಇವರ ಸಂಸ್ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟಿ,  ಇಂದಿನ ಸಾಧಕರನ್ನು ಗುರುತಿಸಲು ಹೊರಟರೇ ಅವರೆಲ್ಲಾ ಹರಿದ ಅಮೆರಿಕನ್ ಜೀನ್ಸ್ ಮತ್ತು ರಾಗ್‌ಗಳನ್ನು ಬ್ಲೌಸ್‌ನಂತೆ ಧರಿಸಿರುತ್ತಾರೆ. ಇದು ಅಮೆರಿಕನ್ ಮಾರ್ಕೆಟಿಂಗ್ ಅನ್ನು ಹೊರತುಪಡಿಸಿ ಏನನ್ನೂ ಪ್ರತಿನಿಧಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾಗದ ಕಂಗನಾ ರಣಾವತ್‌ಗೆ ವಾರೆಂಟ್!

ಈ ಟ್ವೀಟ್‌ಗೆ ಪ್ರತಿಟ್ವೀಟ್ ಮಾಡಿರುವ ನೆಟ್ಟಿಗರು ಅವರು ಟೋನ್ಡ್ ಜೀನ್ಸ್‌ಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡು, ಇದು ಯಾವ ಮಾರ್ಕೆಟಿಂಗ್ ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು ನಟಿ ಕಂಗನಾ ರಣಾವತ್ ಧರಿಸಿರುವ ಹಲವು ವಿದೇಶಿ ಶೈಲಿಯ ಧಿರಿಸುಗಳ ಕುರಿತು ವಿವರವಾಗಿ ದಾಖಲಿಸಿ, ವಿದೇಶಿ ಮಾರ್ಕೆಟಿಂಗ್ ಅಂದರೆ ಇದು ಎಂದಿದ್ದಾರೆ.

ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಿಶಾದ್ ಸಿಂಗ್ ಎನ್ನುವ ಟ್ವಿಟರ್‌ ಬಳಕೆದಾರರು ಕಂಗನಾ ರಣಾವತ್ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಅವರು ನಿಜವಾದ ದೇಶಭಕ್ತರಾಗಿದ್ದರೇ ರಾಮ್‌ದೇವ್ ಅವರ ಜೀನ್ಸ್ ಧರಿಸಲು ಹೇಳಿ ಎಂದಿದ್ದಾರೆ.

ದಿ ವರ್ಲ್ಡ್‌ನ ಸಾರ್ವಜನಿಕ ರೇಡಿಯೊ ಕಾರ್ಯಕ್ರಮ ಮತ್ತು ಪಾಡ್‌ಕ್ಯಾಸ್ಟ್ ಪ್ರಕಟಿಸಿದ ವರದಿಯ ಪ್ರಕಾರ, ನಟಿ ಕಂಗನಾ ರಣಾವತ್ ಅವರು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿನ ಮಹಿಳೆಯರು ಪೆನ್ಸಿಲ್ವೇನಿಯಾದ ಮಹಿಳಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. ಚಿತ್ರ ಈಗ ಡ್ರೆಕ್ಸೆಲ್ ವಿಶ್ವವಿದ್ಯಾಲಯದ ಆರ್ಕೈವ್‌ಗಳಲ್ಲಿದೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.


ಇದನ್ನೂ ಓದಿ: ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...