Homeಮುಖಪುಟಹೋರಾಟಗಾರ್ತಿಯರ ಮೇಲೆ ಹಲ್ಲೆ ಮತ್ತು ಬಂಧನ ಕುಸಿಯುತ್ತಿರುವ ಪ್ರಜಾತಂತ್ರಕ್ಕೆ ಸಾಕ್ಷಿ

ಹೋರಾಟಗಾರ್ತಿಯರ ಮೇಲೆ ಹಲ್ಲೆ ಮತ್ತು ಬಂಧನ ಕುಸಿಯುತ್ತಿರುವ ಪ್ರಜಾತಂತ್ರಕ್ಕೆ ಸಾಕ್ಷಿ

- Advertisement -
- Advertisement -

ಭಾರತದ ಮಾನವ ಹಕ್ಕುಗಳ ಆತಂಕಕಾರಿ ಪರಿಸ್ಥಿತಿ ಈಗಾಗಲೇ ಜಗತ್ತಿನ ಮುಂದೆ ಬಯಲಾಗಿರುವಂಥದ್ದು. ಒಂದೆಡೆ ತೀವ್ರ ಬಲಪಂಥೀಯ ದುಷ್ಕರ್ಮಿಗಳಿಂದ ದಲಿತರು, ಅಲ್ಪಸಂಖ್ಯಾತರು ಮತ್ತು ಇನ್ನಿತರ ತಳಸಮುದಾಯಗಳ ಜನರು ಹಲ್ಲೆಗೀಡಾಗುತ್ತಿದ್ದರೆ ಮತ್ತೊಂದೆಡೆ ಪ್ರಭುತ್ವ ಮತ್ತು ನ್ಯಾಯಾಂಗಗಳೂ ಕೂಡಾ ಮಾನವ ಹಕ್ಕುಗಳ ಹರಣಕ್ಕೆ ಕಾರಣವಾಗುತ್ತಿರುವ ದುರಂತಮಯ ಸನ್ನಿವೇಶ ನಮ್ಮೆದುರಿಗಿದೆ. ಭೀಮಾ ಕೋರೆಗಾಂವ್ ಕಾರ್ಯಕ್ರಮ ನಡೆಸಿದ ಕಾರಣಕ್ಕೆ ಹಲವು ನ್ಯಾಯವಾದಿಗಳೂ ಸೇರಿದಂತೆ ಹಿರಿಯ ಸಾಮಾಜಿಕ ಕಾರ್ಯಕರ್ತರನ್ನು ಒಂದೆಡೆ ಬಂಧಿಸಿ ವರ್ಷಗಟ್ಟಲೆ ಜೈಲಿನಲ್ಲಿರಿಸಲಾಗಿದ್ದರೆ, ರಾಜದ್ರೋಹದ ಪ್ರಕರಣದಡಿ ಅನಗತ್ಯವಾದ ಆರೋಪಗಳನ್ನು ಹೊರಿಸಿ ಬಂಧಿಸಲಾಗಿರುವ ಸಾಹಿತಿಗಳು, ಬುದ್ಧಿಜೀವಿಗಳು, ಹೋರಾಟಗಾರರ ಪಟ್ಟಿಯಲ್ಲಿ ಅತ್ಯಂತ ಹಿರಿಯ ವಯಸ್ಸಿನ ಕವಿ, ಹೋರಾಟಗಾರ ವರವರರಾವ್ ಅವರಿಂದ ಹಿಡಿದು (ಈಚೆಗಷ್ಟೇ ಅನಾರೋಗ್ಯದ ಕಾರಣಕ್ಕೆ ಇವರಿಗೆ 6 ತಿಂಗಳ ಜಾಮೀನನ್ನು ನೀಡಲಾಗಿದೆ) ಭಾರತದ ಅತ್ಯಂತ ಪ್ರಖರ ಚಿಂತಕ, ದಲಿತ ಲೇಖಕರಲ್ಲೊಬ್ಬರಾದ ಆನಂದ್ ತೇಲ್ತುಂಬ್ಡೆಯವರ ತನಕ ಎಲ್ಲರನ್ನೂ ಇಂದು ಸರಳುಗಳ ಹಿಂದಿರಿಸಲಾಗಿರುವುದು ಈ ದೇಶದ ಪ್ರಜಾತಂತ್ರದ ದುಸ್ಥಿತಿಗೆ ಸಾಕ್ಷಿಯಾಗಿದೆ.

ಮೊದಲಿಗೂ ಮತ್ತು ಈಗಲೂ ಈ ಪಟ್ಟಿಯಲ್ಲಿ ಹಲವು ಮಹಿಳೆಯರ ಹೆಸರುಗಳೂ ಸೇರಿವೆ. ಭೀಮಾ ಕೋರೆಗಾಂವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾದ ಶೋಮಾ ಸೆನ್, ನ್ಯಾಯವಾದಿ ಸುಧಾ ಭಾರದ್ವಾಜ್ ಮುಂತಾದವರ ಬಂಧನವಾಗಿ ವರ್ಷಗಳೇ ಕಳೆದವು. ನಾಗರಿಕತ್ವ ತಿದ್ದುಪಡಿ ಕಾಯ್ದೆಯ ಕರಾಳತೆಯ ವಿರುದ್ಧ ದನಿಯೆತ್ತಿದವರು ಕೇಂದ್ರ ಸರ್ಕಾರ ಮತ್ತು ಗೃಹ ಇಲಾಖೆಗಳ ತದನಂತರದ ಬಲಿಪಶುಗಳಾದರೆ, ಇದೀಗ ರೈತ ಹೋರಾಟಗಾರರು ಮತ್ತವರ ಬೆಂಬಲಿಗರ ಸರದಿ.

ಸುಪ್ರಿಯಾ ಶರ್ಮ

ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆಯ ವಾರ್ಷಿಕ ವರದಿಯ ಪ್ರಕಾರ, 2020-21ರ ನಡುವಿನ ಮಾನವ ಹಕ್ಕುಗಳ ಉಲ್ಲಂಘನೆಯು 2020ರ ವರ್ಷದ ಆರಂಭದಿಂದಲೇ ಶುರುವಾಯಿತು. ಸಿಎಎ ವಿರೋಧಿ ಹೋರಾಟವನ್ನು ಅಮಾನ್ಯಗೊಳಿಸಲು ದೆಹಲಿಯಲ್ಲಿ ಸಂಘಪರಿವಾರ ಪ್ರೇರಿತವಾದ ಗಲಭೆಗಳಲ್ಲಿ ಸುಮಾರು 53 ಜನರು ಸತ್ತು ಅಪಾರ ಆಸ್ತಿಪಾಸ್ತಿ ನಷ್ಟವಾಯಿತು. ಅದಕ್ಕಿಂತ ಗಂಭೀರವಾದ ಸಂಗತಿಯೆಂದರೆ ಆ ಗಲಭೆಯನ್ನು ಸೃಷ್ಟಿಸಿದ ಆರೋಪದಲ್ಲಿ ಹಲವು ತಿಂಗಳುಗಳ ಕಾಲ ಬಂಧನಗಳು ಮತ್ತು ಬಂಧನದ ಭಯಾತಂಕಗಳನ್ನು ಹುಟ್ಟಿಸುವ ಕೆಲಸಗಳು ರಾಜಧಾನಿಯಲ್ಲಿ ಮತ್ತು ಇತರ ಹಲವು ನಗರಗಳಲ್ಲಿ ನಡೆದವು. ಸುಪ್ರಿಯಾ ಶರ್ಮ, ಸಂಗೀತಾ ಬರೂಹಾ, ರಾಣಾ ಅಯೂಬ್ ಮುಂತಾದ ಪತ್ರಕರ್ತೆಯರನ್ನೂ ಒಳಗೊಂಡು ಹಲವರನ್ನು ಆರೋಪಿಸಲಾಯಿತು.

ಕೋವಿಡ್‌ನ ಸಂದರ್ಭದಲ್ಲೂ ಕೂಡಾ ಹಲವು ಬಗೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದವೆಂದು ಹ್ಯೂಮನ್ ರೈಟ್ಸ್ ವಾಚ್‌ನ ದಕ್ಷಿಣ ಏಷ್ಯಾದ ನಿರ್ದೇಶಕಿ ಮೀನಾಕ್ಷಿ ಗಂಗೂಲಿ ಉಲ್ಲೇಖಿಸುತ್ತಾರೆ. ಹಾಗೆಯೇ ಜಮ್ಮು ಕಾಶ್ಮೀರದ ವಿಶೇಷಾಧಿಕಾರ ಕಾಯ್ದೆಯನ್ನು ತೆಗೆದುಹಾಕಲಾದ ಸಂದರ್ಭದಲ್ಲೂ ಸಾರ್ವಜನಿಕ ಭದ್ರತಾ ಕಾಯ್ದೆಯ ಅಡಿಯಲ್ಲಿ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ನಡೆದ ಕಾನೂನು ಉಲ್ಲಂಘನೆಗಳ ದೊಡ್ಡಪಟ್ಟಿಯನ್ನೇ ನೀಡುತ್ತಾರೆ. ರಾಜಕೀಯ ಪ್ರೇರಿತ ಹಲ್ಲೆಗಳು, ಗೃಹಬಂಧನಗಳಿಂದ ಹಿಡಿದು ಇಂಟರ್ನೆಟ್ ಕಡಿತದ ತನಕ ಇದು ವಿಸ್ತರಿಸುತ್ತದೆ.

ಸಂಗೀತಾ ಬರೂಹಾ

ಈಚೆಗಷ್ಟೇ ಬಂಧನಕ್ಕೊಳಗಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಂಗಳೂರಿನ 21 ವರ್ಷದ ಪ್ರಕೃತಿ ಪ್ರೇಮಿ, ಸಾಮಾಜಿಕ ಕಳಕಳಿಯ ಪರಿಸರ ಕಾರ್ಯಕರ್ತೆ, ವಿದ್ಯಾರ್ಥಿನಿ ದಿಶಾ ರವಿಯ ಪ್ರಕರಣ ಈ ಎಲ್ಲದಕ್ಕೆ ಒಂದು ಜ್ವಲಂತ ನಿದರ್ಶನವಾಗಿದ್ದರೆ ಹರ್ಯಾಣದ ದಲಿತ ಸಾಮಾಜಿಕ ಕಾರ್ಯಕರ್ತೆ ನೌದೀಪ್ ಕೌರ್ ಪ್ರಕರಣ ಈ ಬಂಧನದ ಸರಣಿಗಳು ರಾಜಕೀಯ ಪ್ರೇರಿತ ಎಂಬುದನ್ನು ಸಾಬೀತುಗೊಳಿಸುತ್ತಿವೆ. ದಿಶಾ ರವಿ ಪ್ರಕರಣದಲ್ಲಿ ಆಕೆಯ ಜಾಮೀನು ಮತ್ತು ಸುರಕ್ಷತೆಯ ಮನವಿಗಳನ್ನೂ ಪುರಸ್ಕರಿಸದೆ, ಈ ಹಿಂದೆಂದೂ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಿಲ್ಲದ ಸರಳವಾದ ವಿದ್ಯಾರ್ಥಿನಿಯೊಬ್ಬಳನ್ನು ನ್ಯಾಯಾಂಗ ಬಂಧನಕ್ಕೂ ನೀಡದೆ ಪೊಲೀಸ್ ಕಸ್ಟಡಿಗೆ ನೀಡಿದ್ದು ಅತ್ಯಂತ ಆಘಾತಕಾರಿಯಾಗಿತ್ತು. ಆಕೆಯ ಮೇಲೆ ಹೊರಿಸಲಾದ ಆರೋಪಗಳನ್ನು ನೋಡಿದರೆ, ಯೋಗ, ಚಹಾ ಮತ್ತು ಸರ್ಕಾರದ ರೈತವಿರೋಧಿ ನೀತಿಗಳನ್ನು ವಿಡಂಬನಾತ್ಮಕವಾಗಿ ಬಳಸಿ ಜಾಲತಾಣಗಳಲ್ಲಿ ಆಕೆ ಮಾಡಿದ ಕಮೆಂಟ್‌ಗಳೇ ದೇಶದ ಭದ್ರತೆಗೆ ಈಗಿರುವ ಅತಿದೊಡ್ಡ ಅಪಾಯವೆಂಬಂತೆ ಸರ್ಕಾರ ಬಿಂಬಿಸಲು ನೋಡುತ್ತಿದೆ.

ನೌದೀಪ್ ಕೌರ್

ಇಡೀ ವಿಶ್ವಕ್ಕೆ ಗೊತ್ತಿರುವ ಗ್ರೇಟ್ ಥನ್‌ಬರ್ಗ್ ಅವರ ಟೂಲ್‌ಕಿಟ್ ಟ್ವೀಟನ್ನು ಸರ್ಕಾರದ ವಿರುದ್ಧದ ಷಡ್ಯಂತ್ರ ಎಂಬ ಮಟ್ಟಕ್ಕೆ ಮೋದಿ ಸರ್ಕಾರ ತೆಗೆದುಕೊಂಡು ಹೋಗುತ್ತದೆಂದರೆ ಯಾವ ಮಟ್ಟದ ಫ್ಯಾಸಿಸ್ಟ್ ಪ್ರವೃತ್ತಿ ಆಡಳಿತದಲ್ಲಿ ಬೆಳೆದಿದೆಯೆಂಬುದು ತಿಳಿಯುತ್ತದೆ. ಹಾಗೆಯೇ ನೌದೀಪ್ ಎಂಬ ಹರ್ಯಾಣದ ಕುಂಡಲಿಯ ಯುವತಿಯ ಬಂಧನದ ಪ್ರಕರಣವೂ ಕೂಡಾ. ಅಲ್ಲಿನ ದಲಿತ ಮತ್ತು ಕಾರ್ಮಿಕರ ಸಮುದಾಯವನ್ನು ಸಂಘಟಿಸುತ್ತಾ, ಅದರೊಂದಿಗೆ ರೈತ ಆಂದೋಲನವನ್ನು ಬೆಸೆಯಲೆಂದು ಕೆಲಸ ಮಾಡುತ್ತಿದ್ದ ಸಂಘಟನೆಯ ನೌದೀಪ್ ಕೌರ್‌ರನ್ನು ಜನವರಿ ತಿಂಗಳ 12ರಂದು ಬಿಜೆಪಿ ಆಡಳಿತದಲ್ಲಿರುವ ಹರ್ಯಾಣದ ಪೊಲೀಸರು ಬಂಧಿಸಿದ್ದರು. ಆಕೆಯ ಮೇಲೆ ರಾಜದ್ರೋಹ, ದೇಶದ ಭದ್ರತೆಗೆ ಧಕ್ಕೆಯಂತಹವನ್ನೂ ಒಳಗೊಂಡು ಹೊರಿಸಲಾಗಿರುವ ಹಲವು ಆರೋಪಗಳ ಗಹನತೆಗೂ ಆಕೆಯ ಸಾಮಾಜಿಕ ಕೆಲಸಗಳ ಹಿನ್ನೆಲೆಗೂ ಅರ್ಥಾತ್ ಸಂಬಂಧವಿಲ್ಲ. ಇದನ್ನೇ ಆಕೆಯ ತಾಯಿ ಮತ್ತು ಮಗಳ ಹೋರಾಟಕ್ಕೆ ಸದಾ ಬೆಂಗಾವಲಾಗಿ ನಿಂತಿರುವ ಸಬರ್‌ಜೀತ್ ಕೌರ್ ಅವರೂ ಕೂಡಾ ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇಷ್ಟಾಗಿಯೂ ಆಕೆಗೆ ಜಾಮೀನು ದೊರೆಯಲು ಹೆಚ್ಚೂ ಕಡಿಮೆ ಎರಡು ತಿಂಗಳ ಸಮಯ ಬೇಕಾಯಿತು. ರೈತ ಆಂದೋಲನದ ವಾಸ್ತವಗಳನ್ನು ಬಿಚ್ಚಿಟ್ಟ ಪತ್ರಕರ್ತರ ಬಂಧನಗಳನ್ನೂ ನಾವು ನೋಡುತ್ತಿದ್ದೇವೆ.

ರಾಣಾ ಅಯೂಬ್

ಇದೇ ಸಂದರ್ಭದಲ್ಲಿ, ಇವೆಲ್ಲ ಬಂಧನಗಳ ಕಥೆಗಳಾದರೆ, ಬಂಧನಕ್ಕೊಳಗಾಗದೆ ರಾಜಾರೋಶವಾಗಿ ತಿರುಗಾಡುತ್ತಿರುವವರ ಇನ್ನೊಂದು ಮಗ್ಗುಲಿನ ಹಲವು ಕಥೆಗಳಿವೆ. ನಿಜಕ್ಕೂ ಕಾನೂನು ಉಲ್ಲಂಘನೆಯ ಕೆಲಸ ಮಾಡಿದ, ರೈತ ಆಂದೊಲನದಲ್ಲಿರಲಿ, ಸಿಎಎ ಹೋರಾಟದ ಸಂದರ್ಭದ ಗಲಭೆಯಲ್ಲಿರಲಿ ವಿಡಿಯೋ ಸಾಕ್ಷಾಧಾರಗಳ ಸಮೇತ ಕಂಡಿರುವ ಸಂಘಪರಿವಾರದ ಗೂಂಡಾಗಳು, ಜನಪ್ರತಿನಿಧಿಗಳು, ಅವರ ಬೆಂಬಲಿಗರ ಮೇಲೆ ಬಂಧನವಿರಲಿ ಒಂದು ಪ್ರಕರಣ ಕೂಡಾ ದಾಖಲಾಗಿಲ್ಲ ಎಂಬುದು ಆತಂಕದ ವಿಚಾರವಲ್ಲವೇ?
ಒಟ್ಟಿನಲ್ಲಿ ಬಂಧನಗಳ ವರಸೆಯಲ್ಲಿ ಸಾಮಾಜಿಕ ಕಾರ್ಯಕರ್ತೆರು, ಪತ್ರಕರ್ತೆಯರನ್ನೂ ಮೊದಲುಗೊಂಡು ಅನೇಕ ಮಹಿಳೆಯರನ್ನೂ ಬಲಿಪಶುವಾಗಿಸಲು ನೋಡುತ್ತಿರುವ ಸರ್ಕಾರದ ಇಂತಹ ಪ್ರಯತ್ನಗಳಿಗೆ ಈ ಎಲ್ಲ ದಿಟ್ಟ ಮಹಿಳೆಯರು ಗಟ್ಟಿಯಾಗಿ ಎದುರು ನಿಂತಿರುವುದು ಮತ್ತು ದಿಶಾ ರವಿ ಪ್ರಕರಣದಲ್ಲಿ ಮತ್ತು ಪ್ರಿಯಾ ರಮಣಿಯವರ ಪ್ರಕರಣಗಳಲ್ಲಿ ನ್ಯಾಯಾಧೀಶರು ವ್ಯಕ್ತಪಡಿಸಿರುವ ಸ್ಪಷ್ಟವಾದ ಅನಿಸಿಕೆಗಳ ಹಾಗೆ ಅವರನ್ನು ಬೆಂಬಲಿಸುವ ದನಿಗಳೂ ಸಹಾ ಕೇಳಿಬರುತ್ತಿರುವುದು ಸಮಾಧಾನದ ಸಂಗತಿ.

ಮಲ್ಲಿಗೆ

ಮಲ್ಲಿಗೆ
ಸಾಮಾಜಿಕ ಕಾರ್ಯಕರ್ತೆ, ಕರ್ನಾಟಕ ಜನಶಕ್ತಿಯ ಸಕ್ರಿಯ ಸದಸ್ಯರು


ಇದನ್ನೂ ಓದಿ: ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...