Homeಚಳವಳಿಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

- Advertisement -
- Advertisement -

ತನ್ನ ಜಮೀನನ್ನು ವಶಪಡಿಸಿದ್ದ ಗೂಂಡಾಗಳ ವಿರುದ್ದ ಹೋರಾಟ ನಡೆಸುತ್ತಿದ್ದ ದಲಿತ ಆರ್‌ಟಿಐ ಹೋರಾಟಗಾರರೊಬ್ಬರನ್ನು, ಮೇಲ್ಜಾತಿಯ ಜನರು ಹತ್ಯೆಗೈದಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದಿದೆ. ಈ ವೇಳೆ ತನ್ನ ತಂದೆಯನ್ನು ಕೊಲ್ಲದಂತೆ ಅಡ್ಡಿಪಡಿಸಿದ ಮಗಳ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಜಿಲ್ಲೆಯ ಘೋಘಾ ತಾಲೂಕಿನ ಸನೋದರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಹತ್ಯೆಗೀಡಾದ ಹೋರಾಟಗಾರನ್ನು ಅಮ್ರಾಭಾಯ್ ಬೋರಿಚಾ (50) ಎಂದು ಗುರಿತಿಸಲಾಗಿದೆ. ದುಷ್ಕರ್ಮಿಗಳು ಅವರ ಮೇಲೆ ಈಟಿ, ಕಬ್ಬಿಣದ ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮೊದಲು ಅವರು ನಮ್ಮ ಮೇಲೆ ಕಲ್ಲು ಎಸೆದರು. ನನ್ನ ತಂದೆ ರಕ್ಷಣೆಗಾಗಿ ಮನೆಯೊಳಗೆ ಧಾವಿಸುತ್ತಿದ್ದಂತೆ, ಹಲ್ಲೆಕೋರರು ಗೇಟ್ ಮುರಿದು, ಅಡ್ಡಗಟ್ಟಿ ಈಟಿ, ಕಬ್ಬಿಣದ ಪೈಪ್‌‌ ಮತ್ತು ಕತ್ತಿಯಿಂದ ಹಲ್ಲೆ ನಡೆಸಿ ಕೊಂದುಹಾಕಿದರು” ಎಂದು ಬೋರಿಚಾ ಅವರ ಮಗಳು ನಿರ್ಮಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಂಗಳವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

“ತಂದೆ ಮತ್ತು ನಾನು ಹೊರಗೆ ನಿಂತಿದ್ದಾಗ ನಮ್ಮ ಹಳ್ಳಿಯ ದರ್ಬಾರ್‌ಗಳ (ಕ್ಷತ್ರಿಯರು) ಸುಮಾರು 50 ಸದಸ್ಯರು ನಮ್ಮ ಮನೆಯ ಮುಂದಿನಿಂದ ಡಿಜೆ ಸಂಗೀತ ನುಡಿಸುತ್ತಾ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ಹಿಂತಿರುಗಿದ ಅವರು ನಮ್ಮ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು. ನಮಗೆ ಪೊಲೀಸ್ ರಕ್ಷಣೆ ಇದೆ, ಅದನ್ನೂ ಮೀರಿ ಅವರು ಈಟಿ, ಕೊಡಲಿ, ಪೈಪ್ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ನಿರ್ಮಲಾ ಹೇಳಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ನಿರ್ಮಲಾ ಅವರನ್ನು ಭಾವನಗರದ ಸರ್ ತಕ್ತಾಸಿಂಜಿ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ತಮ್ಮ ತಂದೆಯ ಮೇಲೆ 2013 ರಲ್ಲೂ ಹಲ್ಲೆ ನಡೆಸಲಾಗಿತ್ತು ಈ ವೇಳೆ ಅವರ ಕಾಲನ್ನು ಮುರಿಯಲಾಗಿತ್ತು ಎಂದು ನಿರ್ಮಲಾ ಹೇಳಿದ್ದಾರೆ.

ಘಟನೆಯ ಬಗ್ಗೆ ಶಾಸಕ ಜಿಗ್ನೇಶ್ ವಿವರಿಸುವ ವಿಡಿಯೋ ನೋಡಿ

ದಲಿತ ಹಕ್ಕುಗಳಿಗಾಗಿ ಕೆಲಸ ಮಾಡುತ್ತಿರುವ ಅಹಮದಾಬಾದ್ ಮೂಲದ ಎನ್‌ಜಿಒದ ಕಾರ್ಯಕರ್ತ ಅರವಿಂದ್ ಮಕ್ವಾನಾ ಹೇಳುವಂತೆ, “ಸುಮಾರು ಒಂದು ತಿಂಗಳ ಹಿಂದೆ ಬೋರಿಚಾ ಅವರು ಕ್ಷತ್ರಿಯರ ವಿರುದ್ಧ ಘೋಘಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಆದರೆ ಘೋಗಾದ ಸಬ್ ಇನ್ಸ್‌ಪೆಕ್ಟರ್ ಪಿ.ಆರ್.ಸೋಲಂಕಿ ಎಫ್ಐಆರ್ ನೋಂದಾಯಿಸಲಿಲ್ಲ. ಇದಕ್ಕಾಗಿ ಬೋರಿಚಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಈ ಮಧ್ಯೆ, ಕ್ಷತ್ರಿಯರ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಬೋರಿಚಾ ಹತ್ಯೆಗೆ ಸಂಬಂಧಿಸಿದಂತೆ ರಾತ್ರಿ 10.30 ರವರೆಗೆ ಘೋಘಾ ಪೊಲೀಸ್ ಠಾಣೆಯಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎನ್ನಲಾಗಿದೆ. ಈ ಬಗ್ಗೆ ಪಿಎಸ್‌ಐ ಸೋಲಂಕಿ, ಭಾವನಗರ ಎಸ್‌ಪಿ ಮತ್ತು ಐಜಿ ವರದಿಗಾರರ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ಹೇಳಿದೆ.

ಬೋರಿಚಾ ಸನೋದರ್ ಗ್ರಾಮದ ಏಕೈಕ ದಲಿತ ಕುಟುಂಬಿಕನಾಗಿದ್ದು, ಕ್ಷತ್ರಿಯರು ಅವರ ಕೃಷಿ ಭೂಮಿಯನ್ನು ಮತ್ತು ವಸತಿ ಜಮೀನನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಮಕ್ವಾನಾ ಆರೋಪಿಸಿದ್ದಾರೆ.

“ಸುಮಾರು ಒಂದು ತಿಂಗಳ ಹಿಂದೆ, ಆರೋಪಿಗಳು ಬೋರಿಚಾ ಅವರ ವಸತಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದರು. ಅವರು ಪೊಲೀಸರಿಗೆ ದೂರು ನೀಡಿದ್ದರು ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಕ್ವಾನಾ ತಿಳಿಸಿದ್ದಾರೆ.

ಘಟನೆಯನ್ನು ಗುಜರಾತ್‌ ಶಾಸಕ, ಊನಾ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಖಂಡಿಸಿದ್ದು, ಹೋರಾಟಗಾರರು, ಪ್ರಭಾವಿ ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಈ ಘಟನೆಯ ಬಗ್ಗೆ ಧ್ವನಿ ಎತ್ತುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಐತಿಹಾಸಿಕ ಹೋರಾಟದಲ್ಲಿರುವ ರೈತರು ದೆಹಲಿಯ ಬಿರು ಬಿಸಿಲಿನಿಂದ ರಕ್ಷಣೆ ಹೊಂದಲು ಮಾಡುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...