Homeಮುಖಪುಟಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ.

ಬುಧವಾರ (ಮಾರ್ಚ್ 3) ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಭಾರತ, ಜಪಾನ್ ಮತ್ತು ಸಿರಿಯಾದ ಮೂವರು “ಪ್ರಾಚೀನ” ಮಹಿಳೆಯರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರತಿಯೊಬ್ಬರೂ ತಮ್ಮ ದೇಶಗಳ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ. 1885 ರಲ್ಲಿ ತೆಗೆದಿರುವ ಈ ಛಾಯಾಚಿತ್ರದಲ್ಲಿರುವ ಮೂವರು ಮಹಿಳೆಯರು, ತಮ್ಮ ತಮ್ಮ ದೇಶದ ಮೊದಲ ಪರವಾನಗಿ ಪಡೆದ ಮಹಿಳಾ ವೈದ್ಯರು ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆ ಇವರ ಸಂಸ್ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟಿ,  ಇಂದಿನ ಸಾಧಕರನ್ನು ಗುರುತಿಸಲು ಹೊರಟರೇ ಅವರೆಲ್ಲಾ ಹರಿದ ಅಮೆರಿಕನ್ ಜೀನ್ಸ್ ಮತ್ತು ರಾಗ್‌ಗಳನ್ನು ಬ್ಲೌಸ್‌ನಂತೆ ಧರಿಸಿರುತ್ತಾರೆ. ಇದು ಅಮೆರಿಕನ್ ಮಾರ್ಕೆಟಿಂಗ್ ಅನ್ನು ಹೊರತುಪಡಿಸಿ ಏನನ್ನೂ ಪ್ರತಿನಿಧಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾಗದ ಕಂಗನಾ ರಣಾವತ್‌ಗೆ ವಾರೆಂಟ್!

ಈ ಟ್ವೀಟ್‌ಗೆ ಪ್ರತಿಟ್ವೀಟ್ ಮಾಡಿರುವ ನೆಟ್ಟಿಗರು ಅವರು ಟೋನ್ಡ್ ಜೀನ್ಸ್‌ಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡು, ಇದು ಯಾವ ಮಾರ್ಕೆಟಿಂಗ್ ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು ನಟಿ ಕಂಗನಾ ರಣಾವತ್ ಧರಿಸಿರುವ ಹಲವು ವಿದೇಶಿ ಶೈಲಿಯ ಧಿರಿಸುಗಳ ಕುರಿತು ವಿವರವಾಗಿ ದಾಖಲಿಸಿ, ವಿದೇಶಿ ಮಾರ್ಕೆಟಿಂಗ್ ಅಂದರೆ ಇದು ಎಂದಿದ್ದಾರೆ.

ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಿಶಾದ್ ಸಿಂಗ್ ಎನ್ನುವ ಟ್ವಿಟರ್‌ ಬಳಕೆದಾರರು ಕಂಗನಾ ರಣಾವತ್ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಅವರು ನಿಜವಾದ ದೇಶಭಕ್ತರಾಗಿದ್ದರೇ ರಾಮ್‌ದೇವ್ ಅವರ ಜೀನ್ಸ್ ಧರಿಸಲು ಹೇಳಿ ಎಂದಿದ್ದಾರೆ.

ದಿ ವರ್ಲ್ಡ್‌ನ ಸಾರ್ವಜನಿಕ ರೇಡಿಯೊ ಕಾರ್ಯಕ್ರಮ ಮತ್ತು ಪಾಡ್‌ಕ್ಯಾಸ್ಟ್ ಪ್ರಕಟಿಸಿದ ವರದಿಯ ಪ್ರಕಾರ, ನಟಿ ಕಂಗನಾ ರಣಾವತ್ ಅವರು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿನ ಮಹಿಳೆಯರು ಪೆನ್ಸಿಲ್ವೇನಿಯಾದ ಮಹಿಳಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. ಚಿತ್ರ ಈಗ ಡ್ರೆಕ್ಸೆಲ್ ವಿಶ್ವವಿದ್ಯಾಲಯದ ಆರ್ಕೈವ್‌ಗಳಲ್ಲಿದೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.


ಇದನ್ನೂ ಓದಿ: ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...