Homeಅಂಕಣಗಳುಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

- Advertisement -
- Advertisement -

[ದೇಶದ ಜೈಲುಗಳಲ್ಲಿ ಕೊಳೆಯುತ್ತಿರುವ ದಲಿತರು ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಪ್ರಮಾಣ ಶೇ.51]

ಭರತ ಭೂಮಿಯಲ್ಲಿ ಬಡವರಾಗಿ ಹುಟ್ಟುವುದು ಅಪರಾಧ. ದಲಿತರು ಮತ್ತು ಆದಿವಾಸಿಗಳಾಗಿ ಜನಿಸುವುದು ನೂರುಪಟ್ಟು ಅಪರಾಧ. ದಲಿತರಾಗಿ ರೈತ-ಕಾರ್ಮಿಕರ ಹಕ್ಕುಗಳ ಪರವಾಗಿ ದನಿಯೆತ್ತುವುದೆಂದರೆ ಅವಹೇಳನ, ಬಂಧನ, ಅಪನಿಂದೆ, ಚಿತ್ರಹಿಂಸೆಗಳಿಗೆ ಆಹ್ವಾನ ನೀಡಿದಂತೆಯೇ. ಪಂಜಾಬ್-ಹರಿಯಾಣ ಹೈಕೋರ್ಟಿನಿಂದ ಮೊನ್ನೆ ಜಾಮೀನು ಪಡೆದು 44 ದಿನಗಳ ಬಂಧನದಿಂದ ಹೊರಬಿದ್ದ ನೌದೀಪ್ ಕೌರ್ ಬಡವರಷ್ಟೇ ಅಲ್ಲ ದಲಿತರು. ಮೇಲಾಗಿ ರೈತ ಕಾರ್ಮಿಕರ ಹಕ್ಕುಗಳಿಗೆ ಹೋರಾಡುವ ದಿಟ್ಟ ಹೆಣ್ಣುಮಗಳು.

ಈಕೆಯ ತಾಯಿ ಅಕ್ಕ ತಂಗಿ ಎಲ್ಲ ಹೋರಾಟಗಾರರೇ. ಹುಟ್ಟು ಮತ್ತು ಬಡತನದ ಕಾರಣ ಎದುರಿಸಿದ ದಬ್ಬಾಳಿಕೆಯೇ ಹೋರಾಟವನ್ನು ಕಲಿಸಿಕೊಟ್ಟಿದೆ. ನೌದೀಪ್ ಅಕ್ಕ ರಾಜವೀರ್ ಕೌರ್ ಕೂಡ ಆಂದೋಲನಗಳಲ್ಲಿ ಸಕ್ರಿಯವಾಗಿರುವ ಹೆಣ್ಣುಮಗಳು. ದೆಹಲಿ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ.

ಅನ್ಯಾಯದ ವಿರುದ್ಧ ಸಿಡಿದೇಳುವ ದಿಟ್ಟತನ ನೌದೀಪ್‌ಗೆ ರಕ್ತಗತ. ತಾಯಿ ಪಂಜಾಬಿನ ಮುಖ್ತಸರ್ ಸಾಹೀಬ್‌ನ ಖೇತ್ ಯೂನಿಯನ್ ಸದಸ್ಯೆ. ಹೋರಾಟಗಳಿಂದಾಗಿ ಜೈಲು ಪಾಲಾಗಿದ್ದಾಕೆ. ತಮ್ಮ ಹಳ್ಳಿಯಲ್ಲಿ ಭೂಹೀನ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿದ ಮೇಲ್ಜಾತಿಯ ಜಮೀನುದಾರನ ವಿರುದ್ಧ ಪ್ರತಿಭಟಿಸಿದಾಕೆ. ಪರಿಣಾಮವಾಗಿ ಈ ಕುಟುಂಬ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಿ ತೆಲಂಗಾಣಕ್ಕೆ ವಲಸೆ ಹೋಗಬೇಕಾಯಿತು. ತಂದೆ ಹೈದರಾಬಾದಿನಲ್ಲಿ ವಾಹನ ಚಾಲಕ. ನೌದೀಪ್ ಓದುಬರೆಹಕ್ಕೆ ಅಡಚಣೆಯಾಯಿತು. 12ನೆಯ ತರಗತಿಯನ್ನು ಮುಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ಪೂರೈಸಬೇಕಾಯಿತು. 2019ರಲ್ಲಿ ದೆಹಲಿಗೆ ಬಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ಓದಬಯಸಿದರು.

ಅಕ್ಕ ರಾಜವೀರ್ ಜೊತೆ ವಿಶ್ವವಿದ್ಯಾಲಯದ ಭಗತ್ ಸಿಂಗ್ ವಿದ್ಯಾರ್ಥಿ ಐಕ್ಯವೇದಿಕೆಯ ಸದಸ್ಯೆಯಾಗಿ ಪೌರತ್ವ ಕಾಯಿದೆ ತಿದ್ದುಪಡಿಯ ವಿರುದ್ಧದ ಹೋರಾಟ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು. ದೇಶದ್ರೋಹದ ಆರೋಪ ಹೊತ್ತು ಜೈಲು ಪಾಲಾಗಿರುವ ವಿದ್ಯಾರ್ಥಿ ನಾಯಕಿಯರಾದ ದೇವಾಂಗನಾ ಕಾಲಿತಾ ಮತ್ತು ನತಾಶಾ ನರ್ವಾಲ್ ಸಂಗದಲ್ಲಿ ಹೋರಾಡಿದವರು. ಹಣಕಾಸಿನ ಬಿಕ್ಕಟ್ಟಿನ ಕಾರಣ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ ಕೈಗಾರಿಕೆ ಪ್ರದೇಶದ ಕಂಪನಿಯೊಂದನ್ನು ಸೇರಿದರು. ಅಲ್ಲಿ ಕಾರ್ಮಿಕರ ಶೋಷಣೆ ಮತ್ತು ಅವಮಾನ ಕಂಡು ಆಕೆಯ ಮನಸು ಕುದಿಯಿತು. ಕನಿಷ್ಠ ಕೂಲಿ ಕಾಯಿದೆಯ ಪ್ರಕಾರ ಕೂಲಿದರಗಳನ್ನು ನೀಡುವಂತೆ ಆಗ್ರಹಿಸಿದರು. ಮತ್ತು ಮಹಿಳೆಯರು ಪುರುಷರಿಗೆ ಸಮಾನವಾಗಿ ಕೆಲಸ ಮಾಡಿದಲ್ಲಿ ಅವರಿಗೂ ಸಮಾನ ವೇತನ ಸಲ್ಲಬೇಕೆಂಬ ಬೇಡಿಕೆ ಇಟ್ಟರು.

ಓವರ್ ಟೈಮ್‌ಗೆ ಪ್ರತ್ಯೇಕವಾಗಿ ಕೂಲಿ ಪಾವತಿಗಾಗಿ ಒತ್ತಾಯಿಸಿದರು. ಈ ದಿಸೆಯಲ್ಲಿ ಮಜದೂರ್ ಅಧಿಕಾರ್ ಸಂಘಟನೆಯನ್ನು ಸೇರಿದರು. ಸಮೀಪದ ಸಿಂಘು ಗಡಿಯಲ್ಲಿ ಜರುಗಿದ್ದ ರೈತ ಹೋರಾಟವನ್ನು ಬೆಂಬಲಿಸಿ 1,200 ಮಂದಿ ಕಾರ್ಮಿಕರನ್ನು ಸಂಘಟಿಸಿ ಮೆರವಣಿಗೆ ನಡೆಸಿದರು. ನಿತ್ಯ 300 ಮಂದಿ ಕಾರ್ಮಿಕರು ರೈತರ ಪರವಾಗಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿದ್ದರು ನೌದೀಪ್. ಕುಂಡ್ಲಿ ಕೈಗಾರಿಕೆಗಳು ಕಾರ್ಮಿಕರನ್ನು ಮನಬಂದಂತೆ ನಡೆಸಿಕೊಳ್ಳುತ್ತಿದ್ದು, ರೈತ ಆಂದೋಲನವನ್ನು ಬೆಂಬಲಿಸಿದ ಕಾರಣಕ್ಕಾಗಿ ಅನೇಕ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿವೆ. ಹೀಗೆ ಬಂಧನಕ್ಕೆ ಮುನ್ನವೇ ನೌದೀಪ್ ಕೂಡ ಉದ್ಯೋಗ ಕಳೆದುಕೊಳ್ಳಬೇಕಾಗಿತ್ತು.

PC : Sabrang India

ಉತ್ತರಪ್ರದೇಶ, ಬಿಹಾರ, ಪಂಜಾಬಿನಿಂದ ಉದ್ಯೋಗ ಅರಸಿ ವಲಸೆ ಬಂದಿರುವ ಎರಡು ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಕುಂಡ್ಲಿ ಕೈಗಾರಿಕೆ ಪ್ರದೇಶದಲ್ಲಿ ಕೂಲಿಗಾಗಿ ಸೇರಿದ್ದಾರೆ. ಇವರ ಪೈಕಿ ವಿಶೇಷವಾಗಿ ಭೂಹೀನ ರೈತರು, ಬಡರೈತರು, ದಲಿತರು, ಮುಸಲ್ಮಾನರದೇ ದೊಡ್ಡ ಸಂಖ್ಯೆ.

ಪುರುಷ ಪೊಲೀಸರು ರಾತ್ರಿಯ ವೇಳೆ ನೌದೀಪ್ ಅವರನ್ನು ಕುಂಡ್ಲಿ ಕೈಗಾರಿಕೆ ಪ್ರದೇಶದ ನಿರ್ಜನ ಪ್ರದೇಶಕ್ಕೆ ಎಳೆದೊಯ್ಯುತ್ತಾರೆ. ಥಳಿಸಿ ಚಿತ್ರಹಿಂಸೆ ನೀಡುತ್ತಾರೆ. ವ್ಯಾನಿನಲ್ಲಿ, ಪೊಲೀಸ್ ಠಾಣೆಯಲ್ಲಿ ಮತ್ತೆ ಮತ್ತೆ ಥಳಿಸುತ್ತಾರೆ, ಗುಪ್ತಾಂಗಗಳ ಮೇಲೆ ಲಾಠಿ ಬೂಟುಗಳಿಂದ ಬಾರಿಸುತ್ತಾರೆ. ರಕ್ತಸ್ರಾವವಾಗುತ್ತದೆ. ಇಬ್ಬಿಬ್ಬರು ಮೈಮೇಲೆ ಕುಳಿತು ಖಾಲಿ ಕಾಗದದ ಮೇಲೆ ಬಲವಂತವಾಗಿ ರುಜು ಹಾಕಿಸಿಕೊಳ್ಳುತ್ತಾರೆ. ಜಾತಿಯ ಹೆಸರಿಡಿದು ಅಶ್ಲೀಲ ಬೈಗುಳ ಬೈಯ್ಯುತ್ತಾರೆ. ತಲೆಗೂದಲು ಹಿಡಿದು ಎಳೆದಾಡಿದ್ದಾರೆ. ಕಪಾಳಕ್ಕೆ ಬಾರಿಸಿದ್ದಾರೆ. ಕೆಲ ದಿನಗಳ ಕಾಲ ನಡೆದಾಡುವುದೂ ನೌದೀಪ್‌ಗೆ ದುಸ್ತರವಾಗಿದೆ. ಚರಂಡಿ ಗಟಾರ ಸ್ವಚ್ಛ ಮಾಡುವ ಕುಲದಲ್ಲಿ ಹುಟ್ಟಿದ ನೀನು ರೈತ- ಕಾರ್ಮಿಕ ಪ್ರತಿಭಟನೆಗೆ ಯಾಕೆ ಬಂದಿದ್ದೀ ಎಂದು ಅವಹೇಳನ ಮಾಡಿದ್ದಾರೆ. ಮತ್ತು ಥಳಿಸಿದ ಮತ್ತು ನಿಂದಿಸಿದ ಆರೋಪಗಳನ್ನು ಎಂದಿನಂತೆ ತಳ್ಳಿ ಹಾಕಿದ್ದಾರೆ ಕೂಡ.

ಆಕೆಯೊಂದಿಗೆ ದಸ್ತಗಿರಿಯಾದ ಮತ್ತೊಬ್ಬ ಯುವ ಕಾರ್ಮಿಕ ಹೋರಾಟಗಾರ ಶಿವಕುಮಾರ್ ಅವರನ್ನೂ ಚಿತ್ರಹಿಂಸೆಗೆ ಗುರಿಪಡಿಸಲಾಗಿದೆ. ಎಡಗೈ ಮತ್ತು ಬಲಪಾದದಲ್ಲಿ ಮೂಳೆಗಳು ಮುರಿದಿವೆ. ನೌದೀಪ್‌ಗೆ ಎರಡು ಸಲ ಜಾಮೀನು ನಿರಾಕರಿಸಲಾಗುತ್ತದೆ. ಮಂದ ದೃಷ್ಟಿಯ ಆತ ಕನ್ನಡಕವನ್ನು ಧರಿಸಲು ಕೂಡ ಅವಕಾಶ ಕೊಡದೆ ಅಪಹರಿಸಿ ಹಲವು ದಿನಗಳ ಕಾಲ ಅನಧಿಕೃತ ಬಂಧನದಲ್ಲಿ ಇರಿಸಿ ಚಿತ್ರಹಿಂಸೆ ನೀಡಿದ್ದಾರೆ. ಇಲ್ಲಿಯವರೆಗೆ ಆತನ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.

ಕಾರ್ಮಿಕರು ಮತ್ತು ರೈತರು ದೈಹಿಕ ಶ್ರಮವನ್ನೇ ನಂಬಿ ಬದುಕುವ ಶ್ರಮಜೀವಿಗಳು. ಇಬ್ಬರೂ ಉತ್ಪಾದಕರು. ರೈತ ಹೊಲಗದ್ದೆಗಳಲ್ಲಿ ಉತ್ಪಾದಿಸಿದರೆ, ಕಾರ್ಮಿಕರು ಗಿರಣಿಗಳಲ್ಲಿ ಉತ್ಪಾದನೆಯಲ್ಲಿ ತೊಡಗಿಕೊಂಡವರು. ಸರ್ಕಾರಗಳು ಈ ಇಬ್ಬರ ಹಕ್ಕುಗಳನ್ನೂ ಬಿಕರಿಗಿಟ್ಟಿದೆ. ಸರ್ಕಾರಿ ಉದ್ಯಮಗಳು ಕಂಪನಿಗಳನ್ನು ಮಾರಾಟಕ್ಕಿಡಲಾಗಿದೆ. ಹೀಗಾಗಿ ಇಬ್ಬರೂ ಒಟ್ಟಾಗಿ ಹೋರಾಡಬೇಕಿದೆ. ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡದಿದ್ದರೆ, ರೈತರ ವಿರೋಧೀ ಕಾನೂನುಗಳನ್ನು ರದ್ದು ಮಾಡದೆ ಹೋದರೆ ನಾವು ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ನಿಲ್ಲಿಸುತ್ತೇವೆ. ಕಂಪನಿಗಳಿಗೆ ಬೀಗ ಹಾಕಿಸುತ್ತೇವೆ ಎಂಬ ನೌದೀಪ್ ಹೇಳಿಕೆ ಕಾರ್ಖಾನೆಗಳ ಮಾಲೀಕರನ್ನು ಕೆರಳಿಸಿತ್ತು.

ದಲಿತ ಜಾತಿ ಮತ್ತು ಬಡವರ್ಗಕ್ಕೆ ಸೇರಿದ ಕಾರಣವೇ ಮುಖ್ಯವಾಹಿನಿ ಮಾಧ್ಯಮಗಳು ನೌದೀಪ್ ಅವರ ಬಂಧನ ಮತ್ತು ಚಿತ್ರಹಿಂಸೆಯನ್ನು ನಿರ್ಲಕ್ಷಿಸಿದವು. ಭಾರತದಲ್ಲಿ ದಲಿತರು ಆದಿವಾಸಿಗಳು ಹಾಗೂ ಮುಸಲ್ಮಾನರ ಪ್ರಮಾಣ ಶೇ.39. ದೇಶದ ಜೈಲು ಪಾಲಾಗಿರುವ ಬಂದಿಗಳು ಮತ್ತು ವಿಚಾರಣಾಧೀನ ಕೈದಿಗಳ ಪೈಕಿ ಈ ಸಮುದಾಯಗಳ ಪ್ರಮಾಣ ಶೇ.51.

ಶೋಷಣೆ, ಬಡತನ, ಪೂರ್ವಗ್ರಹಗಳು, ಅನಕ್ಷರತೆ, ತಾರತಮ್ಯಕ್ಕೆ ಬಲಿಯಾಗುತ್ತಿರುವ, ದನಿ ಸತ್ತ ಜನಸಮುದಾಯಗಳಿವು.

ಇತ್ತೀಚೆಗೆ ಬಿಡುಗಡೆಯಾದ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋದ ಸರ್ಕಾರಿ ಅಂಕಿಅಂಶ ಕಟುಸತ್ಯದ ಕತೆಯನ್ನು ಕಿರುಚಿ ಹೇಳುತ್ತಿದೆ. ಉಳ್ಳವರ ಕಿವಿಗಳ ಮೇಲೆ ಅದು ಬೀಳುತ್ತಿಲ್ಲ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....