Homeಚಳವಳಿವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

- Advertisement -
- Advertisement -

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿನ ಉಕ್ಕು ಕಾರ್ಖಾನೆ ಖಾಸಗೀಕರಣಗೊಳಿಸಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ನಡೆದ ಆಂಧ್ರಪ್ರದೇಶ ಬಂದ್‌ ಶಾಂತಿಯುತವಾಗಿ ನಡೆದಿದೆ. ರಾಜ್ಯಾದ್ಯಂತ ನಡೆದ ಪ್ರತಿಭಟನೆಗೆ ಜನರು ಬೆಂಬಲ ನೀಡಿದ್ದಾರೆ.

‘ವಿಶಾಖಪಟ್ಟಣ ಉಕ್ಕು ಸಂರಕ್ಷಣಾ ಸಮಿತಿ’ ಆಯೋಜಿಸಿದ್ದ ಬೃಹತ್‌ ಪ್ರತಿಭಟನೆಯಲ್ಲಿ ಬಿಜೆಪಿ ಬಿಟ್ಟು ಉಳಿದೆಲ್ಲಾ ರಾಜಕೀಯ ಪಕ್ಷಗಳು, ವಿವಿಧ ಸಾರ್ವಜನಿಕ ಸಂಘಟನೆಗಳು, ಕಾರ್ಮಿಕ ಸಂಘಟನೆ‌ಗಳು ಪಾಲ್ಗೊಂಡಿದ್ದವು.

ಆಂಧ್ರಪ್ರದೇಶ ಬಂದ್‌ಗೆ ಸರ್ಕಾರ ಕೂಡ ಬೆಂಬಲ ನೀಡುವುದಾಗಿ ಘೋಷಿಸಿದ್ದರಿಂದ ಆರ್‌ಟಿಸಿ ಬಸ್‌ಗಳು ಸ್ಥಗಿತಗೊಂಡಿದ್ದವು. ರಾಜ್ಯದ 128 ಡಿಪೋಗಳ ಬಸ್‌ಗಳು ರಸ್ತೆಗಿಳಿಯಲಿಲ್ಲ. ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿತ್ತು. ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.

ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಖಾಸಗಿ ವಾಹನಗಳು ಕೂಡ ಬಂದ್‌ಗೆ ಬೆಂಬಲಿಸಿದ್ದವು. ಕೆಲವು ಪ್ರದೇಶಗಳಲ್ಲಿ, ಖಾಸಗಿ ಲಾರಿ ಸಾರಿಗೆ ನಿರ್ವಾಹಕರು ಮತ್ತು ಆಟೋ ಯೂನಿಯನ್‌ಗಳು ಸಹ ಮುಷ್ಕರದಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಭದ್ರತಾ ಕ್ರಮಗಳನ್ನು ರೂಪಿಸಿದ್ದರು.

స్టీల్‌ప్లాంట్ ప్రైవేటీకరణకు వ్యతిరేకంగా వివిధ పార్టీలు నిరసనలు కార్యక్రమాలు నిర్వహిస్తున్నాయి.

ವಿಶಾಖಪಟ್ಟಣಂ ಉಕ್ಕು ಸಂರಕ್ಷಣಾ ಸಮಿತಿಯ ಕರೆಯ ಮೇರೆಗೆ ಆಚರಿಸಲಾದ ಬಂದ್‌ನಲ್ಲಿ, ಆಡಳಿತಾರೂಢ ವೈಎಸ್‌ಆರ್‌ಸಿಪಿ ಮತ್ತು ಮುಖ್ಯ ವಿರೋಧ ಪಕ್ಷದ ಟಿಡಿಪಿ ಜೊತೆಗೆ, ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು, ಕಾರ್ಮಿಕ ಸಂಘಗಳು, ಪತ್ರಕರ್ತರ ಸಂಘಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿ, ರ್‍ಯಾಲಿಗಳನ್ನು ಆಯೋಜಿಸಿದ್ದರು.

ಆಂಧ್ರಪ್ರದೇಶ ಎನ್‌ಜಿಒ ಸಂಘದ ಮುಖಂಡ ಎನ್.ಚಂದ್ರಶೇಖರ್ ರೆಡ್ಡಿ, ವಿಶಾಖಪಟ್ಟಣಂ ಉಕ್ಕಿನ ಉದ್ಯಮಕ್ಕಾಗಿ ಯಾವುದೇ ಹೋರಾಟಕ್ಕೆ ಸಿದ್ಧ ಎಂದು ಘೋಷಿಸಿದ್ದಾರೆ. ಎಪಿ ಎನ್‌ಜಿಒ ಸಂಘದೊಂದಿಗೆ ಪತ್ರಕರ್ತ ಸಂಘಗಳ ಮುಖಂಡರು ಕೂಡ ಬಂದ್‌ನಲ್ಲಿ ಭಾಗವಹಿಸಿದ್ದರು.

“ಸುಮಾರು 26,000 ಎಕರೆ ವಿಸ್ತೀರ್ಣದ ಕಾರ್ಖಾನೆ ಖಾಸಗೀಕರಣಗೊಳಿಸಿ 16,000 ಖಾಯಂ ನೌಕರರನ್ನು ಮತ್ತು 17,500 ಗುತ್ತಿಗೆ ಕಾರ್ಮಿಕರನ್ನು ಬೀದಿಗೆ ಹಾಕುವುದು ಸೂಕ್ತವಲ್ಲ. ಮತ್ತೊಂದು ಲಕ್ಷ ಜನರು ಈ ಕಾರ್ಖಾನೆಯಿಂದ ಪರೋಕ್ಷವಾಗಿ ಉದ್ಯೋಗದಲ್ಲಿದ್ದಾರೆ. ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಎನ್.ಚಂದ್ರಶೇಖರ್ ರೆಡ್ಡಿ ಹೇಳಿದ್ದಾರೆ.


ಇದನ್ನೂ ಓದಿ: ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...