Homeಮುಖಪುಟಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

291 ಕ್ಷೇತ್ರಗಳಲ್ಲಿ ಟಿಎಂಸಿಯು 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ & 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

- Advertisement -
- Advertisement -

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಛಿಮ ಬಂಗಾಳ ಚುನಾವಣೆಯಲ್ಲಿ ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯುವುದಾಗಿ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಒಟ್ಟು 294 ಕ್ಷೇತ್ರಗಳಲ್ಲಿ 291 ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಇಂದು ಅವರು ಘೋಷಿಸಿದ್ದಾರೆ.

ನಂದಿಗ್ರಾಮವು ಈ ಹಿಂದೆ ಟಿಎಂಸಿಯ ಪ್ರಭಾವಿ ನಾಯಕನಾಗಿದ್ದ ಮತ್ತು ಈಗ ಬಿಜೆಪಿಗೆ ಪಕ್ಷಾಂತರ ಮಾಡಿರುವ ಸುವೇಂಧು ಅಧಿಕಾರಿಯ ಪ್ರಬಲ ನೆಲೆಯಾಗಿದೆ. ಸದ್ಯ ಕೋಲ್ಕತ್ತಾದ ಭವಾನಿಪೋರ್ ಪ್ರತಿನಿಧಿಸುತ್ತಿರುವ ಮಮತಾ ಬ್ಯಾನರ್ಜಿಯವರು ತಮ್ಮ ಸುರಕ್ಷಿತ ಸ್ಥಾನವನ್ನು ತೆರವುಗೊಳಿಸಿ ಕಠಿಣ ನಂದಿಗ್ರಾಮದಲ್ಲಿ ಸ್ಪರ್ಧಿಸುವುದಾಗಿ ಮತ್ತು ಅದೊಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತೀರ್ಮಾನಿಸಿದ್ದಾರೆ.

ಟಿಎಂಸಿಯ ಅಭ್ಯರ್ಥಿಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಮತ್ತು ಮುಸ್ಲಿಮರಿಗೆ ಹೆಚ್ಚಿನ ಸೀಟುಗಳನ್ನು ನೀಡಲಾಗಿದೆ. 291 ಕ್ಷೇತ್ರಗಳಲ್ಲಿ 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ ಮತ್ತು 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡಿಲ್ಲ.

ನಂದಿಗ್ರಾಮ ಸುವೇಂಧು ಅಧಿಕಾರಿಯವರ ಪ್ರಬಲ ನೆಲೆಯಾದ್ದರಿಂದ ಮಮತಾ ಬ್ಯಾನರ್ಜಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಅದಕ್ಕೆ ತೆರೆ ಎಳೆದಿರುವ ಮಮತಾ ಬ್ಯಾನರ್ಜಿ ತಾವು ತೆರವುಗೊಳಿಸುವ ಭವಾನಿಪೋರ್ ಕ್ಷೇತ್ರದಿಂದ ಅವರ ಸಂಪುಟದ ವಿದ್ಯುತ್ ಸಚಿವ ಸೋವಾಂಡೇಬ್ ಚಟ್ಟೋಪಾಧ್ಯಾಯರು ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿರುವ ಸುವೇಂಧು ಅಧಿಕಾರಿ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಅವರನ್ನು ಮಮತಾ ಬ್ಯಾನರ್ಜಿಯವರ ಬಲಗೈ ಎಂದು ಕರೆಯಲಾಗುತ್ತಿತ್ತು. ನಂದಿಗ್ರಾಮದಲ್ಲಿ ಟಾಟಾ ಕಂಪನಿಯ ಕಾರು ತಯಾರಿಕ ಘಟಕಕ್ಕಾಗಿ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿದ್ದಾಗ ಅದನ್ನು ವಿರೋಧಿಸಿ ಸುವೇಂಧು ಅಧಿಕಾರಿ ಟಿಎಂಸಿ ಅಭಿಯಾನದ ನೇತೃತ್ವ ವಹಿಸಿದ್ದರು. ಅವರು ನಿನ್ನೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿ ಇಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ ಅವರನ್ನು 50,000 ಮತಗಳ ಅಂತರದಿಂದ ಸೋಲಿಸುತ್ತೇನೆ ಎಂದಿದ್ದರು. ಆ ಸವಾಲು ಸ್ವೀಕರಿಸಿರುವ ಮಮತಾ ಬ್ಯಾನರ್ಜಿ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಸುವೇಂಧು ಬಿಜೆಪಿ ಅಭ್ಯರ್ಥಿಯೇ ಎಂಬುದನ್ನು ಪ್ರಧಾನಿ ನಿರ್ಧರಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಂದಿಗ್ರಾಮ ನನ್ನ ಅದೃಷ್ಟದ ಕ್ಷೇತ್ರ. ಅದು ನನ್ನ ಹಿರಿಯ ಸಹೋದರಿಯಂತೆ. ನಾನು ಪ್ರತಿನಿಧಿಸುತ್ತಿರುವ ಭವಾನಿಪೋರ್ ಕಿರಿಯ ಸಹೋದರಿಯಿದ್ದಂತೆ. ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು. ಅಥವಾ ನಂದಿಗ್ರಾಮವೊಂದರಲ್ಲೇ ಸ್ಪರ್ಧಿಸಲಿದ್ದು, ಭವಾನಿಪೋರ್‌ನಲ್ಲಿ ನಮ್ಮ ಪಕ್ಷದ ಇತರ ನಾಯಕರು ಸ್ಪರ್ಧಿಸಬಹುದು” ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ಹೇಳಿದ್ದರು.

ಮೂರು ಕ್ಷೇತ್ರಗಳಿಲ್ಲಿ ಟಿಎಂಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಅವುಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.


ಇದನ್ನೂ ಓದಿ: ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...