Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದ ತನಿಖೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಸೇರಿದಂತೆ 33 ಜನರನ್ನು ಹೆಸರಿದ್ದು, 200 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ಸುಮಾರು 12,000 ಕ್ಕೂ ಹೆಚ್ಚು ಪುಟಗಳಿರುವ ಈ ಚಾರ್ಜ್‌ಶೀಟ್ ಡಿಜಿಟಲ್ ಸ್ವರೂಪವು ಸುಮಾರು 50,000 ಪುಟಗಳನ್ನು ಹೊಂದಿದೆ.

ಕಳೆದ ವರ್ಷದ ಜೂನ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಇದರಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಬ್ಬರನ್ನೂ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ನ ವಿವಿಧ ವಿಭಾಗಗಳ ಅಡಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು. ಚಾರ್ಜ್‌ಶೀಟ್‌ನಲ್ಲಿರುವ 33 ಆರೋಪಿಗಳಲ್ಲಿ ಎಂಟು ಮಂದಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ಸಿಬ್ಬಂದಿಗಳ ನಡುವೆ ನಡೆಯಲಾಗಿದೆ ಎಂದು ಹೇಳಲಾದ ಖಾಸಗಿ ವಾಟ್ಸಾಪ್ ಚಾಟ್‌ಗಳನ್ನು ಜಾರಿ ನಿರ್ದೇಶನಾಲಯ ಹಂಚಿಕೊಂಡ ನಂತರ ಆಗಸ್ಟ್‌ನಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇವರೆಲ್ಲರೂ ನಟನಿಗೆ ಮಾದಕ ವಸ್ತುಗಳನ್ನು ಸಂಗ್ರಹಿಸಿ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದೀರ್ಘ ಆರು ತಿಂಗಳ ತನಿಖೆಯಲ್ಲಿ, ಎನ್‌ಸಿಬಿ ಮಹಾರಾಷ್ಟ್ರದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಮುಂಬೈನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಬಾಲಿವುಡ್‌ನೊಳಗೆ ಇದ್ದ ಹಲವು ಮಾದಕ ವಸ್ತು ಜಾಲವನ್ನು ಭೇದಿಸಿದ್ದಾಗಿ ಸಂಸ್ಥೆ ಹೇಳಿಕೊಂಡಿದೆ.

ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಮಾಧ್ಯಮಗಳ

ಈ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ರನ್ನು ಜನವರಿಯಲ್ಲಿ ಬಂಧಿಸಲಾಗಿತ್ತು. ಫೆಬ್ರವರಿಯಲ್ಲಿ, ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ರಿಷಿಕೇಶ್ ಪವಾರ್ ಅವರನ್ನು ಎನ್‌ಸಿಬಿ ಬಂಧಿಸಿತ್ತು. ಈ ಹಿಂದೆ ಧರ್ಮ ಪ್ರೊಡಕ್ಷನ್‌ನ ಡಿಜಿಟಲ್ ಆರ್ಮ್‌ನೊಂದಿಗೆ ಸಂಬಂಧ ಹೊಂದಿದ್ದ ಕ್ಷಿತಿಜ್ ರವಿ ಪ್ರಸಾದ್ ಕೂಡ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ.

ಡಿಜಿಟಲ್ ಸಾಕ್ಷ್ಯಗಳು, ಕರೆ ದಾಖಲೆಗಳು, ವಾಟ್ಸಾಪ್ ಚಾಟ್‌ಗಳು, ಸ್ಥಳಗಳ ಟ್ಯಾಗ್‌ಗಳು, ವಿಡಿಯೋ ಮತ್ತು ಧ್ವನಿ ರೆಕಾರ್ಡಿಂಗ್‌ಗಳು ಮತ್ತು ಇತರ ಹಲವಾರು ದಾಖಲೆಗಳನ್ನು ಒಳಗೊಂಡ ಸಾಕ್ಷ್ಯಗಳನ್ನು ದೋಷಾರೋಪಣೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಸದ್ಯ ಏಜೆನ್ಸಿಯು ಈ ಎಲ್ಲಾ ಹೇಳಿಕೆಗಳು ಮತ್ತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಅದನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗುತ್ತದೆ.


ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...