Homeಮುಖಪುಟಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

- Advertisement -
- Advertisement -

ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಎಡಪಂಥೀಯರು ನಿರ್ದಯವಾಗಿ ಕೊಲ್ಲುತ್ತಿದ್ದಾರೆ ಎಂಬ ಅರೆಸತ್ಯದ ವಿಷಯವನ್ನು ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಬಳಸುತ್ತ ಬಂದಿತ್ತು. ಊಹೂಂ ಅದಕ್ಕೇನೂ ರಾಜಕೀಯ ಲಾಭವಾಗಲಿಲ್ಲ. ನಂತರ, ಶಬರಿಮಲೆ ಅಯ್ಯಪ್ಪನ ಪಾದಕ್ಕೆ ಬಿದ್ದಿದ್ದ ಆಯ್ತು. ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರಿಗೆ ನಿಷೇಧ ವಿಷಯದ ವಿರುದ್ದ ‘ಹೋರಾಟ’ ಮಾಡಿತ್ತು. ಆಗ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಕಾಡೆ ಮಲಗಿತ್ತು.

ಕಳೆದ ಸಲದಂತೆ ಈ ಸಲವೂ ಅಲ್ಲಿಗೆ ಯೋಗಿ ಆದಿತ್ಯನಾಥರನ್ನು ಪ್ರಚಾರಕ್ಕೆ ಕಳಿಸಿ, ಅಭಿವೃದ್ಧಿಯ ಪಾಠಗಳನ್ನು ಬೋಧಿಸುವ ಮೂಲಕ ಅಪಹಾಸ್ಯಕ್ಕೆ ಬಿಜೆಪಿ ಈಡಾಗಿದೆ.
ಈಗ ಅದು ಮೆಟ್ರೋಮ್ಯಾನ್ ಶ್ರೀಧರನ್ ಎಂಬ 89 ವರ್ಷದ ಮಾಜಿ ಅಧಿಕಾರಿಯ ಹಳಿಯ ಮೇಲೆ ರೈಲು ಓಡಿಸಲು ಹತಾಶ ಪ್ರಯತ್ನ ಮಾಡುತ್ತಿದೆ.

ಮೇಲಿನದು, ಕೇರಳ ಚುನಾವಣೆಗೆ ಸಂಬಂಧಿಸಿದಂತೆ, ಬಿಜೆಪಿಯ ಹೀನಾಯ ಸ್ಥಿತಿ ಅನಿಸಬಹುದು, ಆದರೆ ಅದರ ಪಾಲಿಗೆ ಇದೇ ಅತ್ಯುತ್ತಮ ಗಳಿಗೆ ಅನಿಸಿಬಿಟ್ಟಿದೆ!

ಈಗ ಕೇರಳ ವಿಧಾನಸಭೆಯಲ್ಲಿ ಬಿಜೆಪಿಯ ಒಬ್ಬರು ಶಾಸಕರಿದ್ದಾರೆ. ಕೇರಳ ವಿಧಾನಸಭೆ ಸರ್ವಾನುಮತದಿಮದ ಕೇಂದ್ರದ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿತ್ತು. ಸರ್ವಾನುಮತ ಅಂದರೆ ಬಿಜೆಪಿಯ ಶಾಸಕನೂ ಬೆಂಬಲಿಸಿದ್ದರು!

2021: ಮೆಟ್ರೋಮ್ಯಾನ್ ಮತ್ತು ಬಿಜೆಪಿ ‘ರೈಲು’!

ಮೆಟ್ರೋ ರೈಲು ವ್ಯವಸ್ಥೆ, ಕೊಂಕಣ ರೈಲು ವ್ಯವಸ್ಥೆಗಳ ಸಾಧನೆಗಳಿಗಾಗಿ ಶ್ರೀಧರನ್ ಪ್ರಸಿದ್ಧರು. ಆಡಳಿತಾಧಿಕಾರಿಗಳು ರಾಜಕೀಯ ಯಶಸ್ಸು ಪಡೆದ ಇತ್ತೀಚಿನ ಉದಾಹರಣೆ ಎಂದರೆ, ಐಆರ್‌ಎಸ್ ಕೇಡರ್‌ನ ಅರವಿಂದ್ ಕೇಜ್ರಿವಾಲ್. ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ಕಟ್ಟುವ ಮುಂಚೆ ಮಾಹಿತಿ ಹಕ್ಕು ಕಾಯ್ದೆಗಾಗಿ ಹೋರಾಟ ನಡೆಸಿದ್ದರು. ಜನ್ ಲೋಕ್ ಮಸೂದೆ ಜಾರಿಗೆ ಒತ್ತಾಯಿಸಿ ಭ್ರಷ್ಟಾಚಾರದ ವಿರುದ್ಧ ವ್ಯಾಪಕ ಹೋರಾಟ ಮಾಡಿದ್ದರು. ಭ್ರಷ್ಟಾಚಾರವೆಂದರೆ, ರೊಕ್ಕದ ರೂಪದ ಲಂಚವಷ್ಟೇೆಂದು ನಂಬಿದ್ದ ಮಧ್ಯಮವರ್ಗದ ಜನರನ್ನೂ ಕೇಜ್ರಿವಾಲ್ ಸೆಳೆದಿದ್ದರು.

ಮುಂದೆ ಅವರ ಸರ್ಕಾರ ಶಿಕ್ಷಣ, ಆರೋಗ್ಯ, ನೀರು ಪೂರೈಕೆ ಮತ್ತು ವಿದ್ಯುತ್ ವಿಷಯಗಳಲ್ಲಿ ಮಾಡಿದ ಕೆಲಸಗಳು ಅವರನ್ನು ಜನಸ್ನೇಹಿ ಮಾಡಿವೆ.

ಆದರೆ, ಈ ಮೆಟ್ರೋಮ್ಯಾನ್ ಶ್ರೀಧರನ್, ತಮ್ಮ ನೌಕರಿಯ ಕಾರಣದಿಂದಾಗಿ ಬಹುಪಾಲು ಕೇರಳದಿಂದ ಹೊರಗೇ ಇದ್ದವರು. ನಿವೃತ್ತಿಯ ನಂತರವಷ್ಟೇ ಕೇರಳದ ತಮ್ಮ ಊರಿಗೆ ಬಂದವರು. ಈಗ ಏಕಾಏಕಿ ಅವರು ಬಿಜೆಪಿಗೆ ಸೇರುವುದು ಮತ್ತು ಬಿಜೆಪಿ ಈವರೆಗೆ ಕೇರಳದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಹಿಂದಕ್ಕೆ ಸರಿಸಿ, ಶ್ರೀಧರನ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವುದು- ಇದು ಶ್ರೀಧರನ್ ಅವರ ಅಸಾಧ್ಯ ಆಂಬಿಷನ್ಸ್ ಮತ್ತು ಬಿಜೆಪಿಯ ಹತಾಶೆ ಮತ್ತು ಜೂಜಿನಾಟಕ್ಕೆ ಸಂಕೇತದಂತಿದೆ.

ನಿನ್ನೆಯಷ್ಟೇ ಈ ಶ್ರೀಧರನ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತು. ಆದರೆ ಸ್ವಲ್ಪ ಹೊತ್ತಿನಲ್ಲೇ ರಾಷ್ಟ್ರೀಯ ಬಿಜೆಪಿ ಸ್ಪಷ್ಟನೆ ನೀಡಿ, ಇನ್ನೂ ಅದರ ಬಗ್ಗೆ ತೀರ್ಮಾನವಾಗಿಲ್ಲ, ಅಂತಹ ಅಧಿಕೃತ ಘೋಷಣೆ ಮಾಡಿಲ್ಲ ಎಂದಿತು. ಇದು ಕೂಡ ಬಿಜೆಪಿಯ ಗೊಂದಲ ಮತ್ತು ಶ್ರೀಧರನ್ ಅವರ ತಳಬುಡವಿಲ್ಲದ ಕನಸುಗಳನ್ನು ತೋರಿಸುತ್ತಿದೆ.

ಬಿಜೆಪಿಯ ಪ್ರಾಥಮಿಕ ಸದ್ಯಸ್ವತ್ವ ಪಡೆದ ಕೂಡಲೇ ಶ್ರೀಧರನ್, ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಗಿ ಘೋಷಣೆ ಮಾಡಲು ಭಿನ್ನವಿಸಿಕೊಂಡರು.
*****

ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಭಾರತದ ‘ಮೆಟ್ರೋ ಮ್ಯಾನ್’ ಇ.ಶ್ರೀಧರನ್ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಟ್ವೀಟ್ ಮಾಡಿದ ಕೆಲವೇ ಗಂಟೆಗಳ ನಂತರ ಕೇಂದ್ರ ಸಚಿವ ವಿ ಮುರಳೀಧರನ್ ಗುರುವಾರ ರಾತ್ರಿ ಎಎನ್‌ಐಗೆ ಸ್ಪಷ್ಟೀಕರಣವನ್ನು ನೀಡಿದ್ದು, ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದಿದ್ದಾರೆ.

ಹಿಂದಿನ ದಿನ ಮುರಳೀಧರನ್ ಅವರು ಟ್ವೀಟ್ ಮಾಡಿ, “ಕೇರಳ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇ ಶ್ರೀಧರನ್ ಅವರನ್ನು ಘೋಷಿಸಿ, ಅವರೊಂದಿಗೆ ಕೇರಳ ಚುನಾವಣೆಯಲ್ಲಿ ಹೋರಾಡಲಿದೆ. ಕೇರಳದ ಜನರಿಗೆ ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿ-ಆಧಾರಿತ ಆಡಳಿತವನ್ನು ಒದಗಿಸಲು ನಾವು ಸಿಪಿಎಂ ಮತ್ತು ಕಾಂಗ್ರೆಸ್ ಎರಡನ್ನೂ ಸೋಲಿಸುತ್ತೇವೆ’ ಎಂದಿದ್ದರು. ಈಗ ಆ ಟ್ವೀಟ್ ಡಿಲೀಟ್ ಮಾಡಿದ್ದಾರೆ,

ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಬಿಜೆಪಿಯ ನಿರ್ಧಾರವು ಪಕ್ಷದಲ್ಲಿನ “ಅನಧಿಕೃತ” ನಿಯಮಕ್ಕೆ ವಿರುದ್ಧವಾಗಿದೆ ಕೂಡ! 75 ವರ್ಷಕ್ಕಿಂತ ಮೇಲ್ಪಟ್ಟ ಯಾರನ್ನೂ ಮಂತ್ರಿ ಸ್ಥಾನ ಅಥವಾ ಇತರ ಸ್ಥಾನಗಳಿಗೆ ಪರಿಗಣಿಸಲಾಗುತ್ತಿಲ್ಲ. ಅದ್ವಾನಿ, ಮುರಳಿ ಮನೋಹರ್ ಜೋಶಿಯವರಿಗೂ ಇದನ್ನು ಅನ್ವಯಿಸಲಾಯಿತ್ತು.

ಶ್ರೀಧರನ್ ಅವರು ಜೂನ್‌ನಲ್ಲಿ 89 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಆದರೂ, ಆ ನಿಯಮಕ್ಕೆ ವಿನಾಯಿತಿಗಳಿಗೆ ತಕ್ಷಣದ ಆದ್ಯತೆ ಇದೆ; ಬಿ.ಎಸ್ ಯಡಿಯೂರಪ್ಪ ಅವರು 2019 ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ 76 ವರ್ಷವಾಗಿತ್ತಲ್ಲವೆ?

ಶ್ರೀಧರನ್ ಅವರು ಚುನಾವಣೆಯಲ್ಲಿ “ದೊಡ್ಡ” ಗೆಲುವು ನಿರೀಕ್ಷಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಹಳಿಗಳೇ ಇಲ್ಲದೇ ಪ್ಯಾಸೆಂಜರ್ ರೈಲು ಓಡಿಸುವ ಕನಸು ಕಾಣುತ್ತಿದ್ದಾರೆ!
“ನಾನು ರಾಜಕಾರಣಿಯಂತೆ ಕೆಲಸ ಮಾಡುವುದಿಲ್ಲ. .ನಾನು ತಂತ್ರಜ್ಞನಂತೆ ಕೆಲಸ ಮಾಡುತ್ತೇನೆ” ಎಂದು ಶ್ರೀಧರನ್ ಹೇಳುತ್ತಿದ್ದಾರೆ ಬೇರೆ!
ಮೂಲಭೂತ ಸೌಕರ್ಯ ಮತು ಉದ್ಯಮಗಳ ಸ್ಥಾಪನೆ ಬಿಟ್ಟು ಅವರ ತಲೆಯಲ್ಲಿ ಯಾವ ಹೊಸ ಹೊಳಹೂ ಕಾಣುತ್ತಿಲ್ಲ!

ಕೇರಳದಲ್ಲಿ ಬಿಜೆಪಿ ಶ್ರೀಧರನ್ ಅವರ ಮೆಟ್ರೋರೈಲು ಏರಿದೆ. ಆದರೆ ಅದು ಓಡುವುದೇ ಅನುಮಾನ, ಓಡಿದರೂ ಪ್ಯಾಸೆಂಜರ್ ಹತ್ತುವುದಂತೂ ತೀರಾ ಅನುಮಾನ!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಭಾರತದ ‘ಮೆಟ್ರೋ ಮ್ಯಾನ್’ ಈಗ ಕೇರಳ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...