Homeಮುಖಪುಟರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನಿರ್ಲಕ್ಷಿಸಿದ ಪೊಲೀಸರು: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನಿರ್ಲಕ್ಷಿಸಿದ ಪೊಲೀಸರು: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

- Advertisement -
- Advertisement -

ರಾಜಸ್ಥಾನ ಹೈಕೋರ್ಟ್‌ನಿಂದ ತಾನು ಪ್ರಿತಿಸಿದ ದಲಿತ ಯುವಕನೊಂದಿಗೆ ವಾಸಿಸಲು ರಕ್ಷಣೆ ಪಡೆದ 18 ವರ್ಷದ ಒಬಿಸಿ ಸಮುದಾಯದ ಯುವತಿಯನ್ನು ಆಕೆಯ ತಂದೆ ಕೊಲೆ ಮಾಡಿದ್ದಾರೆ ಎಂದು ರಾಜ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನ್ನ ಮಗಳು ಪಿಂಕಿಯನ್ನು ದೌಸಾ ಪಟ್ಟಣದ ತನ್ನ ಮನೆಯಲ್ಲಿ ಕೊಂದಿದ್ದೇನೆ ಎಂದು ತಂದೆ ಶಂಕರ್ ಲಾಲ್ ಸೈನಿ ಬುಧವಾರ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ತದನಂತರ ಆತನನ್ನು ಬಂಧಿಸಿದ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದಾರೆ, ಇದು ಕತ್ತು ಹಿಸುಕಿದ ಗುರುತುಗಳನ್ನು ಹೊಂದಿದೆ ಎಂದು ಎಸ್ಪಿ ಹೇಳಿದರು.

ಫೆಬ್ರವರಿ 16 ರಂದು ಒಬಿಸಿ ಸಮುದಾಯದ ಪಿಂಕಿ ಸೈನಿಯು ದಲಿತ ಸಮುದಾಯದ ರೋಶನ್ ಮಹಾವರ್ (24) ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದರು. ಇದಕ್ಕೆ ಪಿಂಕಿಯ ಕುಟುಂಬ ಒಪ್ಪಿರಲಿಲ್ಲ. ಹಾಗಾಗಿ ಫೆಬ್ರವರಿ 21 ರಂದು ಪಿಂಕಿ ಮಹಾವರ್ ಅವರೊಂದಿಗೆ ಊರು ತೊರೆದರು. ಫೆಬ್ರವರಿ 26 ರಂದು, ದಂಪತಿಗಳು ರಾಜಸ್ಥಾನ ಹೈಕೋರ್ಟ್ ಮುಂದೆ ಹಾಜರಾಗಿ ನಮ್ಮದು ಪರಸ್ಪರ ಒಪ್ಪಿತ ವಿವಾಹವಾಗಿದ್ದು ರಕ್ಷಣೆ ನೀಡಬೇಕೆಂದು ಕೋರಿದ್ದರು.

ನ್ಯಾಯಾಲಯವು ಅವರಿಗೆ ಸ್ಥಳೀಯ ಪೊಲೀಸರಿಂದ ರಕ್ಷಣೆ ನೀಡುವಂತೆ ಆದೇಶಿಸಿತು ಮತ್ತು “ಅವರು ಎಲ್ಲಿಗೆ ಹೋಗಬೇಕೆಂದು ಬಯಸುತ್ತಾರೆಯೋ ಅಲ್ಲಿಗೆ ಕರೆದೊಯ್ಯಬೇಕು” ಎಂದು ಕೋರ್ಟ್ ಸೂಚಿಸಿತ್ತು ಎಸ್ಪಿ ಕುಮಾರ್ ತಿಳಿಸಿದ್ದಾರೆ.

ಪಿಂಕಿ ಮತ್ತು ರೋಶನ್ ಜೈಪುರಕ್ಕೆ ಹೋಗಲು ಬಯಸಿದ್ದರಿಂದ ಪೊಲೀಸರು ಅವರನ್ನು ಜೈಪುರಕ್ಕೆ ಕರೆದೊಯ್ದರು. “ಮಾರ್ಚ್ 1 ರಂದು ದಂಪತಿಗಳು ದೌಸಾದಲ್ಲಿರುವ ರೋಶನ್ ಮನೆಗೆ ಬಂದರು. ಆದರೆ ಯುವತಿಯ ಕುಟುಂಬ ಸದಸ್ಯರು ಅದೇ ದಿನ ಅವಳನ್ನು ಅಲ್ಲಿಂದ ಬಲವಂತವಾಗಿ ಕರೆದೊಯ್ದರು” ಎಂದು ಎಸ್ಪಿ ಹೇಳಿದ್ದಾರೆ.

“ನಾವು ಪಿಂಕಿಗಾಗಿ ಹುಡುಕುತ್ತಿದ್ದೆವು. ನಿನ್ನೆ (ಬುಧವಾರ) ರಾತ್ರಿ ಆಕೆಯ ತಂದೆ ಪೊಲೀಸ್ ಠಾಣೆಗೆ ತಲುಪಿ ತನ್ನ ಮಗಳನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ನಾವು ಅವರ ಮನೆಗೆ ಹೋದಾಗ, ಪಿಂಕಿಯವರ ಮೃತದೇಹವನ್ನು ಕಂಡೆವು. ಆರಂಭಿಕ ಪರಿಶೀಲನೆಯ ಪ್ರಕಾರ, ಇದು ಕತ್ತು ಹಿಸುಕಿದ ಕೊಲೆ ಪ್ರಕರಣವೆಂದು ತೋರುತ್ತದೆ ” ಎಂದು ಎಸ್‌ಪಿ ಕುಮಾರ್ ಹೇಳಿದರು.

ಆರೋಪಿ ತಂದೆ ಶಂಕರ್ ಲಾಲ್ ಸೈನಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಅಪರಾಧದಲ್ಲಿ ಇತರ ವ್ಯಕ್ತಿಗಳು ಭಾಗಿಯಾಗಿರುವ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದಂಪತಿಗಳನ್ನು ರಕ್ಷಿಸಲು ಹೈಕೋರ್ಟ್‌ ನೀಡಿದ ಆದೇಶಕ್ಕೆ ಪೊಲೀಸರು ಬದ್ಧರಾಗಿಲ್ಲ. ಪೊಲೀಸರು ತೋರಿದ “ಸಂಪೂರ್ಣ ನಿರ್ಲಕ್ಷ್ಯ”ದಿಂದ ಈ ಹತ್ಯೆ ಸಂಭವಿಸಿದೆ ಎಂದು ಪಿಂಕಿ ಮತ್ತು ರೋಶನ್ ಪರ ವಕೀಲರು ಆರೋಪಿಸಿದ್ದಾರೆ.

ಫೆಬ್ರವರಿ 26 ರ ತನ್ನ ಆದೇಶದಲ್ಲಿ, ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಸತೀಶ್ ಕುಮಾರ್ ಶರ್ಮಾ ಹೀಗೆ ಹೇಳಿದ್ದರು: “ಅರ್ಜಿದಾರರು ಇಬ್ಬರೂ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದಾರೆ ಮತ್ತು ಅವರು ಪರಸ್ಪರ ಒಟ್ಟಿಗೆ ಬದುಕಲು ಬಯಸುತ್ತಾರೆ. ಆದ್ದರಿಂದ, ಪ್ರಕರಣದ ಅರ್ಹತೆಗಳ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದೆ, ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳದಂತೆ ಮತ್ತು ಅರ್ಜಿದಾರರಿಗೆ ಯಾವುದೇ ರೀತಿಯ ಹಾನಿ ಮಾಡದಂತೆ ಸಲಹೆ ನೀಡಲು ನಿರ್ದೇಶಿಸಲಾಗಿದೆ…’

“ಇದಲ್ಲದೆ, ಅರ್ಜಿದಾರರಿಗೆ ರಕ್ಷಣೆ ನೀಡುವಂತೆ ಸ್ಥಳೀಯ ಪೊಲೀಸ್ ಪ್ರಾಧಿಕಾರಕ್ಕೆ ತಿಳಿಸಲು ಮತ್ತು ಅವರ ಇಚ್ಛೆಯಂತೆ ಅವರನ್ನು ಸುರಕ್ಷಿತ ಸ್ಥಳದಲ್ಲಿ ಕರೆದೊಯ್ಯಲು ಸಾರ್ವಜನಿಕ ಅಭಿಯೋಜಕರಿಗೆ ನಿರ್ದೇಶಿಸಲಾಗಿದೆ” ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದು, ಮಾರ್ಚ್ 9 ರಂದು ನ್ಯಾಯಾಲಯವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು.

ಮಾರ್ಚ್ 1 ರಂದು ಪಿಂಕಿಯನ್ನು ಬಲವಂತವಾಗಿ ಕರೆದೊಯ್ದ ಆರೋಪದಲ್ಲಿ, ರೋಶನ್ ಕುಟುಂಬವು ಪಿಂಕಿಯ ತಂದೆ, ಚಿಕ್ಕಪ್ಪ ಮತ್ತು ಇತರ ಸಂಬಂಧಿಕರು ಸೇರಿ 11 ಮಂದಿ ಮತ್ತು 15-20 ಇತರ ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಅಪಹರಣ, ಕ್ರಿಮಿನಲ್ ಬೆದರಿಕೆ ಮತ್ತು ಕಳ್ಳತನ, ಮತ್ತು ಎಸ್‌ಸಿ /ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿಭಾಗಗಳು ಸೇರಿದಂತೆ ಐಪಿಸಿ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ನೋಂದಾಯಿಸಲಾಗಿದೆ. ಯುವತಿಯ ತಂದೆ ಶಂಕರ್ ಲಾಲ್ ಸೈನಿ ಮತ್ತು ಇತರ ಆರೋಪಿಗಳು ಜಾತಿವಾದಿ ಬೈಗುಳಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ರೋಶನ್ ಅವರ ಕುಟುಂಬ ಆರೋಪಿಸಿದೆ. ಅವರ ಮನೆಗೆ ಹಾನಿ ಮಾಡಿ, 1.2 ಲಕ್ಷ ರೂ. ದೋಚಿಕೊಂಡು ಮತ್ತು ಪಿಂಕಿಯನ್ನು ಬಲವಂತವಾಗಿ ಅಪಹರಿಸಿದರು ಎಂದು ರೋಶನ್ ಕುಟುಂಬ ದೂರು ನೀಡಿದೆ.

“ದಂಪತಿಗಳಿಗೆ ರಕ್ಷಣೆ ನೀಡುವ ಹೈಕೋರ್ಟ್ ಆದೇಶದ ಹೊರತಾಗಿಯೂ, ಪಿಂಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ಸಂಪೂರ್ಣ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ದಂಪತಿಗಳು ತಮ್ಮ ಸುರಕ್ಷತೆಗಾಗಿ ಹೆದರುತ್ತಿದ್ದರು ಮತ್ತು ತಮ್ಮ ಸ್ವಂತ ಇಚ್ಛಾಶಕ್ತಿಯಿಂದ ಪರಸ್ಪರ ಒಟ್ಟಿಗೆ ಬದುಕಲು ಬಯಸಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು ”ಎಂದು ಪಿಂಕಿ ಮತ್ತು ರೋಶನ್ ಅವರನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸಿದ ವಕೀಲ ನವಾಲ್ ಸಿಂಗ್ ಸಿಕಾರ್ವಾರ್ ಹೇಳಿದ್ದಾರೆ.

ಪಿಂಕಿಯ ಹತ್ಯೆಯ ನಂತರ, ಈಗ ತಾನು ನನ್ನ ಜೀವಕ್ಕೆ ಹೆದರುತ್ತಿದ್ದೇನೆ. ನನ್ನನ್ನೂ ಕೊಲೆ ಮಾಡಬಹುದು. ಆದರೆ ಪೊಲೀಸರು ನನ್ನ ಭಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಎಂದು ರೋಶನ್ ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

“ಅವರು ಪಿಂಕಿಯನ್ನು ಕೊಲ್ಲಬಹುದೆಂದು ನನಗೆ ತಿಳಿದಿತ್ತು. ಪಿಂಕಿಯ ಕುಟುಂಬ ಅವಳನ್ನು ಕರೆದುಕೊಂಡು ಹೋದಾಗ ನಾನು ಇದನ್ನು ಪೊಲೀಸರಿಗೆ ತಿಳಿಸಿದ್ದೆ. ಆದರೆ ಅವರು (ಪೊಲೀಸರು), ಪಿಂಕಿಯನ್ನು ಕರೆದುಕೊಂಡು ಹೋಗಿದ್ದ ಆಕೆಯ ಪೋಷಕರು ಮುಂದಿನ ವಿಚಾರಣೆಯಲ್ಲಿ ಆಕೆಯನ್ನು ನ್ಯಾಯಾಲಯಕ್ಕೆ ಕರೆತರುತ್ತಾರೆ ಎಂದು ಹೇಳಿದರು. ನಾನು ಕೂಗಿ ಹೇಳಿದೆ ಮತ್ತು ಪೊಲೀಸರಿಗೆ ಮನವಿ ಮಾಡಿದೆ, ಆದರೆ ಅವರು ನನ್ನ ಕಳವಳವನ್ನು ಗಂಭೀರವಾಗಿ ಪರಿಗಣಿಸಲಿಲ್ಲ” ಎಂದು ರೋಶನ್ ಅಳಲು ತೋಡಿಕೊಂಡಿದ್ದಾರೆ.

“ಅವಳು ಅಂತಿಮವಾಗಿ ಅವಳ ಮನೆಯಲ್ಲಿಯೇ ಕೊಲೆಯಾಗಿರುವುದು ಹೇಗೆ? ಅವಳು ಇಲ್ಲಿಯೇ ದೌಸಾದಲ್ಲಿ, ಅವಳ ಹೆತ್ತವರ ಮನೆಯಲ್ಲಿದ್ದರೆ, ಪೊಲೀಸರು ಅವಳನ್ನು ಮೂರು ದಿನಗಳವರೆಗೆ ಏಕೆ ಕಂಡುಹಿಡಿಯಲಿಲ್ಲ? ನಮ್ಮಿಬ್ಬರನ್ನೂ ಕೊಲ್ಲುವುದಾಗಿ ಆಕೆಯ ಕುಟುಂಬ ಆಗಾಗ್ಗೆ ಬೆದರಿಕೆ ಹಾಕಿತ್ತು. ‘ ದಲಿತ ಕೋಲಿ ಜಾತಿಯವನಾದ ನೀನು, ಒಬಿಸಿ ಮಾಲಿ ಜಾತಿಯ ಪಿಂಕಿಯೊಂದಿಗೆ ಬದುಕಲು ಕನಸು ಕಾಣುತ್ತಿರುವುದೇ ಅಪರಾಧ’ ಎಂದು ಪಿಂಕಿ ಕುಟುಂಬದವರು ನನ್ನನ್ನು ಬೆದರಿಸಿದ್ದರು. ಅವರು ನನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಿದ್ದರು” ಎಂದು ರೋಶನ್ ಹೇಳಿದ್ದಾರೆ.

ರೋಶನ್ ಪ್ರಕಾರ, ಸುಮಾರು 40 ಪುರುಷರು ಮತ್ತು ಮಹಿಳೆಯರು, (ಅವರಲ್ಲಿ ಹೆಚ್ಚಿನವರು ಪಿಂಕಿಯ ವಿಸ್ತೃತ ಕುಟುಂಬದ ಸದಸ್ಯರಾಗಿದ್ದರು,) ಪಿಂಕಿಯನ್ನು ಕರೆದೊಯ್ಯಲು ಅವರ ಮನೆಗೆ ಬಂದಿದ್ದರು.

“ನಾವು ಹಣವಿಲ್ಲದ ಕಾರಣ ನಾವು ಮತ್ತೆ ದೌಸಾಗೆ ಬಂದಿದ್ದೇವೆ” ಎಂದು ಪಟ್ಟಣದಲ್ಲಿ ಜಿಮ್ ಹೊಂದಿರುವ ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) ಪದವಿ ಓದುತ್ತಿರುವ ರೋಶನ್ ಹೇಳಿದರು. “ನಾವು ಮನೆಗೆ ತಲುಪಿದ ತಕ್ಷಣ, ಅವರ ಕುಟುಂಬ ಸದಸ್ಯರು ನಮ್ಮ ಮೇಲೆ ಹಲ್ಲೆ ನಡೆಸಿ ಕರೆದೊಯ್ದರು” ಎಂದು ಅವರು ಹೇಳಿದರು.

ಪಿಂಕಿ ಕಾಲೇಜಿನಲ್ಲಿ ತನ್ನ ಮೊದಲ ವರ್ಷದಲ್ಲಿದ್ದಳು. ನಾವು ಪ್ರೀತಿಸಿ ಊರು ತೊರೆಯುವ ಮೊದಲು, ಅವರ ಕುಟುಂಬವು ಅವಳನ್ನು ಬೇರೆ ಮದುವೆಗೆ ಒತ್ತಾಯಿಸಿತ್ತು ಮತ್ತು ಅವಳನ್ನು ಹೊಡೆದಿತ್ತು ಎಂದು ರೋಶನ್ ಆರೋಪಿಸಿದ್ದಾರೆ. “ನಾನು ಈಗ ನನ್ನ ಪ್ರಾಣಕ್ಕಾಗಿ ಭಯಪಡುತ್ತೇನೆ. ಅವಳ ಮೂವರು ಸಂಬಂಧಿಗಳಾದ ಕಲು, ಮುಖೇಶ್ ಮತ್ತು ರಂಗ್‌ಲಾಲ್ ನನ್ನನ್ನು ಕೊಲ್ಲಲು ಕೆಲವು ಜನರಿಗೆ ಹಣವನ್ನು ನೀಡಿದ್ದಾರೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ರೋಶನ್ ಹೇಳಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ ನೂರಾರು ಸಾಮಾಜಿಕ ಕಾರ್ಯಕರ್ತರು ಪೊಲೀಸರ ನಿರ್ಲಕ್ಷ್ಯ ಖಂಡಿಸಿದ್ದಾರೆ. ಜೊತೆಗೆ ರೋಶನ್ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಒತ್ತಾಯಿಸಿದ್ದಾರೆ.

“ಇದು ನಾಚಿಕೆಗೇಡಿನ ಸಂಗತಿ. ಇದು ಮಹಿಳೆಯರ ಭದ್ರತೆಗಾಗಿ ಪೊಲೀಸ್ ಮತ್ತು ರಾಜಸ್ಥಾನ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸುತ್ತದೆ. ದಂಪತಿಯನ್ನು ರಕ್ಷಿಸಲು ಹೈಕೋರ್ಟ್ ಪೊಲೀಸರಿಗೆ ಆದೇಶ ನೀಡಿದ್ದರೂ, ಪಿಂಕಿ ಸೈನಿಯನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನ ರಾಜಸ್ಥಾನ ಘಟಕದ ಅಧ್ಯಕ್ಷ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

“ದೌಸಾದ ಸರ್ಕಲ್ ಆಫೀಸರ್, ದೌಸಾ ಎಸ್ಪಿ ಮತ್ತು ಕೊಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ಅಲ್ಲಿನ ಇತರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಾವು ಒತ್ತಾಯಿಸುತ್ತೇವೆ. ಪಿಂಕಿಯನ್ನು ಅಪಹರಿಸಿದ ನಂತರ ರೋಶನ್ ತುರ್ತು ಸಂಖ್ಯೆ 100ಕ್ಕೆ ಹಲವಾರು ಕರೆಗಳನ್ನು ಮಾಡಿದ್ದಾರೆ. ಆದರೆ ದೌಸಾ ಪೊಲೀಸರು, ಕೊಟ್ವಾಲಿ ಪೊಲೀಸ್ ಠಾಣೆಗೆ ಕರೆ ಮಾಡಲು ಹೇಳುವ ಮೂಲಕ ಅವರು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದರು ” ಎಂದು ಕವಿತ ಶ್ರೀವಾಸ್ತವ ಹೇಳಿದರು.

ಹೈಕೋರ್ಟ್‌ ಆದೇಶದ ಬಗ್ಗೆ ದೌಸಾ ಪೊಲೀಸರಿಗೆ ತಿಳಿದಿಲ್ಲ ಎಂದು ಸರ್ಕಲ್ ಅಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ. “ನ್ಯಾಯಾಲಯವು ಅವರಿಗೆ ರಕ್ಷಣೆ ನೀಡಿದೆ ಎಂದು ನಮಗೆ ತಿಳಿದಿರಲಿಲ್ಲ. ಮಹಿಳೆಯನ್ನು ಅಪಹರಿಸಿದ ನಂತರವೇ ನಮಗೆ ಇದು ಗೊತ್ತಾಗಿದ್ದು. ಹೈಕೋರ್ಟ್ ಆದೇಶದ ಬಗ್ಗೆ ಅಧಿಕೃತ ಚಾನೆಲ್‌ಗಳ ಮೂಲಕ ನಮಗೆ ಯಾವುದೇ ಮಾಹಿತಿ ಬಂದಿಲ್ಲ” ಎಂದು ದೀಪಕ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...