Homeಮುಖಪುಟರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನಿರ್ಲಕ್ಷಿಸಿದ ಪೊಲೀಸರು: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನಿರ್ಲಕ್ಷಿಸಿದ ಪೊಲೀಸರು: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

- Advertisement -
- Advertisement -

ರಾಜಸ್ಥಾನ ಹೈಕೋರ್ಟ್‌ನಿಂದ ತಾನು ಪ್ರಿತಿಸಿದ ದಲಿತ ಯುವಕನೊಂದಿಗೆ ವಾಸಿಸಲು ರಕ್ಷಣೆ ಪಡೆದ 18 ವರ್ಷದ ಒಬಿಸಿ ಸಮುದಾಯದ ಯುವತಿಯನ್ನು ಆಕೆಯ ತಂದೆ ಕೊಲೆ ಮಾಡಿದ್ದಾರೆ ಎಂದು ರಾಜ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನ್ನ ಮಗಳು ಪಿಂಕಿಯನ್ನು ದೌಸಾ ಪಟ್ಟಣದ ತನ್ನ ಮನೆಯಲ್ಲಿ ಕೊಂದಿದ್ದೇನೆ ಎಂದು ತಂದೆ ಶಂಕರ್ ಲಾಲ್ ಸೈನಿ ಬುಧವಾರ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ತದನಂತರ ಆತನನ್ನು ಬಂಧಿಸಿದ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದಾರೆ, ಇದು ಕತ್ತು ಹಿಸುಕಿದ ಗುರುತುಗಳನ್ನು ಹೊಂದಿದೆ ಎಂದು ಎಸ್ಪಿ ಹೇಳಿದರು.

ಫೆಬ್ರವರಿ 16 ರಂದು ಒಬಿಸಿ ಸಮುದಾಯದ ಪಿಂಕಿ ಸೈನಿಯು ದಲಿತ ಸಮುದಾಯದ ರೋಶನ್ ಮಹಾವರ್ (24) ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದರು. ಇದಕ್ಕೆ ಪಿಂಕಿಯ ಕುಟುಂಬ ಒಪ್ಪಿರಲಿಲ್ಲ. ಹಾಗಾಗಿ ಫೆಬ್ರವರಿ 21 ರಂದು ಪಿಂಕಿ ಮಹಾವರ್ ಅವರೊಂದಿಗೆ ಊರು ತೊರೆದರು. ಫೆಬ್ರವರಿ 26 ರಂದು, ದಂಪತಿಗಳು ರಾಜಸ್ಥಾನ ಹೈಕೋರ್ಟ್ ಮುಂದೆ ಹಾಜರಾಗಿ ನಮ್ಮದು ಪರಸ್ಪರ ಒಪ್ಪಿತ ವಿವಾಹವಾಗಿದ್ದು ರಕ್ಷಣೆ ನೀಡಬೇಕೆಂದು ಕೋರಿದ್ದರು.

ನ್ಯಾಯಾಲಯವು ಅವರಿಗೆ ಸ್ಥಳೀಯ ಪೊಲೀಸರಿಂದ ರಕ್ಷಣೆ ನೀಡುವಂತೆ ಆದೇಶಿಸಿತು ಮತ್ತು “ಅವರು ಎಲ್ಲಿಗೆ ಹೋಗಬೇಕೆಂದು ಬಯಸುತ್ತಾರೆಯೋ ಅಲ್ಲಿಗೆ ಕರೆದೊಯ್ಯಬೇಕು” ಎಂದು ಕೋರ್ಟ್ ಸೂಚಿಸಿತ್ತು ಎಸ್ಪಿ ಕುಮಾರ್ ತಿಳಿಸಿದ್ದಾರೆ.

ಪಿಂಕಿ ಮತ್ತು ರೋಶನ್ ಜೈಪುರಕ್ಕೆ ಹೋಗಲು ಬಯಸಿದ್ದರಿಂದ ಪೊಲೀಸರು ಅವರನ್ನು ಜೈಪುರಕ್ಕೆ ಕರೆದೊಯ್ದರು. “ಮಾರ್ಚ್ 1 ರಂದು ದಂಪತಿಗಳು ದೌಸಾದಲ್ಲಿರುವ ರೋಶನ್ ಮನೆಗೆ ಬಂದರು. ಆದರೆ ಯುವತಿಯ ಕುಟುಂಬ ಸದಸ್ಯರು ಅದೇ ದಿನ ಅವಳನ್ನು ಅಲ್ಲಿಂದ ಬಲವಂತವಾಗಿ ಕರೆದೊಯ್ದರು” ಎಂದು ಎಸ್ಪಿ ಹೇಳಿದ್ದಾರೆ.

“ನಾವು ಪಿಂಕಿಗಾಗಿ ಹುಡುಕುತ್ತಿದ್ದೆವು. ನಿನ್ನೆ (ಬುಧವಾರ) ರಾತ್ರಿ ಆಕೆಯ ತಂದೆ ಪೊಲೀಸ್ ಠಾಣೆಗೆ ತಲುಪಿ ತನ್ನ ಮಗಳನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ನಾವು ಅವರ ಮನೆಗೆ ಹೋದಾಗ, ಪಿಂಕಿಯವರ ಮೃತದೇಹವನ್ನು ಕಂಡೆವು. ಆರಂಭಿಕ ಪರಿಶೀಲನೆಯ ಪ್ರಕಾರ, ಇದು ಕತ್ತು ಹಿಸುಕಿದ ಕೊಲೆ ಪ್ರಕರಣವೆಂದು ತೋರುತ್ತದೆ ” ಎಂದು ಎಸ್‌ಪಿ ಕುಮಾರ್ ಹೇಳಿದರು.

ಆರೋಪಿ ತಂದೆ ಶಂಕರ್ ಲಾಲ್ ಸೈನಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಅಪರಾಧದಲ್ಲಿ ಇತರ ವ್ಯಕ್ತಿಗಳು ಭಾಗಿಯಾಗಿರುವ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದಂಪತಿಗಳನ್ನು ರಕ್ಷಿಸಲು ಹೈಕೋರ್ಟ್‌ ನೀಡಿದ ಆದೇಶಕ್ಕೆ ಪೊಲೀಸರು ಬದ್ಧರಾಗಿಲ್ಲ. ಪೊಲೀಸರು ತೋರಿದ “ಸಂಪೂರ್ಣ ನಿರ್ಲಕ್ಷ್ಯ”ದಿಂದ ಈ ಹತ್ಯೆ ಸಂಭವಿಸಿದೆ ಎಂದು ಪಿಂಕಿ ಮತ್ತು ರೋಶನ್ ಪರ ವಕೀಲರು ಆರೋಪಿಸಿದ್ದಾರೆ.

ಫೆಬ್ರವರಿ 26 ರ ತನ್ನ ಆದೇಶದಲ್ಲಿ, ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಸತೀಶ್ ಕುಮಾರ್ ಶರ್ಮಾ ಹೀಗೆ ಹೇಳಿದ್ದರು: “ಅರ್ಜಿದಾರರು ಇಬ್ಬರೂ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದಾರೆ ಮತ್ತು ಅವರು ಪರಸ್ಪರ ಒಟ್ಟಿಗೆ ಬದುಕಲು ಬಯಸುತ್ತಾರೆ. ಆದ್ದರಿಂದ, ಪ್ರಕರಣದ ಅರ್ಹತೆಗಳ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದೆ, ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳದಂತೆ ಮತ್ತು ಅರ್ಜಿದಾರರಿಗೆ ಯಾವುದೇ ರೀತಿಯ ಹಾನಿ ಮಾಡದಂತೆ ಸಲಹೆ ನೀಡಲು ನಿರ್ದೇಶಿಸಲಾಗಿದೆ…’

“ಇದಲ್ಲದೆ, ಅರ್ಜಿದಾರರಿಗೆ ರಕ್ಷಣೆ ನೀಡುವಂತೆ ಸ್ಥಳೀಯ ಪೊಲೀಸ್ ಪ್ರಾಧಿಕಾರಕ್ಕೆ ತಿಳಿಸಲು ಮತ್ತು ಅವರ ಇಚ್ಛೆಯಂತೆ ಅವರನ್ನು ಸುರಕ್ಷಿತ ಸ್ಥಳದಲ್ಲಿ ಕರೆದೊಯ್ಯಲು ಸಾರ್ವಜನಿಕ ಅಭಿಯೋಜಕರಿಗೆ ನಿರ್ದೇಶಿಸಲಾಗಿದೆ” ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದು, ಮಾರ್ಚ್ 9 ರಂದು ನ್ಯಾಯಾಲಯವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು.

ಮಾರ್ಚ್ 1 ರಂದು ಪಿಂಕಿಯನ್ನು ಬಲವಂತವಾಗಿ ಕರೆದೊಯ್ದ ಆರೋಪದಲ್ಲಿ, ರೋಶನ್ ಕುಟುಂಬವು ಪಿಂಕಿಯ ತಂದೆ, ಚಿಕ್ಕಪ್ಪ ಮತ್ತು ಇತರ ಸಂಬಂಧಿಕರು ಸೇರಿ 11 ಮಂದಿ ಮತ್ತು 15-20 ಇತರ ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಅಪಹರಣ, ಕ್ರಿಮಿನಲ್ ಬೆದರಿಕೆ ಮತ್ತು ಕಳ್ಳತನ, ಮತ್ತು ಎಸ್‌ಸಿ /ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿಭಾಗಗಳು ಸೇರಿದಂತೆ ಐಪಿಸಿ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ನೋಂದಾಯಿಸಲಾಗಿದೆ. ಯುವತಿಯ ತಂದೆ ಶಂಕರ್ ಲಾಲ್ ಸೈನಿ ಮತ್ತು ಇತರ ಆರೋಪಿಗಳು ಜಾತಿವಾದಿ ಬೈಗುಳಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ರೋಶನ್ ಅವರ ಕುಟುಂಬ ಆರೋಪಿಸಿದೆ. ಅವರ ಮನೆಗೆ ಹಾನಿ ಮಾಡಿ, 1.2 ಲಕ್ಷ ರೂ. ದೋಚಿಕೊಂಡು ಮತ್ತು ಪಿಂಕಿಯನ್ನು ಬಲವಂತವಾಗಿ ಅಪಹರಿಸಿದರು ಎಂದು ರೋಶನ್ ಕುಟುಂಬ ದೂರು ನೀಡಿದೆ.

“ದಂಪತಿಗಳಿಗೆ ರಕ್ಷಣೆ ನೀಡುವ ಹೈಕೋರ್ಟ್ ಆದೇಶದ ಹೊರತಾಗಿಯೂ, ಪಿಂಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ಸಂಪೂರ್ಣ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ದಂಪತಿಗಳು ತಮ್ಮ ಸುರಕ್ಷತೆಗಾಗಿ ಹೆದರುತ್ತಿದ್ದರು ಮತ್ತು ತಮ್ಮ ಸ್ವಂತ ಇಚ್ಛಾಶಕ್ತಿಯಿಂದ ಪರಸ್ಪರ ಒಟ್ಟಿಗೆ ಬದುಕಲು ಬಯಸಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು ”ಎಂದು ಪಿಂಕಿ ಮತ್ತು ರೋಶನ್ ಅವರನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸಿದ ವಕೀಲ ನವಾಲ್ ಸಿಂಗ್ ಸಿಕಾರ್ವಾರ್ ಹೇಳಿದ್ದಾರೆ.

ಪಿಂಕಿಯ ಹತ್ಯೆಯ ನಂತರ, ಈಗ ತಾನು ನನ್ನ ಜೀವಕ್ಕೆ ಹೆದರುತ್ತಿದ್ದೇನೆ. ನನ್ನನ್ನೂ ಕೊಲೆ ಮಾಡಬಹುದು. ಆದರೆ ಪೊಲೀಸರು ನನ್ನ ಭಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಎಂದು ರೋಶನ್ ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

“ಅವರು ಪಿಂಕಿಯನ್ನು ಕೊಲ್ಲಬಹುದೆಂದು ನನಗೆ ತಿಳಿದಿತ್ತು. ಪಿಂಕಿಯ ಕುಟುಂಬ ಅವಳನ್ನು ಕರೆದುಕೊಂಡು ಹೋದಾಗ ನಾನು ಇದನ್ನು ಪೊಲೀಸರಿಗೆ ತಿಳಿಸಿದ್ದೆ. ಆದರೆ ಅವರು (ಪೊಲೀಸರು), ಪಿಂಕಿಯನ್ನು ಕರೆದುಕೊಂಡು ಹೋಗಿದ್ದ ಆಕೆಯ ಪೋಷಕರು ಮುಂದಿನ ವಿಚಾರಣೆಯಲ್ಲಿ ಆಕೆಯನ್ನು ನ್ಯಾಯಾಲಯಕ್ಕೆ ಕರೆತರುತ್ತಾರೆ ಎಂದು ಹೇಳಿದರು. ನಾನು ಕೂಗಿ ಹೇಳಿದೆ ಮತ್ತು ಪೊಲೀಸರಿಗೆ ಮನವಿ ಮಾಡಿದೆ, ಆದರೆ ಅವರು ನನ್ನ ಕಳವಳವನ್ನು ಗಂಭೀರವಾಗಿ ಪರಿಗಣಿಸಲಿಲ್ಲ” ಎಂದು ರೋಶನ್ ಅಳಲು ತೋಡಿಕೊಂಡಿದ್ದಾರೆ.

“ಅವಳು ಅಂತಿಮವಾಗಿ ಅವಳ ಮನೆಯಲ್ಲಿಯೇ ಕೊಲೆಯಾಗಿರುವುದು ಹೇಗೆ? ಅವಳು ಇಲ್ಲಿಯೇ ದೌಸಾದಲ್ಲಿ, ಅವಳ ಹೆತ್ತವರ ಮನೆಯಲ್ಲಿದ್ದರೆ, ಪೊಲೀಸರು ಅವಳನ್ನು ಮೂರು ದಿನಗಳವರೆಗೆ ಏಕೆ ಕಂಡುಹಿಡಿಯಲಿಲ್ಲ? ನಮ್ಮಿಬ್ಬರನ್ನೂ ಕೊಲ್ಲುವುದಾಗಿ ಆಕೆಯ ಕುಟುಂಬ ಆಗಾಗ್ಗೆ ಬೆದರಿಕೆ ಹಾಕಿತ್ತು. ‘ ದಲಿತ ಕೋಲಿ ಜಾತಿಯವನಾದ ನೀನು, ಒಬಿಸಿ ಮಾಲಿ ಜಾತಿಯ ಪಿಂಕಿಯೊಂದಿಗೆ ಬದುಕಲು ಕನಸು ಕಾಣುತ್ತಿರುವುದೇ ಅಪರಾಧ’ ಎಂದು ಪಿಂಕಿ ಕುಟುಂಬದವರು ನನ್ನನ್ನು ಬೆದರಿಸಿದ್ದರು. ಅವರು ನನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಿದ್ದರು” ಎಂದು ರೋಶನ್ ಹೇಳಿದ್ದಾರೆ.

ರೋಶನ್ ಪ್ರಕಾರ, ಸುಮಾರು 40 ಪುರುಷರು ಮತ್ತು ಮಹಿಳೆಯರು, (ಅವರಲ್ಲಿ ಹೆಚ್ಚಿನವರು ಪಿಂಕಿಯ ವಿಸ್ತೃತ ಕುಟುಂಬದ ಸದಸ್ಯರಾಗಿದ್ದರು,) ಪಿಂಕಿಯನ್ನು ಕರೆದೊಯ್ಯಲು ಅವರ ಮನೆಗೆ ಬಂದಿದ್ದರು.

“ನಾವು ಹಣವಿಲ್ಲದ ಕಾರಣ ನಾವು ಮತ್ತೆ ದೌಸಾಗೆ ಬಂದಿದ್ದೇವೆ” ಎಂದು ಪಟ್ಟಣದಲ್ಲಿ ಜಿಮ್ ಹೊಂದಿರುವ ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) ಪದವಿ ಓದುತ್ತಿರುವ ರೋಶನ್ ಹೇಳಿದರು. “ನಾವು ಮನೆಗೆ ತಲುಪಿದ ತಕ್ಷಣ, ಅವರ ಕುಟುಂಬ ಸದಸ್ಯರು ನಮ್ಮ ಮೇಲೆ ಹಲ್ಲೆ ನಡೆಸಿ ಕರೆದೊಯ್ದರು” ಎಂದು ಅವರು ಹೇಳಿದರು.

ಪಿಂಕಿ ಕಾಲೇಜಿನಲ್ಲಿ ತನ್ನ ಮೊದಲ ವರ್ಷದಲ್ಲಿದ್ದಳು. ನಾವು ಪ್ರೀತಿಸಿ ಊರು ತೊರೆಯುವ ಮೊದಲು, ಅವರ ಕುಟುಂಬವು ಅವಳನ್ನು ಬೇರೆ ಮದುವೆಗೆ ಒತ್ತಾಯಿಸಿತ್ತು ಮತ್ತು ಅವಳನ್ನು ಹೊಡೆದಿತ್ತು ಎಂದು ರೋಶನ್ ಆರೋಪಿಸಿದ್ದಾರೆ. “ನಾನು ಈಗ ನನ್ನ ಪ್ರಾಣಕ್ಕಾಗಿ ಭಯಪಡುತ್ತೇನೆ. ಅವಳ ಮೂವರು ಸಂಬಂಧಿಗಳಾದ ಕಲು, ಮುಖೇಶ್ ಮತ್ತು ರಂಗ್‌ಲಾಲ್ ನನ್ನನ್ನು ಕೊಲ್ಲಲು ಕೆಲವು ಜನರಿಗೆ ಹಣವನ್ನು ನೀಡಿದ್ದಾರೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ರೋಶನ್ ಹೇಳಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ ನೂರಾರು ಸಾಮಾಜಿಕ ಕಾರ್ಯಕರ್ತರು ಪೊಲೀಸರ ನಿರ್ಲಕ್ಷ್ಯ ಖಂಡಿಸಿದ್ದಾರೆ. ಜೊತೆಗೆ ರೋಶನ್ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಒತ್ತಾಯಿಸಿದ್ದಾರೆ.

“ಇದು ನಾಚಿಕೆಗೇಡಿನ ಸಂಗತಿ. ಇದು ಮಹಿಳೆಯರ ಭದ್ರತೆಗಾಗಿ ಪೊಲೀಸ್ ಮತ್ತು ರಾಜಸ್ಥಾನ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸುತ್ತದೆ. ದಂಪತಿಯನ್ನು ರಕ್ಷಿಸಲು ಹೈಕೋರ್ಟ್ ಪೊಲೀಸರಿಗೆ ಆದೇಶ ನೀಡಿದ್ದರೂ, ಪಿಂಕಿ ಸೈನಿಯನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನ ರಾಜಸ್ಥಾನ ಘಟಕದ ಅಧ್ಯಕ್ಷ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

“ದೌಸಾದ ಸರ್ಕಲ್ ಆಫೀಸರ್, ದೌಸಾ ಎಸ್ಪಿ ಮತ್ತು ಕೊಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ಅಲ್ಲಿನ ಇತರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಾವು ಒತ್ತಾಯಿಸುತ್ತೇವೆ. ಪಿಂಕಿಯನ್ನು ಅಪಹರಿಸಿದ ನಂತರ ರೋಶನ್ ತುರ್ತು ಸಂಖ್ಯೆ 100ಕ್ಕೆ ಹಲವಾರು ಕರೆಗಳನ್ನು ಮಾಡಿದ್ದಾರೆ. ಆದರೆ ದೌಸಾ ಪೊಲೀಸರು, ಕೊಟ್ವಾಲಿ ಪೊಲೀಸ್ ಠಾಣೆಗೆ ಕರೆ ಮಾಡಲು ಹೇಳುವ ಮೂಲಕ ಅವರು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದರು ” ಎಂದು ಕವಿತ ಶ್ರೀವಾಸ್ತವ ಹೇಳಿದರು.

ಹೈಕೋರ್ಟ್‌ ಆದೇಶದ ಬಗ್ಗೆ ದೌಸಾ ಪೊಲೀಸರಿಗೆ ತಿಳಿದಿಲ್ಲ ಎಂದು ಸರ್ಕಲ್ ಅಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ. “ನ್ಯಾಯಾಲಯವು ಅವರಿಗೆ ರಕ್ಷಣೆ ನೀಡಿದೆ ಎಂದು ನಮಗೆ ತಿಳಿದಿರಲಿಲ್ಲ. ಮಹಿಳೆಯನ್ನು ಅಪಹರಿಸಿದ ನಂತರವೇ ನಮಗೆ ಇದು ಗೊತ್ತಾಗಿದ್ದು. ಹೈಕೋರ್ಟ್ ಆದೇಶದ ಬಗ್ಗೆ ಅಧಿಕೃತ ಚಾನೆಲ್‌ಗಳ ಮೂಲಕ ನಮಗೆ ಯಾವುದೇ ಮಾಹಿತಿ ಬಂದಿಲ್ಲ” ಎಂದು ದೀಪಕ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...