Homeಮುಖಪುಟಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ.

ಬುಧವಾರ (ಮಾರ್ಚ್ 3) ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಭಾರತ, ಜಪಾನ್ ಮತ್ತು ಸಿರಿಯಾದ ಮೂವರು “ಪ್ರಾಚೀನ” ಮಹಿಳೆಯರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರತಿಯೊಬ್ಬರೂ ತಮ್ಮ ದೇಶಗಳ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ. 1885 ರಲ್ಲಿ ತೆಗೆದಿರುವ ಈ ಛಾಯಾಚಿತ್ರದಲ್ಲಿರುವ ಮೂವರು ಮಹಿಳೆಯರು, ತಮ್ಮ ತಮ್ಮ ದೇಶದ ಮೊದಲ ಪರವಾನಗಿ ಪಡೆದ ಮಹಿಳಾ ವೈದ್ಯರು ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆ ಇವರ ಸಂಸ್ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟಿ,  ಇಂದಿನ ಸಾಧಕರನ್ನು ಗುರುತಿಸಲು ಹೊರಟರೇ ಅವರೆಲ್ಲಾ ಹರಿದ ಅಮೆರಿಕನ್ ಜೀನ್ಸ್ ಮತ್ತು ರಾಗ್‌ಗಳನ್ನು ಬ್ಲೌಸ್‌ನಂತೆ ಧರಿಸಿರುತ್ತಾರೆ. ಇದು ಅಮೆರಿಕನ್ ಮಾರ್ಕೆಟಿಂಗ್ ಅನ್ನು ಹೊರತುಪಡಿಸಿ ಏನನ್ನೂ ಪ್ರತಿನಿಧಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾಗದ ಕಂಗನಾ ರಣಾವತ್‌ಗೆ ವಾರೆಂಟ್!

ಈ ಟ್ವೀಟ್‌ಗೆ ಪ್ರತಿಟ್ವೀಟ್ ಮಾಡಿರುವ ನೆಟ್ಟಿಗರು ಅವರು ಟೋನ್ಡ್ ಜೀನ್ಸ್‌ಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡು, ಇದು ಯಾವ ಮಾರ್ಕೆಟಿಂಗ್ ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು ನಟಿ ಕಂಗನಾ ರಣಾವತ್ ಧರಿಸಿರುವ ಹಲವು ವಿದೇಶಿ ಶೈಲಿಯ ಧಿರಿಸುಗಳ ಕುರಿತು ವಿವರವಾಗಿ ದಾಖಲಿಸಿ, ವಿದೇಶಿ ಮಾರ್ಕೆಟಿಂಗ್ ಅಂದರೆ ಇದು ಎಂದಿದ್ದಾರೆ.

ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಿಶಾದ್ ಸಿಂಗ್ ಎನ್ನುವ ಟ್ವಿಟರ್‌ ಬಳಕೆದಾರರು ಕಂಗನಾ ರಣಾವತ್ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಅವರು ನಿಜವಾದ ದೇಶಭಕ್ತರಾಗಿದ್ದರೇ ರಾಮ್‌ದೇವ್ ಅವರ ಜೀನ್ಸ್ ಧರಿಸಲು ಹೇಳಿ ಎಂದಿದ್ದಾರೆ.

ದಿ ವರ್ಲ್ಡ್‌ನ ಸಾರ್ವಜನಿಕ ರೇಡಿಯೊ ಕಾರ್ಯಕ್ರಮ ಮತ್ತು ಪಾಡ್‌ಕ್ಯಾಸ್ಟ್ ಪ್ರಕಟಿಸಿದ ವರದಿಯ ಪ್ರಕಾರ, ನಟಿ ಕಂಗನಾ ರಣಾವತ್ ಅವರು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿನ ಮಹಿಳೆಯರು ಪೆನ್ಸಿಲ್ವೇನಿಯಾದ ಮಹಿಳಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. ಚಿತ್ರ ಈಗ ಡ್ರೆಕ್ಸೆಲ್ ವಿಶ್ವವಿದ್ಯಾಲಯದ ಆರ್ಕೈವ್‌ಗಳಲ್ಲಿದೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.


ಇದನ್ನೂ ಓದಿ: ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...