Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...